ತುಮಕೂರು | ಒಳಮೀಸಲಾತಿ ಪಾದಯಾತ್ರೆ ಮಾ.21ಕ್ಕೆ ಬೆಂಗಳೂರು ತಲುಪಲಿದೆ : ಭಾಸ್ಕರ್ ಪ್ರಸಾದ್

Date:

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಹರಿಹರದಿಂದ ಪ್ರಾರಂಭಗೊಂಡಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 21ರಂದು ಬೆಂಗಳೂರು ತಲುಪಲಿದೆ ಎಂದು ಒಳಮೀಸಲಾತಿ ಹೋರಾಟಗಾರ ಭಾಸ್ಕರ್ ಪ್ರಸಾದ್ ತಿಳಿಸಿದರು.

ತುಮಕೂರು ನಗರದಲ್ಲಿ ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ ‘ಒಳಮೀಸಲಾತಿ ಹೋರಾಟದ ಮುಂದಿನ ನಡೆಗಳ ಬಗ್ಗೆ ಸಭೆ’ ನಡೆಸಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದರು ಸಹ ಯಾವುದೇ ಸರ್ಕಾರ ಇದುವರೆಗೂ ಒಳಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಕೈಗೊಳ್ಳದೆ ನಮ್ಮ ಸಮುದಾಯವನ್ನು ಕಡೆಗಡನೆ ಮಾಡುತ್ತಿವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಹುವುದಕ್ಕೆ ನಮ್ಮ ಸಮುದಾಯದ ಮತಗಳೇ ಮಹುಮುಖ್ಯವಾಗಿದ್ದರೂ, ಸಿದ್ದರಾಮಯ್ಯನವರ ಸರ್ಕಾರ ಒಳಮೀಸಲಾತಿ ಜಾರಿಗೆ ಬಗ್ಗೆ ಹಿಂದೇಟು ಹಾಕುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಸರ್ಕಾರವನ್ನು ಟೀಕಿಸಿದರು. 

1001173794

ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಗಳಾಗಿರುವ ಸಮುದಾಯದ ನಾಯಕರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತಬೇಕು. ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಇದು ಕಡೆಯ ಹೊರಟವಾಗಿದ್ದು, ಒಳಮೀಸಲಾತಿ ಜಾರಿಗೆ ಮಾಡದಿದ್ದಲ್ಲಿ ವಿಧಾನ ಸೌಧದ ಮುಂದೆ ಅತ್ಮಹುತಿಗಳಾಗುತ್ತವೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲ ಹರಿರಾಮ್ ಮಾತನಾಡಿ ಕಳೆದ 35 ವರ್ಷಗಳ ಹೋರಾಟಕ್ಕೆ ಇದುವರೆಗೂ ಒಂದು ತಾರ್ಕಿಕ ಅಂತ್ಯ ಕಾಣದಿರುವುದು ಶೋಚನೀಯ ಸಂಗತಿ ಮತ್ತು ದಲಿತ ಸಮುದಾಯಗಳ ಮೇಲೆ ಸರ್ಕಾರಗಳಿಗಿರುವ ಆಸಕ್ತಿ ಎದ್ದು ಕಾಣುತ್ತಿದೆ. ಅಂಬೇಡ್ಕರ್ ಅವರ ಸಂವಿಧಾನವನ್ನು ಅನುಸರಿಸುತ್ತಿರುವ ದೇಶದಲ್ಲಿ  ಬದುಕನ್ನು ಕಟ್ಟಿ ಕೊಳ್ಳುವ ಸಲುವಾಗಿ ಭಿಕ್ಷೆ ಬೇಡುವ ಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಳಮೀಸಲಾತಿ ಒಂದು ಜಾತಿಗೆ ಸೀಮಿತವಲ್ಲ ಒಳಮೀಸಲಾತಿ ಕೇವಲ ಒಂದು ಜಾತಿಗೆ ಸೀಮಿತ ಎಂದು ಅನೇಕರು ಅಪಪ್ರಚಾರ ಮಾಡುತ್ತಿದ್ದು, ಒಳಮೀಸಲಾತಿ ಜಾರಿಯಿಂದ ಪರಿಶಿಷ್ಟ ಜಾತಿಯ ಮಾದಿಗ, ಹೊಲೆಯ, ಲಂಬಾಣಿ, ಕೊರಚ , ಕೊರಮ ಸೇರಿದಂತೆ 101 ಉಪಜಾತಿಗಳಿಗೆ ಅನುಕೂಲವಾಗಲಿದೆ. ಆಯಾ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಲಿದೆ. ಆದರೆ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಜಾತಿ ಜಾತಿಗಳ ನಡುವೆ ಅಪಪ್ರಚಾರದ ಮೂಲಕ ವಿಷ ಬೀಜ ಬಿತ್ತುತ್ತಿವೆ. ಪರಿಶಿಷ್ಟ ಸಮುದಾಯಗಳು ಎಚ್ಚೆತ್ತುಕೊಂಡು ಸರ್ಕಾರದ ಕಣ್ತೆರೆಸಬೇಕು ಎಂದು ತಿಳಿಸಿದರು.

1001173793

ಹೋರಾಟಗಾರರು ಮತ್ತು ಹಿರಿಯ ವಕೀಲ ಅರುಣ್ ಕುಮಾರ್ ಮಾತನಾಡಿ, ಒಳಮೀಸಲಾತಿ ಹೋರಾಟ ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ಈ ಬಾರಿ ಒಳಮೀಸಲಾತಿ ಜಾರಿ ಮಾಡಿಸಲೇ ಬೇಕು. ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರಿಂ ಕೋರ್ಟ್ ಆದೇಶ ನೀಡಿದ್ದರು, ರಾಜ್ಯ ಸರ್ಕಾರ ಕುಂಟು ನೆಪಗಳನ್ನು ಹೇಳುತ್ತಾ ಕಾಲಹರಣ ಮಾಡುತ್ತಿದೆ. 2001ರ ಸದಾಶಿವ ಆಯೋಗದ ಜಾತಿಗಣತಿ ಪ್ರಕಾರ ಮತ್ತು 2011ರ ಮಧುಸ್ವಾಮಿ ಸಮಿತಿಯ ಜಾತಿಗಣತಿ ಪ್ರಕಾರ ಸರ್ಕಾರ ತಡಮಾಡದೆ ತಕ್ಷಣವೇ ಒಳಮೀಸಲಾತಿಯನ್ನು ಜಾರಿ ಗೊಳಿಸಿ ತಳ ಸಮುದಾಯಗಳ ಋಣ ತೀರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅನೇಕ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...