ತುಮಕೂರು | ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ : ಜಿಲ್ಲಾಧಿಕಾರಿ

Date:

 ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 4 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. 

ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :

ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರಿ ಮಳೆ, ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು-ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ. 

ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನದಲ್ಲಿದ್ದುಕೊಂಡು ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಮುಂಜಾಗ್ರತೆ ವಹಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ, ಕಟ್ಟಡ, ದುರ್ಬಲ ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಶಾಲೆ, ಅಂಗನವಾಡಿ ಮೇಲ್ಛಾವಣಿ, ಗೋಡೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ಕೆಳ ಸೇತುವೆ ರಸ್ತೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. 

ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯ, ಜಿಲ್ಲಾಡಳಿತ, ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.  

ಸಾರ್ವಜನಿಕರಲ್ಲಿ ಮನವಿ

ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ನದಿ, ಹಳ್ಳದ, ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು, ಮತ್ತಿತರೆ ಚಟುವಟಿಕೆಗಳನ್ನು ನಡೆಸಬಾರದು. ನದಿ, ಹಳ್ಳ, ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ,  ಸೆಲ್ಫಿಗಳನ್ನು ತೆಗೆಯಬಾರದು. ಮಕ್ಕಳು ಮತ್ತು ವಯೋವೃದ್ಧರನ್ನು ಮನೆಯಿಂದ ಹೊರಗಡೆ ಒಂಟಿಯಾಗಿ ತೆರಳದಂತೆ ಎಚ್ಚರಿಕೆ ವಹಿಸಬೇಕು. ಗುಡುಗು-ಮಿಂಚು, ಸಿಡಿಲು ಬಡಿಯುವ ಸಂದರ್ಭದಲ್ಲಿ ಮನೆಯ ಹೊರಗಡೆ ಇರುವವರು ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಿ ರಕ್ಷಣೆ ಪಡೆದುಕೊಳ್ಳಬೇಕು. ಮರ, ವಿದ್ಯುತ್ ಕಂಬ, ಜಲಾಶಯ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. 

ಕೆರೆ-ಕಟ್ಟೆಗಳ ಏರಿ, ಬಂಡ್,  ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ, ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್, ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ, ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ, ಇತರೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಾದ 7304975519, 0816-2213400, 155304ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ ಎಂದು  ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...