ತುಮಕೂರು | ಹಿಂದಿ ಎಂಬ ಘಟಸರ್ಪ ಕನ್ನಡವನ್ನು ನುಂಗಲು ಬಿಡಬಾರದು : ಅಗ್ರಹಾರ ಕೃಷ್ಣಮೂರ್ತಿ

Date:

ಸ್ವಘೋಷಿತ ರಾಷ್ಟ್ರೀಯ ಭಾಷೆ ಎಂದು ಹೇಳಲಾಗುವ ಹಿಂದಿ ಎಂಬ ಘಟಸರ್ಪವು ಕನ್ನಡವನ್ನು ನುಂಗಲು ಬಿಡಬಾರದು ಎಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಅಗ್ರಹಾರ ಕೃಷ್ಣಮೂರ್ತಿ ಕರೆ ಕೊಟ್ಟರು.

ತುಮಕೂರು ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತದಲ್ಲಿ 11 ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ಪಡೆದರೂ ಸಹ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಬಿಂಬಿಸಲಾಗುತ್ತಿದೆ. ಎಲ್ಲರಿಗೂ ಅವರವರ ಮಾತೃಭಾಷೆ ಮಹತ್ವವಾದುದು. ನಮ್ಮ ಭಾಷೆಯನ್ನು ನಾವು ಪ್ರೀತಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದು ತಿಳಿಸಿದರು.

1000714212

ಬಹು ಭಾಷಿಕ, ಬಹು ಸಂಸ್ಕೃತಿ, ಬಹು ಸಂಪ್ರದಾಯಗಳನ್ನು ಹೊಂದಿರುವ ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ಸಾವಿರಾರು ವರ್ಷಗಳ ಇತಿಹಾಸವಿದ್ದು, ನಾಡು-ನುಡಿಗಾಗಿ ಹೋರಾಡಿದ ಹೋರಾಟಗಾರರ ಶ್ರಮವನ್ನು ವ್ಯರ್ಥ ಮಾಡಬಾರದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿವ್ಯಕ್ತಿಗೆ ಧಕ್ಕೆ

ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಲೇಖಕರು, ಸಾಹಿತಿಗಳು, ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು ಅಭಿವ್ಯಕ್ತಿಗೊಳಿಸಲೂ ಸಹ ತೊಡಕುಗಳು ಉಂಟಾಗುತ್ತಿವೆ ಎಂದು ಸಮ್ಮೇಳನಾಧ್ಯಕ್ಷರು ಬೇಸರ ವ್ಯಕ್ತಪಡಿಸಿದರು. ಕನ್ನಡ ಭಾಷೆಯಲ್ಲಿ ಇತರೆ ಭಾಷೆಗಳಿಗಿಂತ ಹೆಚ್ಚು ವೈಚಾರಿಕತೆ ಮತ್ತು ವೈಜ್ಞಾನಿಕತೆ ಬಗ್ಗೆ ಸಾಹಿತ್ಯಗಳು ರಚನೆಯಾಗಿರುವುದೇ ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದರು.

1000714201

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಮರಣ ಸಂಚಿಕೆ ಕಲ್ಪ ಸಂಪದ ಪುಸ್ತಕವನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪಾಲಿಕೆ ಆಯುಕ್ತೆ ಅಶ್ವಿಜ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಗೌರವ ಕಾರ್ಯದರ್ಶಿ ಡಾ. ಡಿ.ಎನ್.ಯೋಗೀಶ್ವರಪ್ಪ, ಡಾ. ಕಂಟಲಗೆರೆ ಸಣ್ಣಹೊನ್ನಯ್ಯ, ಮುರುಳಿಕೃಷ್ಣಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಚೇತನ್, ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಚಾಂದು, ರಾಜಶೇಖರ್, ಜಿಲ್ಲೆಯ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

1000714192

ಕಾರ್ಯಕ್ರಮಕ್ಕೂ ಮುನ್ನ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಪರಿಷತ್ತಿನ ದ್ವಜಾರೋಹಣವನ್ನು ನೆರವೇರಿಸಿದರು. ನಗರದ ಬಿಜಿಎಸ್ ವೃತ್ತದಿಂದ ಗಾಜಿನ ಮನೆಯವರೆಗೆ ಸಮ್ಮೇಳಾನಾಧ್ಯಕ್ಷರಾದ ಅಗ್ರಹಾರ ಕೃಷ್ಣಮೂರ್ತಿ ದಂಪತಿಗಳನ್ನು ವಿವಿಧ ಕಲಾ ತಂಡಗಳಿಂದ ಮೆರವಣಿಗೆಯ ಮೂಲಕ ಕರೆತರಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...