ತುಮಕೂರು | ಯುವಜನರ ಚಿಂತನೆ ಸಮಾಜದ ಅಭಿವೃದ್ಧಿಯತ್ತ ಇರಬೇಕು : ಡಾ. ಎಂ.ವೆಂಕಟೇಶ್ವರಲು

Date:

ಯುವ ಜನತೆಯ ಚಿಂತನೆ ಮತ್ತು ಸಂಶೋಧನಾ ಮನೋಭಾವ ದೇಶವನ್ನು ಅಭಿವೃಧಿಯತ್ತ ಕೊಂಡೊಯ್ಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕಿದೆ ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು. 

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದಂತಹ “ಇನ್‌ಸ್ಪಿರೋ 2025” ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸಮಾಜದದ ಬದಲಾವಣೆಗೆ ಒಂದು ಉತ್ತಮ ಸಂಶೋಧನೆಗಳು ಕಾರಣವಾಗಬಹುದು. ಅದೇ ರೀತಿ ವಿದ್ಯಾರ್ಥಿಗಳ ಜೀವನವನ್ನು ಬದಲಾಯಿಸಿಕೊಳ್ಳಲು ಒಂದು ಸಣ್ಣ ಬದಲಾವಣೆಗಳು ಕಾರಣವಾಗುತ್ತದೆ. ಪ್ರತಿನಿತ್ಯ ವಿದ್ಯಾರ್ಥಿಗಳು ಹೊಸ ಹೊಸ ವಿಚಾರಗಳನ್ನು ಕಲಿಯುತ್ತಿರಬೇಕು. ವಿದ್ಯಾರ್ಥಿಗಳ ಗುರಿ ಕೇವಲ ಉದ್ಯೋಗವನ್ನು ಪಡೆಯುವುದಷ್ಟೇ ಅಲ್ಲ ಹೆಚ್ಚು ಹೆಚ್ಚು ಜ್ಞಾನವನ್ನು ಪಡೆದುಕೊಳ್ಳುವುದಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. 

ಸಾಹೇ ವಿ.ವಿ ಉಪಕುಲಾಧಿಪತಿ ಡಾ. ಕೆ.ಬಿ ಲಿಂಗೇಗೌಡ ಮಾತನಾಡಿ ವಿದ್ಯಾರ್ಥಿಗಳಿಗೆ ಅವಕಾಶಗಳು ಸಾಕಷ್ಟಿದೆ ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಏನಾದರೊಂದು ಸಾಧಿಸಬೇಕು ಎಂದು ಹಸಿವಿದ್ದಾಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ವಿದ್ಯಾರ್ಥಿಗಳು ಯಾವಾಗಲೂ ಅಧ್ಯಯನ ಶೀಲರಾಗಿ ವಿಭಿನ್ನವಾಗಿ ಆಲೋಚಿಸಿ, ಸದಾ ಸಂಶೋಧನಾ ಮನೋಭಾವವನ್ನು ಹೊಂದಿರಿ ಎಂದು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸದಸ್ಯರಾದ ಕನ್ನಿಕಾ ಪರಮೇಶ್ವರಿ  ಮಾತನಾಡಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶ್ರದ್ಧೆಯಿಂದ ಕಲಿತಾಗ ಮಾತ್ರ ತಮ್ಮ ಭವಿಷ್ಯ ಉಜ್ವಲವಾಗಿರುತ್ತದೆ ಹಾಗಾಗಿ ವಿದ್ಯಾರ್ಥಿಗಳು ಸಮಯ ಪಾಲನೆಗೆ ಹೆಚ್ಚು ಗಮನವನ್ನು ನೀಡಿ ತಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಿ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ವಿಭಾಗದ ವಿದ್ಯಾರ್ಥಿಗಳಿಂದ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ, ಫ್ಯಾಷನ್ ಶೋಗಳು ಬಹಳ ಸೊಗಸಾಗಿ ಮೂಡಿಬಂದವು.   

ಇದೇ ಸಂದರ್ಭದಲ್ಲಿ ಸಾಹೇ ವಿವಿಯ ಕುಲಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಎಸ್.ಎಸ್.ಐ.ಬಿಎಂ. ಕಾಲೇಜಿನ ಪ್ರಾಂಶುಪಾಲರಾದ ಡಾ.ಮಮತಾ ಜಿ. ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...