ತುಮಕೂರು | ಮಾನಸಿಕ ರೋಗಕ್ಕೆ ಸಮಾಜ ಕಾರಣ : ಬಿ.ಎಸ್. ರಾಜಶೇಖರ್

Date:

ಹುಟ್ಟಿನಿಂದಲೇ ಯಾರೂ ಮಾನಸಿಕರೋಗಿಗಳಾಗಿರುವುದಿಲ್ಲ. ಅವರ ಸುತ್ತ ಮುತ್ತಲಿನ ಪರಿಸರ ಅವರನ್ನು ಮಾನಸಿಕ ರೋಗಿಯಾಗಿ ಪರಿವರ್ತಿಸುತ್ತದೆ ಎಂದು ಲಯನ್ಇಂಟರ್ ನ್ಯಾಷನಲ್ ಪಿ.ಎಂ.ಜಿ.ಎಫ್. ಸಂಸ್ಥೆಯ ಮುಖ್ಯಸ್ಥ ಬಿ.ಎಸ್. ರಾಜಶೇಖರ್ ಅಭಿಪ್ರಾಯಪಟ್ಟರು. 

ನಗರದ ಸ್ನೇಹ ಮನೋವಿಕಾಸ ಕೇಂದ್ರ, ಸೇಜಲ್ ನ್ಯೂ ಲೈಫ್ ಪೌಂಡೇಶನ್ ಹಾಗೂ ತುಮಕೂರು ವಿವಿಯ ಎಂಎಸ್ ಡಬ್ಲ್ಯೂ ವಿದ್ಯಾರ್ಥಿಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಪ್ರದೇಶವಾರು ಮಹಿಳಾ ಸಬಲೀಕರಣ ಉಪಕ್ರಮ -1 ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾನಸಿಕ ರೋಗಿಗಳಿಗೆ ಎರಡು ಹೊಲಿಗೆ ಯಂತ್ರವನ್ನು ಉಚಿತವಾಗಿ ವಿತರಿಸಿ ಮಾತಾನಾಡಿದ ಅವರು ಮಾನಸಿಕವಾಗಿ ಗೊಂದಲಕ್ಕೆ ಒಳಗಾದವರನ್ನು ಸರಿ ದಾರಿಗೆ ತರುವ ಕೆಲಸ ಅಷ್ಟು ಸುಲಭದಲ್ಲ. ಬಹಳಷ್ಟು ಸಂಯಮ ಇರಬೇಕಾಗುತ್ತದೆ. ಇಲ್ಲಿನ ವಾತಾವರಣ ಮಾನಸಿಕ ರೋಗಿಗಳು ಗುಣವಾಗಲು ಪೂರಕವಾಗಿದೆ. ಮಹಿಳಾ ಸಬಲೀಕರಣ ಉದ್ದೇಶದಿಂದ ಈ ಮನೋ ಕೇಂದ್ರಕ್ಕೆ ಎರಡು ಹೊಲಿಗೆ ಯಂತ್ರಗಳನ್ನು ನೀಡುತ್ತಿರುವುದು ಖುಷಿಯಾಗುತ್ತಿದೆ ಎಂದರು.

ಸ್ನೇಹ ಮನೋ ವಿಕಾಸ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. ಲೋಕೇಶ್ ಬಾಬು ಮಾತನಾಡಿ, ಮುಖ್ಯವಾಗಿ ಮಾನಸಿಕ ರೋಗಿಗಳು ಸಮಾಜದಿಂದ ನಗೆ ಪಟಾಲಿಗೆ ಗುರಿಯಾಗುತ್ತಾರೆ. ಅವರ ಮನೆಯವರು ಅವರನ್ನು ಪ್ರೀತಿಸಬೇಕು. ಆದರೆ ಮನೆಯವರೇ ಅವರನ್ನು ಹೀಯಾಳಿಸುತ್ತಾರೆ ಇದು ಸರಿಯಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಲಯನ್ ಇಂಟರ್ ನ್ಯಾಷನಲ್ ತಂಡದ ಜಿಲ್ಲಾ ಸಂಯೋಜಕರಾದ ರವಿಚಂದ್ರನ್, ಲಯನ್ಸ್ ನ ಮಹಿಳಾ ಸಬಲೀಕರಣ ಜಿಲ್ಲಾ ಮುಖ್ಯಸ್ಥರಾದ ಶಾರದಾ ವಿ ಮುಳಗುಂದ, ಸೇಜಲ್ ನ್ಯೂ ಲೈಫ್ ಪೌಂಡೇಶನ್ ಕಾರ್ಯದರ್ಶಿ ಡಾ. ಪದ್ಮಾಕ್ಷಿ ಲೋಕೇಶ್, ಲಯನ್ಸ್ ನ ಪ್ರಾದೇಶಿಕ ಕಾರ್ಯದರ್ಶಿಯಾದ ದೇವತ ಬಿ.ಎನ್, ಅಮೃತ ಹಾಗೂ ಕಾವ್ಯಶ್ರೀ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...