ತುಮಕೂರು | ಅಹೋರಾತ್ರಿ ಧರಣಿಗೆ ಮಣಿದ ಜಿಲ್ಲಾಡಳಿತ; ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಗೆ ಸಂದ ಜಯ

Date:

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಯ 8 ದಿನಗಳ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿಗೆ ತುಮಕೂರು ಜಿಲ್ಲಾಡಳಿತ ಮಣಿದಿದ್ದು, ಎರಡು ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಿದ್ದರಿಂದ ಜೂನ್‌ 25ರಂದು ಪ್ರತಿಭಟನಾಕಾರರು ಧರಣಿಯನ್ನು ಕೈ ಬಿಟ್ಟಿದ್ದಾರೆ.

ಜೂನ್‌ 18ರಿಂದ ಹೋರಾಟ ಸಮಿತಿಯಿಂದ ಅಹೋರಾತ್ರಿ ಧರಣಿಯನ್ನು ಆರಂಭಿಸಿದ್ದರು. ಅಂದಿನ ರಾತ್ರಿ ಡಿಸಿ ಶುಭ ಕಲ್ಯಾಣ್ ಅವರು ಪ್ರತಿಭಟನಾಕಾರರ ಮನವೊಲಿಸುವಿಕೆಗೆ ಮುಂದಾದರೂ ಕೂಡಾ ಅವರು ಮಣಿದಿರಲಿಲ್ಲ. ಜಿಲ್ಲಾಧಿಕಾರಿಯವರು ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಿದ ಬಳಿಕ ಜೂ.25ರಂದು ಧರಣಿಯನ್ನು ಹಿಂಪಡೆದಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರಾತ್ರಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಯವರು ವಸತಿ ಹಕ್ಕು ವಂಚಿತರ ಬೇಡಿಕೆಗಳನ್ನು ಒಂದೊಂದಾಗಿ ಆಲಿಸಿ ಪರಿಹರಿಸುವ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯ ತುಮಕೂರು, ಮಧುಗಿರಿ ಹಾಗೂ ಕೊರಟಗೆರೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಗುಡಿಸಲು ಹಾಕಿಕೊಂಡು ವಾಸವಿರುವ ಬಡ ಜನರು ಸುಮಾರು ಮೂರು ತಲೆಮಾರುಗಳಿಂದ ವಾಸಿಸಲು ಮನೆಗಳಿಲ್ಲದೆ, ನಿವೇಶನಗಳಿಲ್ಲದೆ, ವ್ಯವಸಾಯ ಮಾಡಿ ಜೀವನ ನಡೆಸಲು ಭೂಮಿಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಭೂಮಿಗಾಗಿ ನಮೂನೆ 50, 53, 57ರಲ್ಲಿ ಸ್ಥಳೀಯ ಆಡಳಿತಕ್ಕೆ ಅರ್ಜಿ ಸಲ್ಲಿಸಿದ್ದು, ನಮ್ಮ ಅರ್ಜಿಗಳನ್ನು ಪರಿಗಣಿಸಿರುವುದಿಲ್ಲ. ಅರ್ಹ ಫಲಾನುಭವಿಗಳಿಗೆ ನಿವೇಶನ, ಸಾಗುವಳಿ ಚೀಟಿ, ಖಾತೆ, ಪಹಣಿ ಸೌಲಭ್ಯ ಕಲ್ಪಿಸಬೇಕು” ಎಂದು ಸಮಿತಿಯ ಸಂಚಾಲಕ ಹಂದ್ರಾಳ್ ನಾಗಭೂಷಣ್ ಸಭೆಗೆ ಮನವಿ ಮಾಡಿದರು.

“ತುಮಕೂರು ನಗರದ ಹೃದಯಭಾಗದಲ್ಲಿರುವ ಸರ್ಕಾರಿ ಚಿತ್ರಕಲಾ ಕಾಲೇಜಿಗೆ ಸ್ವಂತ ಕಟ್ಟಡವಿಲ್ಲದೆ ಮೂಲ ಸೌಕರ್ಯಗಳಿಲ್ಲದೆ ಪ್ರತಿ ವರ್ಷ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕ್ಷೀಣಿಸುತ್ತಿದ್ದು, ಪ್ರಸ್ತುತ ನಡೆಯುತ್ತಿರುವ ಕಾಲೇಜಿನ ನಿವೇಶನವನ್ನು ಸರ್ಕಾರಿ ಚಿತ್ರಕಲಾ ಕಾಲೇಜಿನ ಹೆಸರಿಗೆ ಖಾತೆ ಮಾಡಿಸಿಕೊಡಬೇಕು” ಎಂದು ಹೋರಾಟ ಸಮಿತಿ ಸಭೆಗೆ ಮನವಿ ಮಾಡಿತು.

ತುಮಕೂರು ತಾಲೂಕಿನ ಕೋರಾ ಹೋಬಳಿ ಶಂಭೋನಹಳ್ಳಿ ಗ್ರಾಮದ ವಾಸಿ ರಾಮಯ್ಯ ಅವರು ಸಾಗುವಳಿ ಚೀಟಿ, ಖಾತೆ, ಪಹಣಿಗಾಗಿ ಮನವಿ ಸಲ್ಲಿಸಿದ್ದು, ಪರಿಗಣಿಸಲು ತುರ್ತಾಗಿ ಕ್ರಮಕೈಗೊಳ್ಳಬೇಕೆಂದು ಸಭೆಗೆ ಮನವಿ ಮಾಡಲಾಯಿತು. ಅದೇ ರೀತಿ ಕೊರಟಗೆರೆ ತಾಲೂಕು ಓಬನಹಳ್ಳಿ, ಹೊಳವನಹಳ್ಳಿ, ನೀಲಗೊಂಡನಹಳ್ಳಿ, ಇರಕಸಂದ್ರ ಕಾಲೋನಿ, ಮತ್ತಿತರ ಗ್ರಾಮಗಳಲ್ಲಿ ವಾಸಿಸುತ್ತಿರುವ ಎಲ್ಲ ಸಮುದಾಯದ ಬಡ ಜನರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಸಭೆಗೆ ನಿವೇದಿಸಿತು.

ಹೋರಾಟ ಸಮಿತಿಯ ಮನವಿಗಳಿಗೆ ಸ್ಪಂದಿಸಿ ಮಾತನಾಡಿದ ಜಿಲ್ಲಾಧಿಕಾರಿ, “ಮಧುಗಿರಿ ತಾಲೂಕಿನಲ್ಲಿ 10 ತಿಂಗಳು ಕಳೆದರೂ ಆಶ್ರಯ ಸಮಿತಿ ಸಭೆಯನ್ನು ನಡೆಸಿಲ್ಲ. ಮುಂದಿನ ಜುಲೈ 5ರಂದು ಸಮಿತಿ ಸಭೆ ನಡೆಸಿ ನಿವೇಶನ ವಂಚಿತ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಪಟ್ಟಿ ಸಲ್ಲಿಸಬೇಕು” ಎಂದು ತಹಶೀಲ್ದಾರ್ ಸಿಬ್ಗತುಲ್ಲಾ ಹಾಗೂ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅವರಿಗೆ ನಿರ್ದೇಶನ ನೀಡಿದರು.

ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸ ಮಾಡುತ್ತಿರುವ ಸುಮಾರು 15 ಹಂದಿಜೋಗಿ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಅಮಲಾಪುರ ಗ್ರಾಮದಲ್ಲಿ 1 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು, ಈವರೆಗೂ ಅಭಿವೃದ್ಧಿ ಕಾರ್ಯ ಕೈಗೊಳ್ಳದೆ ಹಕ್ಕುಪತ್ರ ವಿತರಣೆ ಮಾಡಿಲ್ಲವೆಂದು ಹೋರಾಟ ಸಮಿತಿ ದೂರು ನೀಡಿದೆ. ಕೈಗೊಂಡ ಕ್ರಮದ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರನ್ನು ಪ್ರಶ್ನಿಸಿದಾಗ ಅಮಲಾಪುರದಲ್ಲಿ ಮಂಜೂರು ಭೂಮಿಯನ್ನು ಅಭಿವೃದ್ಧಿಪಡಿಸಲು ₹15 ಲಕ್ಷ ಅನುದಾನ ಒದಗಿಸಲು ರಾಜೀವ್‌ ಗಾಂಧಿ ವಸತಿ ಅಭಿವೃದ್ಧಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುದಾನ ಬಿಡುಗಡೆಯಾದ ಕೂಡಲೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳ ಅವಗಾಹನೆಗೆ ತಂದರು.

ಅಮಲಾಪುರದಲ್ಲಿ ತಾತ್ಕಾಲಿಕವಾಗಿ ಕಲ್ಪಿಸಿರುವ ವಿದ್ಯುತ್ ಸಂಪರ್ಕದಿಂದ ಹಾನಿ ಸಂಭವಿಸಬಹುದಾದ್ದರಿಂದ ಸೂಕ್ತ ಕ್ರಮಕೈಗೊಳ್ಳಲು ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಯವರ ಮನವೊಲಿಸಿದಾಗ ಶುಭ ಕಲ್ಯಾಣ್ ತಕ್ಷಣವೇ ಬೆಸ್ಕಾಂ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಒಂದು ದಿನದೊಳಗಾಗಿ ಸಮರ್ಪಕ ವಿದ್ಯುತ್ ಸಂಪರ್ಕಕ್ಕೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

“ನಿವೇಶನ ವಂಚಿತ ಅರ್ಹ ಬಡ ಫಲಾನುಭವಿಗಳಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಜಿಲ್ಲೆಯಲ್ಲಿ ಈವರೆಗೂ 2000 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಇದರಿಂದ ಸುಮಾರು 30,000 ನಿವೇಶನಗಳನ್ನು ಹಂಚಿಕೆ ಮಾಡಬಹುದಾಗಿದೆ. ಎಲ್ಲ ತಾಲೂಕಿನಲ್ಲಿ ಆಶ್ರಯ ಸಮಿತಿ ಸಭೆ ನಡೆಸಿ ಆಯ್ಕೆಯಾದ ಫಲಾನುಭವಿಗಳಿಗೆ ನಿಯಮಾವಳಿಯನ್ವಯ ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ ಪ್ರಭು ಮಾತನಾಡಿ, “ಈಗಾಗಲೇ ಬಡವರಿಗೆ ಹಂಚಿಕೆ ಮಾಡಲು ಗ್ರಾಮೀಣ ಪ್ರದೇಶದಲ್ಲಿ ಗುರುತಿಸಲಾದ ನಿವೇಶನಗಳನ್ನು ಅಭಿವೃದ್ಧಿಪಡಿಸಲು ನಗರ ಯೋಜನಾ ಇಲಾಖೆಗೆ ಜವಾಬ್ದಾರಿ ವಹಿಸಲಾಗಿದೆ. ಸುಸಜ್ಜಿತ ಬಡಾವಣೆಗಳಾಗಿ ಅಭಿವೃದ್ಧಿಪಡಿಸಿದ ನಂತರ ಅರ್ಹರಿಗೆ ಹಕ್ಕುಪತ್ರ ನೀಡಲಾಗುವುದು” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಮಾತನಾಡಿ, “ಪ್ರತಿಭಟನೆ ನಡೆಸುವವರು ಮಕ್ಕಳು-ಮರಿ, ಸಾಕು ಪ್ರಾಣಿಗಳನ್ನು ಪ್ರತಿಭಟನಾ ಸ್ಥಳಕ್ಕೆ ಕರೆತರುವುದನ್ನು ಕಾನೂನು ಪ್ರಕಾರ ಅಪರಾಧವೆಂದು ಪರಿಗಣಿಸಲಾಗುತ್ತದೆ. ಯಾವುದೇ ಪ್ರತಿಭಟನಾಕಾರರು ತಮ್ಮೊಂದಿಗೆ ಮಕ್ಕಳು ಹಾಗೂ ಪ್ರಾಣಿಗಳನ್ನು ಕರೆತಂದರೆ ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತದೆ” ಎಂದು ಹೋರಾಟ ಸಮಿತಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಎಲ್ಲ ತಹಶೀಲ್ದಾರರು,  ಉಪವಿಭಾಗಾಧಿಕಾರಿಗಳು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು. ಸಂಜೆಗತ್ತಲಾಗಿದ್ದರಿಂದ ಪ್ರತಿಭಟನೆ ಹಿಂಪಡೆದವರು ಸುರಕ್ಷಿತವಾಗಿ ಮನೆಗೆ ತೆರಳಲು ಜಿಲ್ಲಾಡಳಿತದಿಂದ ಸಾರಿಗೆ ವ್ಯವಸ್ಥೆ ಕಲ್ಪಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ನಿವೇಶನ-ಹಕ್ಕುಪತ್ರದ ಹಕ್ಕಿಗಾಗಿ ಹೋರಾಟ; ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ

ಬೇಡಿಕೆಗಳನ್ನು ಈಡೇರಿಸಿರುವ ಜಿಲ್ಲಾಡಳಿತಕ್ಕೆ ಅಭಿನಂದನೆ ತಿಳಿಸಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಯ ಹಂದ್ರಾಳು ನಾಗಭೂಷಣ್, “ಈ ಕುರಿತು ಈ ದಿನ.ಕಾಮ್‌ ‘ಅಲೆಮಾರಿಗಳ ಅಳಲು; ಮನೆ ಕೊಡಿ ಅಥವಾ ವಿಷ ಕೊಟ್ಟು ಸಾಯಿಸಿ’ ಎಂಬ ಶೀರ್ಷಿಕೆ ಅಡಿ ವಿಡಿಯೋ ಸುದ್ದಿ ಪ್ರಸಾರ ಮಾಡಿತ್ತು. ಅಹೋರಾತ್ರಿ ಧರಣಿ ಕುರಿತು ವಿಸ್ತೃತ ವರದಿಯನ್ನೂ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿಯಲ್ಲಿಯೂ ನಮ್ಮ ಆಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಯಶಸ್ವಿಗೆ ಕಾರಣವಾಗಿದೆ” ಎಂದು ಅಭಿನಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...