ತುಮಕೂರು | ಕುಲಾಂತರಿ ನೀತಿಯನ್ನು ಕಾಲಿನಲ್ಲಿ ಒದ್ದು ತಿರಸ್ಕರಿಸಬೇಕು: ರೈತ ಮುಖಂಡ ಕೆ.ಟಿ. ಗಂಗಾಧರ್

Date:

116 ದೇಶಗಳಲ್ಲಿ ತಿರಸ್ಕಾರ ಮಾಡಿರುವ ಕುಲಾಂತರಿ ಬೀಜ ತಳಿಯನ್ನು ನಮ್ಮ ದೇಶದಲ್ಲಿ ತರಲು ಹೊರಟಿರುವುದು ವಿಪರ್ಯಾಸ. ಇದರಿಂದ ಪರಿಸರ, ಜೀವವೈಧ್ಯತೆ ಅಷ್ಟೇ ಅಲ್ಲದೆ, ಮಾನವನ ವಿಕಾಸದಲ್ಲೂ ಅನಾಹುತವೇ ಸಂಭವಿಸಲಿದೆ. ಆದ್ದರಿಂದ ರೈತರು ಮಾತ್ರವಲ್ಲದೆ, ಪಟ್ಟಣದಲ್ಲಿರುವ ಜನರೂ ಕುಲಾಂತರಿ ನೀತಿಯನ್ನು ಕಾಲಿನಲ್ಲಿ ಒದ್ದು ತಿರಸ್ಕಾರ ಮಾಡಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಕೆ.ಟಿ. ಗಂಗಾಧರ್ ಕರೆ ನೀಡಿದರು.

ಗಾಂಧಿ ಸಹಜ ಬೇಸಾಯ ಆಶ್ರಮದ ವತಿಯಿಂದ ‘ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನ ನಿರ್ದೇಶನದಂತೆ ಬೇಯರ್ ಮತ್ತು ಮಾನ್ಸೆಂಟೋ ಕಂಪನಿಗಳ ಸಹಯೋಗದಲ್ಲಿ ತರಲು ಹೊರಟಿರುವ ಕುಲಾಂತರಿ ಬೀಜ ರಾಷ್ಟ್ರೀಯ ನೀತಿಯನ್ನು ವಿರೋಧಿಸಿ ಹಮ್ಮಿಕೊಂಡಿರುವ ಗ್ರಾಮಾಂತರದ ಹ್ಯಾಂಡ್ ಪೋಸ್ಟ್‌ನ ದೊಡ್ಡ ಹೊಸೂರಿನ ಎರಡನೇ ದಿನದ ಸತ್ಯಾಗ್ರಹ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತ್ರೇತಾಯುಗದಲ್ಲಿ ರಾಮ ಸೀತೆಯೂ ಕೃಷಿ ಮಾಡಿದ್ದರು. ಭರತಖಂಡದಲ್ಲಿ ಕೃಷಿಗೆ ಪೂರಕವಾದ ವಾತಾವರಣವಿದೆ. ಇಲ್ಲಿನ ಕೃಷಿಗೆ ಶೇ.75ರಷ್ಟು ಪ್ರಾಕೃತಿಕ ಬೆಂಬಲವಿದ್ದು, ಶೇ.25 ರಷ್ಟು ಮಾತ್ರವೇ ಮಾನವನ ಶ್ರಮವಿರುತ್ತದೆ. ಆದ್ದರಿಂದಲೇ, ನಮ್ಮದು ಬಹುಪಾಲು ಕೃಷಿ ಪ್ರಧಾನವಾದ ಸಂಪದ್ಭರಿತ ರಾಷ್ಟ್ರ. ಈ ಸಾರ್ವಭೌಮತೆಯನ್ನು ವಶಕ್ಕೆ ಪಡೆಯಲು ಬಹುರಾಷ್ಟ್ರೀಯ ಕಂಪನಿಗಳು ಹುನ್ನಾರ ನಡೆಸಿವೆ. ದೇಶೀ ಬೆಳೆಗಳನ್ನು ನಾಶ ಮಾಡಿ ಕುಲಾಂತರಿ ವ್ಯವಸ್ಥೆಯನ್ನು ತರುವ ಮೂಲಕ ನಮ್ಮ ಕೃಷಿ ವ್ಯವಸ್ಥೆಯನ್ನು ನಿಯಂತ್ರಣ ಮಾಡಲು ಯೋಜನೆ ರೂಪಿಸಿವೆ. ಅನ್ನ ಹಾಕುವ ರೈತರನ್ನು ಗ್ರಾಹಕರನ್ನಾಗಿ ಮಾರ್ಪಾಡು ಮಾಡುವ ದೊಡ್ಡ ಸಂಚು ನಡೆದಿದೆ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಸಿರು ಕ್ರಾಂತಿಯಿಂದಾದ ಹಾನಿಯಿಂದ ಇನ್ನೂ ಚೇತರಿಸಿಕೊಳ್ಳಲು ಆಗಿಲ್ಲ. ಈಗ 3ನೇ ಕೃಷಿ ಕ್ರಾಂತಿ ತರಲು ಹೊಂಚು ಹಾಕುತ್ತಿದ್ದಾರೆ. ಇದನ್ನು ನಾವು ವಿರೋಧಿಸಬೇಕು. ನಮ್ಮ ಧ್ವನಿ ಹಾಗೂ ಪ್ರತಿಭಟನೆಗಳ ಸಾಮರ್ಥ್ಯ ಹೆಚ್ಚಾದರೆ ಸಂವಿಧಾನಾತ್ಮಕವಾಗಿಯೂ ಮಹತ್ವ ದೊರೆಯಲಿದ್ದು, ಸರ್ಕಾರಗಳಿಗೆ ಚಳವಳಿಗಳ ಮೂಲಕವೇ ಅರ್ಥ ಮಾಡಿಸೋಣ ಎಂದು ನಿರ್ಧಾರ ಕೈಗೊಂಡರು.

WhatsApp Image 2024 09 30 at 6.52.51 PM

“ಕುಲಾಂತರಿ ನೀತಿಯ ಚೆಂಡು ಸುಪ್ರೀಂ ಕೋರ್ಟಿನಿಂದ ಸಂಸತ್ತಿನ ಅಂಗಳಕ್ಕೆ ಬಂದು ನಿಂತಿದೆ. ಈಗ ನಮ್ಮ ಜನಪ್ರತಿನಿಧಿಗಳ ಮೇಲೆ ಒತ್ತಡ ತರುವ ಮೂಲಕ ಕಾಯಿದೆಗೆ ಸಹಿ ಬೀಳದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಯ ಜನ್ಮ ಜಾಲಾಡಲು ಸಿದ್ಧರಾಗಬೇಕು” ಎಂದು ಕೆ.ಟಿ. ಗಂಗಾಧರ್ ಕರೆ ನೀಡಿದರು.

ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಸರ್ಕಾರಿ ವಿಜ್ಞಾನಿಗಳು ಮಾರಾಟವಾಗಿದ್ದಾರೆ. ವೈದ್ಯರು ವ್ಯಾಪಾರಿಗಳಾಗಿದ್ದಾರೆ. ಆರೋಗ್ಯ ಮತ್ತು ವಿಜ್ಞಾನ ಕ್ಷೇತ್ರವೇ ಹಣಗಳಿಕೆಗೆ ಮೀಸಲಾಗಿದೆ. ಹಳಿತಪ್ಪಿರುವ ವ್ಯವಸ್ಥೆ ಸರಿಮಾಡುವವರು ಯಾರು ಎಂಬುದೇ ಪ್ರಶ್ನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ ಹಾಗೂ ವ್ಯಾಪಾರದಂತೆ ಕೃಷಿಯಲ್ಲಿಯೂ ಸಂಸ್ಕೃತಿ ಕಣ್ಮರೆಯಾಗಿದೆ. ಪುಟ್ಟ ಮಕ್ಕಳಿಗೆ ಡಯಾಬಿಟೀಸ್ ಅಂಟಿಕೊಂಡಿದೆ. ನಾಲ್ಕು ವರ್ಷದ ಹೆಣ್ಣು ಮಕ್ಕಳು ಋತುಮತಿಯಾಗುತ್ತಿದ್ದಾರೆ. ಮತ್ತೊಂದು ಕಡೆ ಅಪೌಷ್ಠಿಕತೆ ಕಾಡುತ್ತಿದೆ. ಈಗ ಅನ್ನ ತಿನ್ನುವವರೆಲ್ಲರೂ ಎಚ್ಚೆತ್ತುಕೊಳ್ಳಬೇಕಾದ ಕಾಲ ಬಂದಿದೆ. ಇಲ್ಲವಾದರೆ ಆಹಾರ ಕ್ಷೇತ್ರ ಅಧೋಗತಿ ತಲುಪಲಿದೆ ಎಂದು ಎಚ್ಚರಿಸಿದರು.

ಕುಲಾಂತರಿ

ಭೂಮಿಗೂ ನಮಗೂ ಭಾವನಾತ್ಮಕ ಸಂಬಂಧವಿದ್ದು, ಕೃಷಿ ಸಂಸ್ಕೃತಿ ಆಧಾರಿತ ಉದ್ಯೋಗ ತಂದುಕೊಟ್ಟಿದೆ. ನಮ್ಮ ಸಂಸ್ಕೃತಿ ಉಳಿಯಬೇಕೆಂದರೆ ಭೂಮಿಯನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ದೊಡ್ಡ ಹೊಸೂರು ಸತ್ಯಾಗ್ರಹ ದಾಖಲೆಯಾಗಿ ಉಳಿಯಲಿದೆ. ಸತ್ಯಾಗ್ರಹಕ್ಕೆ ತನ್ನದೇ ಆದ ಶಕ್ತಿ ಇದ್ದು, ಅದಕ್ಕೆ ಸಾಕ್ಷಿಯಾಗಿ ಮಹಾತ್ಮಗಾಂಧಿ ನಮ್ಮೆದುರಿಗಿದ್ದಾರೆ ಎಂದು ರೈತರನ್ನು ಹುರಿದುಂಬಿಸಿದರಲ್ಲದೆ, ಎಲ್ಲ ರಾಜಕೀಯ ಪಕ್ಷಗಳು ಬಂಡವಾಳ ಶಾಹಿಗಳ ಪರವಿರುವುದರಿಂದ ನಾವು ಸ್ಥಳೀಯ ಮಟ್ಟದಿಂದಲೇ ಚಳಚಳಿಗಳನ್ನು ಕಟ್ಟಬೇಕು ಎಂದು ಬಡಗಲಪುರ ನಾಗೇಂದ್ರ ಸಲಹೆ ನೀಡಿದರು.

ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಮಾತನಾಡಿ, ನಮ್ಮ ದೇಶದ ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಪರಿಸರದ ಮೇಲೆ ಅವ್ಯಾಹತವಾಗಿ ದಾಳಿ ನಡೆಯುತ್ತಿದೆ. ಕೃಷಿ, ಕಲೆ, ಸಾಹಿತ್ಯ, ಆಡಳಿತ, ಸಂಸ್ಕೃತಿ ಒಂದಕ್ಕೊಂದು ಅಂತರ ಸಂಬಂಧ ಹೊಂದಿದ್ದು, ಈ ವ್ಯವಸ್ಥೆಯನ್ನು ಸರಿ ಮಾಡಬೇಕಾದರೆ ಮಸನೋಬು ಫುಕುವೋಕ, ಜೆ.ಸಿ.ಕುಮಾರ್, ಮಹಾತ್ಮಗಾಂಧಿ ಅವರ ತತ್ವದಡಿಯಲ್ಲಿ ಹೋರಾಟಗಳು ಮುನ್ನಡೆಯಬೇಕು ಎಂದರು.

ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ರೀತಿಯ ಭತ್ತದ ತಳಿಗಳಿದ್ದವು. ಅವೆಲ್ಲವೂ ಈಗ ನಾಶವಾಗಿ ಕುಲಾಂತರಿ ಭತ್ತ ರಾರಾಜಿಸುತ್ತಿದೆ. ಜಪಾನ್ ಹಾಗೂ ಚೀನಾದಲ್ಲಿ ಕುಲಾಂತರಿ ಮನುಷ್ಯರನ್ನು ಸೃಷ್ಟಿ ಮಾಡಲಾಗಿದೆ. ಇದು ಪ್ರಕೃತಿ ವಿರುದ್ಧವಾದುದು. ಹೀಗೇ ಮುಂದುವೆರೆದರೆ 2050ರ ಹೊತ್ತಿಗೆ ಭೂಮಂಡಲ ವಿನಾಶವಾಲಿದೆ ಎಂದು ನಾಸಾ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಪರಿಸರಕ್ಕೆ ಪೂರಕವಾದ ನೈಸರ್ಗಿಕ ಕೃಷಿ ಮಾಡಬೇಕು. ನಾವು ತಿನ್ನುವ ಆಹಾರ ಉತ್ತಮವಾಗಿದ್ದರೆ ಮನಸ್ಥಿತಿ ಮತ್ತು ಆರೋಗ್ಯ ಉತ್ತಮವಾಗಿರುತ್ತದೆ. ಸಮಾಜದ ಬಗ್ಗೆ ಕಾಳಜಿ ವಹಿಸಬೇಕಾದ ಸಾಹಿತಿಗಳು ಮರ್ಯಾದೆ ಇಲ್ಲದಂತೆ ವರ್ತಿಸುತ್ತಿದ್ದು, ಸಣ್ಣಪುಟ್ಟ ರಾಜಕಾರಣಿಗಳಿಗೆ ಆ ಸ್ಥಾನ ಬಿಟ್ಟುಕೊಟ್ಟಿದ್ದಾರೆ ಎಂದು ಚಾಟಿ ಬೀಸಿದರು.

ಇದನ್ನು ಓದಿದ್ದೀರಾ? ಪಶ್ಚಿಮ ಘಟ್ಟಗಳ ಬಗ್ಗೆ ಕೇಂದ್ರದ ಕರಡು ಘೋಷಣೆ: ಗ್ರಾಮ, ವಾರ್ಡ್ ಸಭೆ ನಿರ್ಧರಿಸಲಿ; ಕೃಷಿ ತಜ್ಞರ ಸಲಹೆ

ಈ ಸಂದರ್ಭದಲ್ಲಿ ಅಖಿಲ ಭಾರತ ಕೃಷಿ ಕಾರ್ಮಿಕ ಸಂಘದ ಎಸ್.ಎನ್ ಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಹೋರಾಟಗಾರರಾದ ಶಾಂತಕೃಷ್ಣ, ತನುಜ, ನೇತ್ರಾವತಿ, ಶಾರದಾ, ಬಿ.ಮರುಳಯ್ಯ, ಕೃಷಿ ವಿಜ್ಞಾನಿ ಡಾ.ಮಂಜುನಾಥ್, ಪರಿಸರವಾದಿ ಸಿ.ಯತಿರಾಜು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...