ತುಮಕೂರು | ಜಮೀನು ಮಾರಾಟ ನಿಲ್ಲಿಸಿ ಒಕ್ಕಲುತನ ಉಳಿಸಿ: ಆದಿ ಚುಂಚನಗಿರಿ ಶ್ರೀ ಕರೆ

Date:

ಗ್ರಾಮ ಹಾಗೂ ಕೃಷಿ ತೊರೆದು ನಗರದತ್ತ ಹೋಗುವ ಬದಲು ನಮ್ಮ ಒಕ್ಕಲುತನ ಉಳಿಸಿ ಬೆಳೆಸಿ ಧರ್ಮಾಚರಣೆ ಜೊತೆ ಸಮಾಜ ಕಟ್ಟುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಮೊದಲು ಜಮೀನು ಮಾರುವ ಪ್ರವೃತ್ತಿ ಬಿಡಬೇಕು ಎಂದು ಆದಿಚುಂಚನಗಿರಿ ಮಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಕರೆ ನೀಡಿದರು.

ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಸ್ ಕೊಡಗೀಹಳ್ಳಿ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪ ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಜಮೀನು ಮಾರಿ ನಗರ ಸೇರಿದ ಬಳಿಕ ಕೆಲ ಹಳ್ಳಿಗಳು ವೃದ್ಧಾಶ್ರಮದಂತೆ ಕಾಣುತ್ತಿವೆ. ಕೃಷಿ ನಡೆಸಲು ಹಿಂದೇಟು ಹಾಕುವ ಯುವ ಸಮುದಾಯ ಆಧುನಿಕತೆಗೆ ಜೋತು ಬಿದ್ದಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮಗಳಿಂದ ಆರಂಭವಾದ ಕೃಷಿ ದೇಶದ ಆರ್ಥಿಕ ಸುಸ್ಥಿತಿಗೆ ಕಾರಣವಾಗಿದೆ ಎಂಬುದು ಯುವ ಸಮುದಾಯ ಮನಗಾಣಬೇಕಿದೆ. ಕೃಷಿಯೇ ಅತ್ಯುತ್ತಮ ಉದ್ಯೋಗ ಎನಿಸುವ ಕಾಲ ಸನ್ನಿಹಿತವಾಗಿದೆ. ಈ ನಿಟ್ಟಿನಲ್ಲಿ ಜಮೀನು ಮಾರುವ ಚಿಂತನೆ ಬಿಟ್ಟು ಗ್ರಾಮೀಣ ಭಾಗದಲ್ಲಿ ಯುವಕರು ಉದ್ಯೋಗ ಸೃಷ್ಠಿ ಮಾಡಬೇಕು” ಎಂದು ಕರೆ ನೀಡಿದರು.

“ಕೃಷಿ ಶಿಕ್ಷಣ ಅವಶ್ಯವಾಗಿ ಬೇಕಿದೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೂಡಾ ಬಂದೇ ಬರುತ್ತದೆ. ಈ ನಿಟ್ಟಿನಲ್ಲಿ ಒಕ್ಕಲಿಗರು ಒಕ್ಕಲುತನ ಸಂಪ್ರದಾಯಬದ್ಧವಾಗಿ ಮುನ್ನಡೆಸುವುದೂ ಕೂಡಾ ಒಂದು ಧರ್ಮದ ಕೆಲಸ” ಎಂದರು.

“ಪ್ರತಿಯೊಂದು ಜೀವಿಯಲ್ಲಿ ಕಾಣುವ ನಾಲ್ಕು ಅವಶ್ಯವಾದ ಆಹಾರ, ನಿದ್ರೆ, ಭಯ ಹಾಗೂ ಮೈಥುನ ನಿಯಮಿತವಾಗಿ ಪ್ರಕ್ರಿಯೆ ನಡೆಯುತ್ತದೆ. ಹಾಗೆಯೇ ಬದುಕು ಕಟ್ಟಿಕೊಳ್ಳಲು ಅವಶ್ಯ ಉದ್ಯೋಗ ಆಯ್ಕೆ ಮಾಡಬೇಕಿದೆ. ಮೊದಲು ಕೃಷಿ ಪ್ರಧಾನ ನಮ್ಮ ದೇಶದಲ್ಲಿ ಇಂದಿಗೂ ಶೇ.70ರಷ್ಟು ಕೃಷಿಕ ವರ್ಗವಿದೆ. ಮನುಷ್ಯ ಜನ್ಮ ಮುಕ್ತಿಗಾಗಿ ಎಂಬ ನಂಬಿಕೆ ನಮ್ಮಲ್ಲಿದೆ. ಆ ಕಾರಣ ಮನುಷ್ಯತ್ವದ ಜೀವನ ಸಾಗಿಸಲು ಧಾರ್ಮಿಕಾಚರಣೆ ನಡೆಸಿ ನೆಮ್ಮದಿ ಕಾಣಬೇಕು” ಎಂದರು.

ಶಾಸಕ ಎಸ್ ಆರ್ ಶ್ರೀನಿವಾಸ್ ಮಾತನಾಡಿ, “ಸಂಬಂಧಕ್ಕೆ ಬೆಲೆ ಇಲ್ಲವಾದ ಈ ಕಾಲದಲ್ಲಿ ಅರ್ಧ ದಿನದ ಮದುವೆ ನಡೆಯುತ್ತಿದೆ. ಆದರೂ ಆಡಂಬರ ಮಾತ್ರ ಎಂದಿಗೂ ಬಿಟ್ಟಿಲ್ಲ. ಪ್ರತಿಷ್ಠೆ ಪ್ರದರ್ಶನ ಮಾಡುವ ಮದುವೆಗಳು ಎಂದಿಗೂ ಸರಳ ವಿವಾಹ ಆಗಲಾರದು. ಕಲ್ಯಾಣ ಮಂಟಪ ಗ್ರಾಮದಲ್ಲಿ ಉಪಯೋಗವಾಗಲಿ ಎಂಬ ಹಾರೈಕೆ ನಮ್ಮದು. ಆಧುನಿಕತೆ ಹಿಂದೆ ಓಡುವ ನಮ್ಮ ಇಂದಿನ ಸಮಾಜ ಕೇವಲ ತೋರಿಕೆಗೆ ಸೀಮಿತವಾಗುತ್ತದೆ. ನಮ್ಮ ಸಂಪ್ರದಾಯ, ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮಗಳಲ್ಲಿ ನಿರಂತರ ನಡೆಯಲಿ” ಎಂದು ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ; ಪ್ರಣಾಳಿಕೆ ಬಿಡುಗಡೆ

ವೇದಿಕೆಯಲ್ಲಿ ಮಂಗಳನಾಥ ಸ್ವಾಮೀಜಿ, ಮಾಜಿ ಶಾಸಕ ಎಚ್ ನಿಂಗಪ್ಪ, ಜೆಡಿಎಸ್ ಮುಖಂಡ ಬಿ ಎಸ್ ನಾಗರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ, ಯೋಜನಾಧಿಕಾರಿ ರಾಜೇಶ್, ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯ ಸಮಿತಿಯ ಎ ಗೋವಿಂದರಾಜು, ಕೆ ಎನ್ ವೆಂಕಟೇಗೌಡ, ಮುಖಂಡರಾದ ಗಿರೀಶ್, ಬಸವರಾಜು, ಪ್ರತಾಪ್, ವೆಂಕಟೇಶ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...