ತುಮಕೂರು | ಜನವರಿ 5 ರಂದು ಬರಗೂರರ ಮೀಮಾಂಸೆ ಕುರಿತ ವಿಚಾರ ಸಂಕಿರಣ

Date:

ನಾಡೋಜ ಪ್ರೊ.ಬರಗೂರು ಸ್ನೇಹ ಬಳಗದ ವತಿಯಿಂದ ಬರಗೂರು ಮೀಮಾಂಸೆ ಮತ್ತು ಬರಗೂರರಿಗೆ ತವರು ಜಿಲ್ಲೆಯ ಗೌರವ ಕುರಿತ ವಿಚಾರ ಸಂಕಿರಣವನ್ನು ಜ.5, 2025ರಂದು ತುಮಕೂರು ನಗರದ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬರಗೂರು ಮೀಮಾಂಸೆ ಕಾರ್ಯಕ್ರಮವನ್ನು ಹಂಪಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಉದ್ಘಾಟಿಸುವರು. ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ಅರುಣ ಜೋಳದ ಕೂಡ್ಲಗಿ ದಿಕ್ಸೂಚಿ ಭಾಷಣ ಮಾಡಲಿದ್ದು ಸಾಮಾಜಿಕ ಚಿಂತಕ ಕೆ.ದೊರೈರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ತುಮಕೂರು ವಿವಿ ಕುಲಸಚಿವೆ ನಾಹಿದ ಜಮ್ ಜಮ್, ಲೇಖಕಿ ಮಲ್ಲಿಕಾ ಬಸವರಾಜ್ ಭಾಗವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದು ಮಧ್ಯಾಹ್ನ 12 ಗಂಟೆಗೆ ಮೊದಲ ಗೋಷ್ಠಿ ನಡೆಯಲಿದ್ದು, ಬರಗೂರು ಸಾಹಿತ್ಯದಲ್ಲಿ ಸಾಮಾಜಿಕ-ಆರ್ಥಿಕ ಮೀಮಾಂಸೆ ವಿಷಯದ ಕುರಿತು ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಕಿರಣ್ ಗಾಜನೂರು, ಬರಗೂರು ಸಾಹಿತ್ಯದಲ್ಲಿ ಮಹಿಳಾ ಮೀಮಾಂಸೆ ವಿಷಯ ಕುರಿತು ಚಿಕ್ಕಮಗಳೂರು ಸರ್ಕಾರಿ ಕಾಲೇಜು ಪ್ರಾಂಶುಪಾಲೆ ಡಾ.ಪುಷ್ಪ ಭಾರತಿ ವಿಷಯ ಮಂಡಿಸುವರು. ಹಿರಿಯ ಪತ್ರಕರ್ತ ಗಂಗಾಧರ್ ಮೊದಲಿಯಾರ್ ಗೋಷ್ಠಿಯ ಅಧ್ಯಕ್ಷತೆ ವಹಿಸುವರು ಮತ್ತು ಬರಗೂರರ ಸಿನಿಮಾಗಳ ವಸ್ತು ಮೀಮಾಂಸೆ ಕುರಿತು ಮಾತನಾಡುವರು.

1000826147

ಮಧ್ಯಾಹ್ನ 2.40ಕ್ಕೆ ಎರಡನೇ ಗೋಷ್ಠಿ ನಡೆಯಲಿದ್ದು, ಕವಿತೆಯಲ್ಲಿ ಕಂಡ ಬರಗೂರು (ಬರಗೂರರನ್ನು ಕುರಿತ ಸ್ವರಚಿತ ಕವಿತೆಗಳ ವಾಚನ) ನಡೆಯಲಿದೆ. ಈ ಗೋಷ್ಠಿಯ ಆಶಯ ನುಡಿಗಳನ್ನು ಗಂಗಾವತಿ ಸರ್ಕಾರಿ ಕಾಲೇಜು ಪ್ರಾಂಶುಪಾಲ ಡಾ.ಮುಮ್ತಾಜ್ ಬೇಗಂ ಆಡುವರು. ಪ್ರಸಿದ್ದ ಲೇಖಕಿ ಬಾ.ಹ.ರಮಾಕುಮಾರಿ ಗೋಷ್ಠಿಯ ಅಧ್ಯಕ್ಷತೆ ವಹಿಸುವರು.

ಅಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭವಿದ್ದು, ಪ್ರೊ.ಬರಗೂರರಿಗೆ ತವರು ಜಿಲ್ಲೆಯ ಗೌರವ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಭಾಗವಹಿಸುವರು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಶುಭ ಹಾರೈಸುವರು. ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ಮತ್ತು ಕಸಾಪ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ಭಾಗವಹಿಸುವರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...