ತುಮಕೂರು | ತಾರತಮ್ಯ ಮುಕ್ತ ಸಮಾಜದ ಕನಸನೊತ್ತಿವೆ ‘ ಅವು ಅಂಗೇ’ ಸಂಕಲನದ ಕಥೆಗಳು : ಡಾ.ಭಾರತಿದೇವಿ

Date:

ಲೇಖಕ,ವಿಮರ್ಶಕ ಡಾ.ರವಿಕುಮಾರ್ ನೀಹ ಅವರ ಅವು ಅಂಗೇ ಕಥಾ ಸಂಕಲನದಲ್ಲಿರುವ ಕಥೆಗಳು ಅಂಚಿನ ಸಮುದಾಯಗಳ ಧ್ವನಿಯಾಗಿವೆ ಎಂದು ಚಿಂತಕರಾದ ಡಾ.ಭಾರತಿದೇವಿ ಅಭಿಪ್ರಾಯಪಟ್ಟರು.

ತುಮಕೂರು ನಗರದ ಕನ್ನಡ ಭವನದಲ್ಲಿ ಜಲಜಂಬೂ ಲಿಂಕ್ಸ್, ತುಮಕೂರು, ಅರುಣೋದಯ ಸಹಕಾರ ಸಂಘ(ರಿ), ಜಿಲ್ಲಾ ಕಸಾಪ,ತುಮಕೂರು, ಕರ್ನಾಟಕ ಲೇಖಕಿಯರ ಸಂಘ(ರಿ), ತುಮಕೂರು ಅಲೇಖ್ಯ ಎಂಟರ್‌ಪ್ರೆಸಸ್, ತುಮಕೂರು ಇವರು ಆಯೋಜಿಸಿಸದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ವಿಮರ್ಶಕ ಡಾ.ರವಿಕುಮಾರ್.ನೀ.ಹ. ಅವರ ಅವು ಅಂಗೇ ಕಥಾ ಸಂಕಲನ ಲೋಕಾರ್ಪಣೆ ಹಾಗು ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ಅವು ಅಂಗೇ ಕಥಾ ಸಂಕಲನದಲ್ಲಿರುವ ಬಹುತೇಕ ಕಥೆಗಳು, ಅವರ ಸಂಶೋಧನಾ ಕೃತಿಗಳಾದ ಕುರಂಗರಾಯ, ಜಲಂಜಂಭೂ ಕನ್ಯ,ಕಣ್ಣು ಧರಿಸಿ ಕಾಣಿರೋ ಇವುಗಳ ಮುಂದುವರೆದ ಭಾಗಗಳಂತೆ ಕಂಡು ಬರುತಿದ್ದು, ಸಮುದಾಯದ ಧ್ವನಿಯನ್ನು ಬಿತ್ತಿರಿಸುತ್ತಿದ್ದು, ಸಾಂಸ್ಕೃತಿಕ ರಾಜಕಾರಣದಿಂದ ಕಣ್ಮೆರೆಯಾದ ನೆಲಮೂಲದ ಸಂಸ್ಕೃತಿಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000989282

ಡಾ.ರವಿಕುಮಾರ್ ನೀಹ.ಅವರ ಪ್ರತಿ ಕಥೆಯಲ್ಲಿಯೂ ತಾರತಮ್ಯ ಮುಕ್ತ ಸಮಾಜದ ಕನಸು ಇರುವುದನ್ನು ಕಾಣಬಹುದು.ಯಾತನೆ,ನೋವಿನಿಂದ ಕೂಡಿದ ಭೂತ ಕಾಲವನ್ನು ವರ್ತಮಾನದಲ್ಲಿ ಎದುರುಗೊಳ್ಳುವ ಪ್ರಯತ್ನ ಇದಾಗಿದೆ. ಪುರುಷ ಪ್ರಧಾನ ಅಂಶಗಳನ್ನು ಇಟ್ಟುಕೊಂಡೆ ಸ್ತ್ರೀ ಪಾತ್ರಗಳಿಗೆ ಹೆಚ್ಚು ಘನತೆ ತಂದುಕೊಡಲಾಗಿದೆ.ನೆಲಮೂಲದ ಭಾಷೆ,ಅಲ್ಲಿನ ಪರಿಸರ ಎಲ್ಲವೂ ಕೂಡ ಕಥೆಯನ್ನು ಓದಿಸಿಕೊಂಡು ಹೋಗುವ ಶಕ್ತಿ ಹೊಂದಿವೆ. ನಮ್ಮಿಂದಲೇ ಹುಟ್ಟಿಕೊಂಡ ಕಥೆಗಳೇ ನಮ್ಮನ್ನು ಆಪೋಷಣೆ ತೆಗೆದುಕೊಳ್ಳುತ್ತಿರುವಾಗ,ಅದರಿಂದ ಹೇಗೆ ಹೊರಬರಬಹುದು ಎಂಬುದನ್ನು ಇವರು ತಮ್ಮ ಕಥೆಗಳ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಡಾ.ಭಾರತೀ ದೇವಿ ನುಡಿದರು.

ಲೇಖಕರಾದ ಡಾ.ಹರೀಶ್ ಗಂಗಾಧರ್ ಮಾತನಾಡಿ, ಡಾ.ರವಿಕುಮಾರ್ ನೀ.ಹ. ಅವರು ತಮ್ಮ ಕಥೆಗಳ ಮೂಲಕ ಅಂಚಿನಲ್ಲಿರುವ ಸಮುದಾಯಗಳನ್ನು ಕೇಂದ್ರಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ.ಅವು ಅಂಗೇ ಕಥಾ ಸಂಕಲನದಲ್ಲಿರುವ ಎಲ್ಲಾ ಕಥೆಗಳು ಓದುಗರ ಅನುಭವಕ್ಕೆ ತಕ್ಕಂತೆ ತೆರೆದುಕೊಳ್ಳುತ್ತಾ ಹೋಗುತ್ತವೆ. ಪವಿತ್ರ, ಅಪವಿತ್ರದ ನಡುವಿನ ಗೋಡೆಗಳನ್ನು ಒಡೆದು ಹಾಕುವ ಪ್ರಯತ್ನ ಮಾಡಿದ್ದಾರೆ.ಹವಾಮಾನದ ಬರಗಾಲಕ್ಕಿಂತ ಮನುಷ್ಯನ ಅಂತರ್ಯದಲ್ಲಿರುವ ಬರಗಾಲವನ್ನು ತೆಡೆದು ಹಾಕುವ ಕಥೆಗಳಾಗಿವೆ.ಅತ್ಯಾಚಾರ,ದಬ್ಬಾಳಿಕೆ,ದೌರ್ಜನ್ಯ,ಕೊಲೆ,ಸುಲಿಗೆಗಳ ಸಮರ್ಥನೆಗೆ ಕಥೆಗಳು ಹುಟ್ಟಿಕೊಳ್ಳುತ್ತಿರುವ ಈ ಕಾಲದಲ್ಲಿ ಸಮಾಜ ಕೆಡುಕುಗಳನ್ನು ತೊಡೆದು ಹಾಕಲು ಕಥೆಗಳ ರಚಿಸಲಾಗಿದೆ.ಪ್ರತಿರೋಧದ ನೆಲೆಯಲ್ಲಿ ಕಥೆಗಳಿದ್ದು, ಸಾಮಾಜಿಕ ಕಳಕಳಿಯನ್ನು ಹೊಂದಿವೆ ಎಂದರು.

1000989275

ಅವು ಅಂಗೇ ಕಥಾ ಸಂಕಲನ ಬಿಡುಗಡೆ ಮಾಡಿದ ಕಥೆಗಾರತಿ ಬಿ.ಟಿ.ಜ್ಞಾಹ್ನವಿ ಮಾತನಾಡಿ, ವಿಮರ್ಶಕರಾಗಿದ್ದ ಡಾ.ರವಿಕುಮಾರ್ ನೀ.ಹ. ಕಥೆಗಾರರಾಗಿ ಪರಿಚಯವಾಗುತ್ತಿದ್ದು, ಅವರಿಂದ ಮತ್ತಷ್ಟು ಸೃಜನಾತ್ಮಕ ಕಥೆಗಳು ಮೂಡಿಬರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ತುಂಬಾಡಿ ರಾಮಯ್ಯ ಮಾತನಾಡಿ, ಡಾ.ರವಿಕುಮಾರ್ ನೀಹ ಅವರು ಕಥೆಗಳನ್ನು ನೆಲಮೂಲದ ಭಾಷೆಯ ಸೊಗಡನ್ನು ಹೊಂದಿದ್ದರೂ, ಹಟ್ಟಿ, ಕೇರಿಗಳನ್ನು ದಾಟಿ ನಗರವನ್ನು ತಲುಪಿವೆ.ಕಥಾ ಸಂಕಲನದಲ್ಲಿ ಅವರು ಬಳಸಿರುವ ಭಾಷೆ ಓದುಗರನ್ನು ಸೆಳೆಯುತ್ತದೆ.ಕಥೆಗಳು ಕಾವ್ಯ, ನಾಟಕ, ಚಿತ್ರಕಥೆ, ಖಂಡಕಾವ್ಯ ಎಲ್ಲಾ ರೀತಿಯ ಸಾಹಿತ್ಯ ಪ್ರಕಾರಗಳನ್ನು ಓದುಗನ ಮುಂದಿಡುತ್ತವೆ ಎಂದರು.

ವಿಮರ್ಶಕ, ಕಥೆಗಾರ, ಅವು ಅಂಗೇ ಕಥಾ ಸಂಕಲನದ ಕರ್ತೃ ಡಾ.ರವಿಕುಮಾರ್ ನೀ.ಹ.ಮಾತನಾಡಿ, 23ವರ್ಷಗಳ ಹಿಂದೆ ಒಂದು ಕಥೆಯನ್ನು ಬರದು, ವಿಮರ್ಶೆಯತ್ತ ಹೊರಳಿದ್ದು,ಟಿಪ್ಪುಸುಲ್ತಾನ್‌ನ ಕುರಿತು ಕಾದಂಬರಿಯೊಂದು ಸಿದ್ದಗೊಳ್ಳುತ್ತಿರುವ ಹೊತ್ತಿನಲ್ಲಿ ಅದಕ್ಕೊಂದು ಪೀಠಿಕೆ ಎಂಬಂತೆ 2023ರಲ್ಲಿ ಸುಮಾರು 08 ಕಥೆಗಳನ್ನು ರಚಿಸಿದ್ದು,ಕಥೆಯಲ್ಲಿರುವ ಎಲ್ಲಾ ಪಾತ್ರಗಳು ಜೀವಂತವಾಗಿವೆ. ಕಾಲ್ಪನಿಕವಲ್ಲ.ನೆಲಮೂಲ ಭಾಷೆಗಾಗಿ ಕೇರಿ, ಹಟ್ಟಿಗಳನ್ನು ಓಡಾಡಿದ್ದೇನೆ. ಕಥೆಗಳು ಹೆಚ್ಚು ಓದಿಸಿಕೊಳ್ಳುವ ಮೂಲಕ ನೆಲಮೂಲದ ಭಾಷೆ ಗೆದಿದ್ದೆ ಎಂದರು.

ಅವು ಅಂಗೇ ಕಥಾ ಸಂಕಲನ ಕುರಿತು ಉದ್ಯೋನ್ಮುಖ ಕವಿ ನವೀನ್ ಪೂಜಾರಳ್ಳಿ, ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷೆ ಮಲ್ಲಿಕಾ ಬಸವರಾಜು,ಡಾ.ಮೂರ್ತಿ ತಿಮ್ಮನಹಳ್ಳಿ ಮಾತನಾಡಿದರು. ವೇದಿಕೆಯಲ್ಲಿ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಡಾ.ಮುಕುಂದ್, ಡಾ.ಹನುಮಂತರಾಯಪ್ಪ ಪಾಲಸಂದ್ರ, ಗುರುಪ್ರಸಾದ್ ಕಂಟಲಗೆರೆ,ಕಾಂತರಾಜ್ ಗುಪ್ಪಟ್ಣ, ಮೋದೂರು ತೇಜು, ಆಶಾರಾಣಿ, ಪಾವರ್ತಿ.ಎಚ್.ಅವರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...