ತುಮಕೂರು | ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ‘ಡಿ’ ಗ್ರೂಪ್ ನೌಕರರೇ ಹಾಸ್ಟೆಲ್ ವಾರ್ಡನ್‌ಗಳು!

Date:

  • ಸಿಬ್ಬಂದಿ ಕೊರತೆ : ಕಲ್ಯಾಣವಾಗದ ಹಾಸ್ಟೆಲ್ ವಿದ್ಯಾರ್ಥಿಗಳ ಭವಿಷ್ಯ
  • ಅಧಿವೇಶನದಲ್ಲೂ ಸದ್ದು ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಕೊರತೆ

ತುಮಕೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ 713 ಜನ ಅಧಿಕಾರಿ-ಸಿಬ್ಬಂದಿ ಮಾಡಬೇಕಾದ ಕೆಲಸವನ್ನು ಕೇವಲ 285 ಜನ ಸಿಬ್ಬಂದಿಗಳು ನಿಭಾಯಿಸುತ್ತಿದ್ದಾರೆ ಎಂದರೆ ನೀವು ನಂಬಲೇಬೇಕು.

ಹೌದು. ಅಧಿಕಾರಿ ಹಾಗೂ ಸಿಬ್ಬಂದಿ ಕೊರತೆಯಿಂದ ಡಿ ಗ್ರೂಪ್ ಹುದ್ದೆಯಲ್ಲಿರುವ ವಾಚ್‌ಮನ್‌ಗಳು, ಅಡುಗೆಯವರು ಕೂಡ ಆಡಳಿತ ನಡೆಸುವಂತಹ ಪರಿಸ್ಥಿತಿ ತುಮಕೂರು ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ನಿರ್ಮಾಣವಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಹಾಯಕ ನಿರ್ದೇಶಕರುಗಳ ಕಚೇರಿ ಹಾಗೂ ಇಲಾಖೆ ನಡೆಸುತ್ತಿರುವ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಹಾಸ್ಟೆಲ್‌ಗಳಲ್ಲಿ ಎ,ಬಿ,ಸಿ ಮತ್ತು ಡಿ ವೃಂದದ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ಒಟ್ಟು 713 ಹುದ್ದೆಗಳಿಗೆ ಮಂಜೂರಾತಿ ಇದೆ. ಆದರೆ ಕೇವಲ 285 ಹುದ್ದೆ ಮಾತ್ರ ಭರ್ತಿಯಾಗಿದ್ದು ಬಾಕಿ 428 ಹುದ್ದೆಗಳು ಖಾಲಿಯಿವೆ. ಇನ್ನೂ ಕೂಡ ಭರ್ತಿ ಮಾಡಲು ಸರ್ಕಾರ ಆಸಕ್ತಿ ವಹಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಸುದ್ದಿ

ಗ್ರೂಪ್ ಬಿ ಯಲ್ಲಿ ಗ್ರೇಡ್ 2 ಸಹಾಯಕ ನಿರ್ದೇಶಕರು 2 ಹುದ್ದೆ, ಸಹಾಯಕ ಲೆಕ್ಕಾಧಿಕಾರಿ 1 ಹುದ್ದೆ, ಗ್ರೂಪ್ ಸಿ ಯಲ್ಲಿ ಕ.ಅ 1 ಹುದ್ದೆ, ವಾರ್ಡನ್ 40 ಹುದ್ದೆ, ಶಿಕ್ಷಕರು 9 ಹುದ್ದೆ ,ಬೆರಳಚ್ಚುಗಾರರು 5 ಹುದ್ದೆ, ದ್ವಿತೀಯ ದರ್ಜೆ ಸಹಾಯಕರು 2 ಹುದ್ದೆ, ಜೂನಿಯರ್ ವಾರ್ಡನ್ 6 ಹುದ್ದೆ, ಗ್ರೂಪ್ ಡಿ ಯಲ್ಲಿ 124 ಹುದ್ದೆ, ಅಡುಗೆ ಸಹಾಯಕರು 145 ಹುದ್ದೆ, ರಾತ್ರಿ ಕಾವಲುಗಾರರು 88 ಹುದ್ದೆ, ಜವಾನರು 4 ಹುದ್ದೆ ಒಟ್ಟು 428 ಹುದ್ದೆಗಳ ಕೊರತೆ ಇದೆ.

ಜಿಲ್ಲೆಯಲ್ಲಿರುವ 102 ಹಾಸ್ಟೆಲ್ ಗಳಲ್ಲಿ 98 ಜನ ವಾರ್ಡನ್ ಗಳ ಮಂಜೂರಾತಿ ಇದ್ದು ಕೇವಲ 58 ಜನ ವಾರ್ಡನ್ ಗಳು ಕಾರ್ಯನಿರ್ವಹಿಸುತ್ತಿದ್ದಾರೆ, ಒಬ್ಬ ವಾರ್ಡನ್ ಎರಡು ಮೂರು ಹಾಸ್ಟೆಲ್ ಗಳನ್ನ ನಿರ್ವಹಣೆ ಮಾಡುತ್ತಿದ್ದಾರೆ. ಕೆಲ ವಾರ್ಡನ್‌ಗಳನ್ನು ಜಿಲ್ಲಾ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಖಾಲಿ ಇರುವ ಕೆಲಸಗಳಿಗೆ ನಿಯೋಜಿಸಲಾಗಿದೆ. ವಾರ್ಡನ್‌ಗಳು ಖಾಲಿ ಇರುವ ಸ್ಥಳಕ್ಕೆ ಜೂನಿಯರ್ ವಾರ್ಡನ್‌ಗಳಿಗೆ ಹಾಸ್ಟೆಲ್ ನಿರ್ವಹಣೆಗೆ ನಿಯೋಜನೆ ಮಾಡಲಾಗಿದೆ. ಕೆಲ ಹಾಸ್ಟೆಲ್‌ಗಳಲ್ಲಿ ಡಿ ಗ್ರೂಪ್‌ನ ವಾಚ್‌ಮನ್‌ಗಳು ಅಡುಗೆಯವರನ್ನೂ ಸಹ ವಾರ್ಡನ್, ಜೂನಿಯರ್ ವಾರ್ಡನ್ ಹುದ್ದೆಗೆ ತಮ್ಮ ಸ್ವಂತ ವೇತನ ಶ್ರೇಣಿಯಲ್ಲಿ ಅರ್ಹವಲ್ಲದ ಹುದ್ದೆಗಳಿಗೆ ನಿಯೋಜನೆ ಮಾಡಲಾಗಿದೆ.

ಸಿಬ್ಬಂದಿ ಕೊರತೆ ನೀಗಿಸಲು ಸಚಿವರ ಆದೇಶ ಉಲ್ಲಂಘನೆ

2023ರಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಇಲಾಖೆಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ತಮಗೆ ನಿಗದಿ ಪಡಿಸಿದ ಮತ್ತು ಅರ್ಹತೆಯಿಲ್ಲದ ಹುದ್ದೆಯನ್ನ ಬಿಟ್ಟು ಮೇಲ್ಮಟ್ಟದ ಹುದ್ದೆಗಳನ್ನ ತಮ್ಮ ಸ್ವಂತ ವೇತನ ಶ್ರೇಣಿಯಲ್ಲಿ ಕರ್ತವ್ಯ ನಿರ್ವಹಿಸುವುದು ಅಶಿಸ್ತಿಗೆ ಕಾರಣವಾಗುವುದಲ್ಲದೇ, ಕಾರ್ಯಕ್ಷಮತೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟು ಮಾಡುತ್ತದೆ. ಅಲ್ಲದೆ ನೌಕರ ವರ್ಗದಲ್ಲಿ ಅಸಮಧಾನ ಕ್ಲೇಷವನ್ನುಂಟು ಮಾಡುವುದಲ್ಲದೆ ಇಲಾಖೆಯ ಸಮರ್ಪಕ ನಿರ್ವಹಣೆ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಎಂದಿದ್ದರು. ಈ ರೀತಿಯಾಗಿ ಅಧಿಕಾರಿ ಸಿಬ್ಬಂದಿಗಳನ್ನ ನಿಯೋಜಿಸುವುದು ಅಥವಾ ರಾಜಕೀಯ ಪ್ರಭಾವ ಬಳಸುವವರ ವಿರುದ್ದ ಶಿಸ್ತು ಕ್ರಮ ಜರುಗಿಸಲು ಸೂಚಿಸಿ ಸಚಿವರು ಆದೇಶಿಸಿದ್ದರು. ಆದರೆ ಇಲಾಖೆಯಲ್ಲಿನ ಸಿಬ್ಬಂದಿಗಳ ಕೊರತೆಯಿಂದ ಅಧಿಕಾರಿಗಳು ಸಚಿವರ ಆದೇಶವನ್ನೇ ಉಲ್ಲಂಘನೆ ಮಾಡಿ ಕಚೇರಿ, ಹಾಸ್ಟೆಲ್‌ಗಳ ನಿರ್ವಹಣೆ ಮಾಡಬೇಕಾದ ಅನಿವಾರ್ಯತೆ ಜಿಲ್ಲೆಯಲ್ಲಿ ಎದುರಾಗಿದೆ.

ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆಯಿಂದ ಕಚೇರಿಯಲ್ಲಿ ಸಮರ್ಪಕವಾಗಿ ಕೆಲಸ ಕಾರ್ಯಗಳು ನಡೆಯದೇ ಇರುವುದರಿಂದ ಅಧಿಕಾರಿಗಳು ಹಾಗೂ ಫಲಾನುಭವಿಗಳ ನಡುವೆ ವಾಗ್ವಾದಗಳು ನಡೆಯುತ್ತಿದ್ದು, ಕಚೇರಿಯ ಅಶಿಸ್ತಿಗೆ ಕಾರಣವಾಗ್ತಿದೆ. ಹಾಸ್ಟೆಲ್‌ಗಳಲ್ಲಿ ವಾರ್ಡನ್ ಹಾಗೂ ಸಿಬ್ಬಂದಿ ಕೊರತೆಯಿಂದ ವಿದ್ಯಾರ್ಥಿಗಳ ಮೇಲೆ ವಿವಿಧ ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿದೆ.

ನಿಯಮಗಳ ಪ್ರಕಾರ ಸಿನಿಯರ್ ವಾರ್ಡನ್ ಕೈಕೆಳಗೆ ಜೂನಿಯರ್ ವಾರ್ಡನ್ ಕರ್ತವ್ಯ ನಿರ್ವಹಿಸಬೇಕು. ಆದರೆ ವಾರ್ಡನ್‌ಗಳು ಖಾಲಿ ಇರುವ ಸ್ಥಳಕ್ಕೆ ಜೂನಿಯರ್ ವಾರ್ಡನ್‌ಗಳನ್ನೇ ಸೀನಿಯರ್ ವಾರ್ಡನ್ ಆಗಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು ಹಾಸ್ಟೆಲ್ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ.

ಮತ್ತೊಂದೆಡೆ, ಶೈಕ್ಷಣಿಕ ಅರ್ಹತೆಯಿಲ್ಲದ ವಾಚ್‌ಮನ್‌ಗಳು, ಅಡುಗೆಯವರನ್ನು ಜೂನಿಯರ್ ವಾರ್ಡನ್‌ಗಳ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದರಿಂದ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳು ಪಾಠ, ಪ್ರವಚನ, ಸುರಕ್ಷತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರ ಶೈಕ್ಷಣಿಕ ಗುಣಮಟ್ಟವೂ ಕುಂಠಿತವಾಗುತ್ತಿದೆ.

ಅಧಿವೇಶನದಲ್ಲಿ ಇಲಾಖೆ ಸಿಬ್ಬಂದಿ ಕೊರತೆ ಬಗ್ಗೆ ಪ್ರಸ್ತಾಪ

ಈ ಬಗ್ಗೆ 2023ರಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿಯನ್ನ ದಾಖಲಿಸಿಕೊಂಡು ಸಿಬ್ಬಂದಿ ಕೊರತೆಯನ್ನ ಸರಿಪಡಿಸುವಂತೆ ಸರ್ಕಾರಕ್ಕೆ ಚಾಟಿ ಬೀಸಿತ್ತು. ಆದರೂ ಸಹ ಸರ್ಕಾರ ಇಲಾಖೆಯ ಖಾಲಿ ಹುದ್ದೆಗಳನ್ನ ಭರ್ತಿ ಮಾಡದೇ ನಿರ್ಲಕ್ಷ್ಯ ತೋರುತ್ತಲೇ ಬಂದಿದೆ. ಇದೀಗ ಅಧಿವೇಶನದಲ್ಲಿಯೂ ಸಹ ಶಾಸಕರೂ ಒಕ್ಕೊರಲಿನಿಂದ ಇಲಾಖೆಯ ಪರವಾಗಿ ನಿಂತಿದ್ದು, ಸಮಸ್ಯೆಗಳನ್ನ ಬಗೆಹರಿಸುಂತೆ ಒತ್ತಾಯ ಮಾಡಿದ್ದಾರೆ.

ಸರ್ಕಾರ ಪರಿಶಿಷ್ಟರ ಕಲ್ಯಾಣಕ್ಕಾಗಿ ಹಲವಾರು ಯೋಜನೆಯಗಳನ್ನ ಜಾರಿಗೆ ತಂದಿದೆ. ಆದರೆ ಆ ಯೋಜನೆಗಳು ಫಲಾನುಭವಿಗಳಿಗೆ ತಲಪಲು ಅಗತ್ಯವಾಗಿ ಬೇಕಾದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿ/ಸಿಬ್ಬಂದಿ ಕೊರತೆ ಇದೆ.

ಎಚ್ ಸಿ ಮಹದೇವಪ್ಪ 1 1

ಮತ್ತೊಂದೆಡೆ, ರಾಜ್ಯದಲ್ಲಿ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗಕ್ಕಾಗಿ ಛಾತಕ ಪಕ್ಷಿಯಂತೆ ತುದಿಗಾಲಿನಲ್ಲಿ ಕಾದು ನಿಂತಿದ್ದಾರೆ. ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಕೆಲವರಿಗೆ ವಯೋಮಾನ ದಾಟುತ್ತಿದ್ದು, ವಿದ್ಯಾರ್ಹತೆ ಇದ್ದರೂ ಉದ್ಯೋಗದಿಂದ ವಂಚಿರಾಗುವ ಆತಂಕದಲ್ಲಿದ್ದಾರೆ.

ಸರ್ಕಾರ ಕಾಳಜಿ ವಹಿಸಿದರೆ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನ ಹೊಡೆದಂತೆ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ಮೂಲಕ ಪರಿಶಿಷ್ಟರ ಕಲ್ಯಾಣಕ್ಕೆ ಮುಂದಾಗಬಹುದಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಸರ್ಕಾರ ಶೀಘ್ರವಾಗಿ ಕ್ರಮ ಕೈಗೊಳ್ಳಲಿದೆಯೇ ಎಂದು ಕಾದುನೋಡಬೇಕಿದೆ.

WhatsApp Image 2024 02 22 at 5.42.38 PM
ಚಂದನ್ ಡಿ ಎನ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...