ತುಮಕೂರು | ಹುಲಿ ಉಗುರು ಧರಿಸಿದ ಪ್ರಕರಣ; ಧನಂಜಯ ಗುರೂಜಿಗೆ ಸಂಕಷ್ಟ

Date:

ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಬಂಧನ ನಂತರ, ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯ ಶನಿಮಹಾತ್ಮ ದೇವಾಲಯದ ಅರ್ಚಕ ಧನಂಜಯ ಗುರೂಜಿಗೆ ಸಂಕಷ್ಟ ಎದುರಾಗಿದೆ.

ಬಸವೇಶ್ವರ ಮಠ ಸ್ಥಾಪಿಸಿ ಗುರೂಜಿಯಾಗಿರುವ ಅರ್ಚಕ. ಮಠದ ಸ್ವಾಮೀಜಿಯಾದ ಬಳಿಕ ಮೈ ತುಂಬಾ ಬಂಗಾರದ ಓಡವೆ ಧರಿಸುತ್ತಿದ್ದು, ಒಡವೆಗಳ ಜೊತೆಗೆ ಕೊರಳಿಗೆ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆಗಿದೆ. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿ, ಬಿದನಗೆರೆ ದೇವಾಲಯಕ್ಕೆ ತರೆಳಿ ಹುಲಿ ಉಗುರಿನ ಬಗ್ಗೆ ತನಿಖೆ ಕೈಗೊಂಡಿದ್ದು, ಕುಣಿಗಲ್ ವಲಯ ಅರಣ್ಯಾಧಿಕಾರಿ ಜಗದೀಶ್ ಅವರು ಧನಂಜಯಸ್ವಾಮಿಯ ಚಿನ್ನದ ಚೈನ್ ಗಳನ್ನ ಪರಿಶೀಲನೆ ನಡೆಸಿದ್ದಾರೆ.

ಅದು ಆರ್ಟಿಫಿಶಿಯಲ್ ತುಂಬಾ ದಿನಗಳಿಂದ ಹಾಕಿದ್ದರಿಂದ ಕಪ್ಪು ಬಣ್ಣಕ್ಕೆ ತಿರುಗಿತ್ತು. ಹೀಗಾಗಿ ಅದನ್ನ ಎಸೆದಿದ್ದೇನೆ ಎಂದು ಧನಂಜಯಸ್ವಾಮಿ ಅರಣ್ಯಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾರೆ. ಆದ್ರೆ, ಧನಂಜಯಸ್ವಾಮಿ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಜಿಲ್ಲಾ ಅರಣ್ಯಾಧಿಕಾರಿ ಅನುಪಮಾ, ಎಸೆದಿರುವ ಉಗುರಿನ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಟಿಫಿಶಿಯಲ್ ಉಗುರನ್ನ ಅವರಿಂದ ಪಡೆದು ಎಫ್ಎಸ್ಎಲ್ ಪರೀಕ್ಷೆಗೆ ಕಳಿಸಲಾಗುವುದು. ಒಂದು ವೇಳೆ ಇಂದು ಉಗುರು ಸಿಗದಿದ್ದರೆ, ಸರ್ಚ್ ವಾರಂಟ್ ಪಡೆದು ಹುಡುಕಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತ ಮೈ ಮೇಲೆ ಕೇಜಿ ಗಟ್ಟಲೆ ಬಂಗಾರ ಸುರಿದು ಕೊಳ್ಳುವ ವ್ಯಕ್ತಿ ಆರ್ಟಿಫಿಶಿಯಲ್ ಹುಲಿ ಉಗರನ್ನ ಹೇಗೆ ಧರಿಸುವುದಕ್ಕೆ ಸಾಧ್ಯ ಎಂದು ಸಾರ್ವಜನಿಕರಲ್ಲಿ ಚರ್ಚೆ ನಡೆದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...