ತುಮಕೂರು | ನ್ಯಾ. ಉಂಡಿ ಮಂಜುಳಾ ಶಿವಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ; ಬಾಣಂತಿ ಬಿಡುವ ಗುಡಿಸಲು ನಾಶ

Date:

ಮೂಢನಂಬಿಕೆಯಿಂದ ಬಾಣಂತಿ ಹಾಗೂ ಹಸುಗೂಸನ್ನು ಊರಿನ ಹೊರಗಿನ ಗುಡಿಸಲಿನಲ್ಲಿ ಇಡುವುದು ಅಕ್ಷಮ್ಯ ಹಾಗೂ ಕಾನೂನು ಬಾಹಿರ ಎಂದು ನ್ಯಾಯಮೂರ್ತಿ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರ ಹೋಬಳಿ ಗೊಲ್ಲರಹಟ್ಟಿಯ ಊರಿನ ಹೊರಗೆ ಇದ್ದ ಬಾಣಂತಿ ಬಿಡುವ ಗುಡಿಸಲನ್ನು ಪೊಲೀಸರೊಂದಿಗೆ ಸೇರಿ ಕಾರ್ಯಾಚರಣೆ ನಡೆಸಿ ನಾಶಪಡಿಸಿದ ನಂತರ ಅವರು ಮಾತನಾಡಿದರು.

“ಗೊಲ್ಲ ಸಮುದಾಯ ಮೂಢನಂಬಿಕೆಯನ್ನೇ ಸಂಪ್ರದಾಯ ಎಂದು ಭಾವಿಸಿರುವುದು ದುರದೃಷ್ಟಕರ. ಬಾಣಂತಿ – ಮಕ್ಕಳನ್ನು ಊರಿನ ಹೊರಗೆ ಇಡುವುದು ಅಮಾನವೀಯ, ಸಮುದಾಯವು ಮಾನವೀಯ ನೆಲೆಯಲ್ಲಿ ಯೋಚಿಸಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಧುನಿಕ ಜಗತ್ತಿನಲ್ಲಿ ಇನ್ನೂ ಮೂಢನಂಬಿಕೆ ಆಚರಣೆ ತರವಲ್ಲ. ಹಳೆಯ ಸಂಪ್ರದಾಯವನ್ನೇ ನಂಬಿ ಕೂರುವುದು ಒಳಿತಲ್ಲ. ಗೊಲ್ಲ ಸಮುದಾಯ ಮೂಢನಂಬಿಕೆ ತೊರೆದು ಅಭಿವೃದ್ಧಿ ಹೊಂದುವತ್ತ ಚಿಂತಿಸಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು” ಎಂದು ಕಿವಿಮಾತು ಹೇಳಿದರು.

“ಸಮುದಾಯದ ಸುಶಿಕ್ಷಿತರು ಇಂತಹ ಮೂಢನಂಬಿಕೆಗಳ ಬಗ್ಗೆ ಸಮುದಾಯದವರಲ್ಲಿ ಜಾಗೃತಿ ಮೂಡಿಸಬೇಕಿದೆ. ತಾಲೂಕಿನ ಯಾವುದೇ ಭಾಗದಲ್ಲಿ ಇಂತಹ ಪ್ರಕರಣ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ನ್ಯಾಯಮೂರ್ತಿ ಉಂಡಿ ಮಂಜುಳಾ ಶಿವಪ್ಪ ಎಚ್ಚರಿಸಿದರು.

“ಇಂತಹ ಪದ್ಧತಿ ಹೆಣ್ಣಿನ ಮೇಲೆ ನಡೆಸುವ ಶೋಷಣೆಯಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜನಕಲ್ಯಾಣ ಯೋಜನೆ; ಕೈಪಿಡಿ ರಚನೆಗೆ ನ್ಯಾ. ರಾಜೇಶ್ವರಿ ಎನ್. ಹೆಗಡೆ ಸೂಚನೆ

ಈ ಬಗ್ಗೆ ಗ್ರಾಮಸ್ಥರು ಪ್ರತಿಕ್ರಿಯಿಸಿದ್ದು, “ಹಲವು ತಲೆಮಾರುಗಳಿಂದ ರೂಢಿಸಿಕೊಂಡು ಬಂದಿರುವ ಪದ್ಧತಿಯನ್ನು ಏಕಾಏಕಿ ಬಿಡಲು ಕಷ್ಟವಾದರೂ ಮುಂದೆ ಇಂತಹ ಪ್ರಕರಣ ನಡೆಯದಂತೆ ಎಚ್ಚರ ವಹಿಸುತ್ತೇವೆ. ಗೊಲ್ಲರ ಹಟ್ಟಿಗಳಲ್ಲಿ ಕಾನೂನು ಅರಿವು ಮೂಡಿಸಿದರೆ ಇಂತಹ ಪ್ರಕರಣ ಕಡಿಮೆಯಾಗಲು ಸಾಧ್ಯವಾಗಲಿದೆ” ಎಂದು ಕೋರಿದರು.

ಕಾರ್ಯಾಚರಣೆಯಲ್ಲಿ ಗುಬ್ಬಿ ಪಿಎಸ್‌ಐ ದೇವಿಕಾ ರಾಣಿ ಸೇರಿದಂತೆ ಪೊಲೀಸ್ ಸಿಬ್ಬಂದಿ, ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...