ತುಮಕೂರು | ಸರ್ಕಾರಿ ಶಾಲೆ ಆಕರ್ಷಣೀಯಗೊಳಿಸುವ ಹೊಣೆಗಾರಿಕೆ ಹಿರಿಯ ವಿದ್ಯಾರ್ಥಿಗಳ ಮೇಲಿದೆ : ದೊಡ್ಡೇರಿಯ ಸಿದ್ದರಾಮಣ್ಣ

Date:

ನಮ್ಮೂರ ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡು, ಸ್ಥಳೀಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಈ ಶಾಲೆಯ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಗಳು ಸಂಘಟಿತರಾಗಬೇಕು ಎಂದು ಶಾಲೆಯ ಹಿರಿಯವಿದ್ಯಾರ್ಧಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ದೊಡ್ಡೇರಿ ಸಿದ್ದರಾಮಣ್ಣ ಕರೆಕೊಟ್ಟರು. 

ತುಮಕೂರು ತಾಲ್ಲೂಕು ಬೆಳ್ಳಾವಿ ಕರ್ನಾಟಕ ಪಭ್ಲಿಕ್ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಿರಿಯ ವಿದ್ಯಾರ್ಥಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಾವೆಲ್ಲಾ ಓದುವಾಗ ನಡೆದುಕೊಂಡು ಬಂದು ಶಾಲೆಯಲ್ಲಿ ಓದುತ್ತಿದ್ದೆವು. ತಂದೆ ತಾಯಿಗೆ ಮನೆಕೆಲಸದಲ್ಲಿ ಕೈ ಜೋಡಿಸುತ್ತಿದ್ದೆವು. ಈಗಿನ ಮಕ್ಕಳಲ್ಲಿ ಆ ಭಾಂಧವ್ಯ ಕುಸಿಯುತ್ತಿದೆ. ಇಂತಹ ಮಕ್ಕಳಿಗೆ ನೀತಿ ಶಿಕ್ಷಣ ಪಠ್ಯವಾಗಬೇಕು. ಈ ಶಾಲೆಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಉನ್ನತಹುದ್ದೆಯಲಿದ್ದು, ಇಂತಹವರು ಈಗಿನ ಶಾಲೆಯಲ್ಲಿ ಓದುವ ಮಕ್ಕಳ ಕಲಿಕೆಗೆ ನೆರವಾಗಬೇಕಿದೆ ಎಂದರು.

ಕುವೆಂಪು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸಿದ್ದಲಿಂಗಪ್ಪ ಮಾತನಾಡಿ ಸರ್ಕಾರ ದಾನಿಗಳ ಹಾಗೂ ಹಿರಿಯವಿದ್ಯಾರ್ಥಿಗಳ ನೆರವಿನಲ್ಲಿ ಶಾಲೆಯ ಕಲಿಕಾ ಪರಿಸರ ಸುಧಾರಿಸಲು ಸರ್ಕಾರ ಯೋಜನೆ ರೂಪಿಸಿದೆ. ಈ ಅಯೋಚನೆಗೆ ನಮ್ಮ ಶಾಲೆ ಬಗ್ಗೆ ಪ್ರತಿಯೊಬ್ಬರು ಗೌರವ ಇಟ್ಟುಕೊಳ್ಳಬೇಕು. ಕುವೆಂಪು ಶಾಲೆ ಶತಮಾನ ಪೂರೈಸಿದೆ. ಇಲ್ಲಿ ಕಲಿತವರು ರಾಜ್ಯದಲ್ಲಿ ಮಾದರಿ ವಿದ್ಯಾರ್ಥಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಿನ ಮಕ್ಕಳು ದೂರಕ್ಕೆ ಹೋಗಿ ಅಲೆದು ತಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಮಾಡಿಕೊಳ್ಳದೆ, ಈ ಶಾಲೆಯಲ್ಲಿಯೇ ಓದು ಮುಂದುವರಿಸಿ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಶಿಕ್ಷಕ ಪ್ರಸಾದ್ ಮಾತನಾಡಿ ನಮ್ಮಿಂದಲೇ ದುಬಾರಿ ಶುಲ್ಕ ಪಡೆಯುವ ಖಾಸಗಿ ಶಾಲೆಗಳು ತಮ್ಮ ಆಕರ್ಷಣೀಯ ಕಟ್ಟಡ ಕಟ್ಟಿಸಿಕೊಂಡು, ವಿದ್ಯಾರ್ಥಿಗಳನ್ನು ಸೆಳೆಯುತ್ತಾರೆ. ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಕೈಜೋಡಿಸಿ ನಮ್ಮ ಸರ್ಕಾರಿ ಶಾಲೆಯನ್ನೇ ಅಭಿವೃದ್ಧಿಗೊಳಿಸಿದರೆ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲು ಸಾಧ್ಯವಿದೆ ಎಂದರು. 

ಕಾರ್ಯಕ್ರಮದಲ್ಲಿ  ಪ್ರಾಚಾರ್ಯ ಎಂ. ಪತೇಅಹಮದ್, ಹಿರಿಯ ವಿದ್ಯಾರ್ಥಿಗಳಾದ ಚಿಕ್ಕ ಬೆಳ್ಳಾವಿ ಶಿವಣ್ಣ, ಜಯಕುಮಾರ್, ಮಹೇಶ್, ಪ್ರಸಾದ್, ಚೇತನ್, ಹನುಮಂತರಾಜು, ಮಲ್ಲಿಕಾರ್ಜುನ್, ಉಪನ್ಯಾಸಕರಾದ ಬಿ ಎನ್ ಶಿವಕುಮಾರ್, ಎಂಬಿ ಸುಜಾತ, ಟಿ ಹೆಚ್. ಪಂಚಾಕ್ಷರಯ್ಯ, ಶಿಕ್ಷಕರಾದ ಟಿ ಎನ್ ಶಾಂತಕುಮಾರಿ, ನಂಜುಂಡರಾವ್, ಸುಮಯಾ ತರನಂ, ವಿಜಯಮ್ಮ, ಮಂಜುಳಾ ವಿಭೂತಿಮಠ್, ಮೋಹನ್ ರಾಜ್, ರೇಣುಕಾ ಇತರರು ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...