ತುಮಕೂರು | ನೀರಿನ ಸಮಸ್ಯೆ ಬಾರದಂತೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಸೂಚನೆ

Date:

 ಬೇಸಿಗೆ ಸಮೀಪಿಸುತ್ತಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಜಿಲ್ಲೆಯ ಪಾವಗಡ ತಾಲ್ಲೂಕು ನಾಗೇನಹಳ್ಳಿಗೆ ಬುಧವಾರ ಸಂಜೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಜನರಿಗೆ ನೀರು ಒದಗಿಸುವಲ್ಲಿ ನಿರ್ಲಕ್ಷತೆ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.  

ಗ್ರಾಮಸ್ಥರಿಂದ ಬೇಡಿಕೆ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ನಾಗೇನಹಳ್ಳಿ ಗ್ರಾಮದಲ್ಲಿರುವ ಶುದ್ಧ ನೀರಿನ ಘಟಕಕ್ಕೆ ಕಾಯಿನ್ ಪದ್ಧತಿಯನ್ನು ಅಳವಡಿಸಬೇಕೆಂದು ಗ್ರಾಮಸ್ಥರ ಮನವಿಯನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಗ್ರಾಮೀಣ ನೀರು ಸರಬರಾಜು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಸವಲಿಂಗಪ್ಪ ಅವರಿಗೆ ಕೂಡಲೇ ಕಾಯಿನ್ ಪದ್ಧತಿ ಅಳವಡಿಸಲು ಸೂಚನೆ ನೀಡಿದರು. 

1001078737

 ಗ್ರಾಮಗಳಿಗೆ ಪ್ರತೀ ದಿನ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಿದರಲ್ಲದೆ ರಸ್ತೆ ಬದಿಯಲ್ಲಿ ತಿಪ್ಪೆ, ಕಸದ ರಾಶಿಯನ್ನು ಕಂಡ ಅವರು ಗ್ರಾಮದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿರಬೇಕು. ನೈರ್ಮಲ್ಯತೆ ಕಾಪಾಡದಿದ್ದರೆ ಖಾಯಿಲೆಗಳಿಗೆ ಆಹ್ವಾನ ನೀಡಿದಂತೆ. ಅನೈರ್ಮಲ್ಯತೆಯಿಂದ ಜನ-ಜಾನುವಾರುಗಳಿಗೆ ರೋಗ-ರುಜಿನಗಳು ತಗಲುವ ಸಾಧ್ಯತೆ ಇರುತ್ತದೆ. ಜನವಸತಿ ಪ್ರದೇಶಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಿದರು. 

ನಂತರ ಪಾವಗಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಪಾವಗಡ ಪಟ್ಟಣದ ವ್ಯಾಪ್ತಿಯಲ್ಲಿ ಪ್ರತಿದಿನ ಕುಡಿಯುವ ನೀರಿನ ಸರಬರಾಜು ಮಾಡಬೇಕು. ಈಗಾಗಲೇ ತುಂಗಭದ್ರಾ ನೀರು ಪಾವಗಡದ ವ್ಯಾಪ್ತಿಗೆ ಹರಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲವೆಂಬ ಭರವಸೆ ಇದೆ ಎಂದು ತಿಳಿಸಿದರು. 

1001078739

ಪಾವಗಡ ಪುರಸಭೆಯ 23 ವಾರ್ಡುಗಳಿಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಕುಡಿಯುವ ನೀರು ಪೂರೈಸುವುದರಲ್ಲಿ ಲೋಪ ದೋಷ ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಜಾಫರ್ ಷರೀಫ್ ಅವರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ವರದರಾಜು, ಆರೋಗ್ಯಾಧಿಕಾರಿ ಶಂಷುದ್ದೀನ್, ಕಂದಾಯ ಇಲಾಖೆಯ ನಿರೀಕ್ಷಕರಾದ ರಾಜ್‌ಗೋಪಾಲ್ ಹಾಗೂ ನಾರಾಯಣಪ್ಪ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಇಂಜಿನಿಯರ್‌ಗಳು ಹಾಗೂ ಮತ್ತಿತರ ಅಧಿಕಾರಿಗಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...