ತುಮಕೂರು | ಪತ್ನಿಗೆ ಕೈ ತಪ್ಪಿದ ತುಮುಲ್ ಅಧ್ಯಕ್ಷ ಸ್ಥಾನ : ಪರಮೇಶ್ವರ್, ರಾಜಣ್ಣ ವಿರುದ್ಧ ಶಾಸಕ ಶ್ರೀನಿವಾಸ್ ಬಹಿರಂಗ ಅಸಮಾಧಾನ

Date:

ತುಮುಲ್ ಅಧ್ಯಕ್ಷ ಸ್ಥಾನ  ಪತ್ನಿಗೆ ಕೈ ತಪ್ಪಿದ್ದರಿಂದ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಗೃಹ ಸಚಿವ ಪರಮೇಶ್ವರ್ ವಿರುದ್ಧ ಅಸಮಾಧಾನ ಹೋರ ಹಾಕಿದ್ದಾರೆ.

ತುಮಕೂರು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಅವರು, ಗೃಹ ಸಚಿವ ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ. ಎನ್. ರಾಜಣ್ಣ ತುಮಕೂರು   ಜಿಲ್ಲೆಯಲ್ಲಿ ತೊಘಲಕ್ ಆಡಳಿತ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಏನ್ ನಡಿತಿದೆ ಅನ್ನೋದೆ ಗೊತ್ತಾಗುತ್ತಿಲ್ಲ. ಇಬ್ಬರು ಮಂತ್ರಿಗಳು ಸೇರಿಕೊಂಡು ಏನ್ ಮಾಡ್ಬೇಕು ಅದನ್ನ ಮಾಡುತ್ತಿದ್ದಾರೆ. ನಮ್ಮನ್ನು ಮೀಟಿಂಗ್ ಗೂ ಸಹ ಕರಿತಿಲ್ಲ. ಏನ್ ಮಾಡಿತ್ತೀವಿ ಅಂತ ನಮ್ಮನ್ನ ಕೇಳುತ್ತಿಲ್ಲ ಎಂದು ಆರೋಪಿಸಿದರು.

 ಇಬ್ಬರು ಸಚಿವರು ಸಾಮಾಜಿಕ ನ್ಯಾಯ ಕೊಡೋ ಹರಿಕಾರರು. ಅದರೆ  ಎಡಗೈ (ಮಾದಿಗ) ಸಮುದಾಯಕ್ಕೆ  ಅನ್ಯಾಯ ಮಾಡಿ ಇಡೀ ಜಿಲ್ಲೆಯಲ್ಲಿ ಎಸ್‌ಟಿ, ಭೋವಿಗಳನ್ನ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಲಗೈ (ಪರಮೇಶ್ವರ್ ) ಸಮುದಾಯದವರು ಸಚಿವರು ಇದ್ದಾರೆ. ಲಿಂಗಾಯತರು, ಒಕ್ಕಲಿಗರು ಎಂಎಲ್ ಗಳು ಇದ್ದಾರೆ. ಅನ್ಯಾಯ ಆಗಿರೋದು ಹಿಂದುಳಿದ ವರ್ಗ ಎಡಗೈ (ಮಾದಿಗ) ಸಮುದಾಯಕ್ಕೆ. ಮುಂದೆ ಡಿಸಿಸಿ ಬ್ಯಾಂಕ್ ಚುನಾವಣೆ ಬರುತ್ತೆ‌‌. ಯಾರಾದರು ಒಬ್ಬ ಎಡಗೈ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ಮಾಡಿದರೆ ಇವರು ಸಾಮಾಜಿಕ ನ್ಯಾಯದ ಹರಿಕಾರರು ಅಂತ ನಾನು ಅಂದುಕೊಳ್ಳುತ್ತೀನಿ, ನಾನು ಸ್ವಾಗತ ಮಾಡುತ್ತೇನೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಎರಡು ಮೀಸಲು ಕ್ಷೇತ್ರ ಇದೆ. ಆ ಮೀಸಲು ಕ್ಷೇತ್ರದಲ್ಲಿ ಒಬ್ಬರು ಭೋವಿ ಜನಾಂಗ. ಮತ್ತೊಬ್ಬರು ಬಲಗೈ ಜನಾಂಗದವರು ಗೆದ್ದಿದ್ದಾರೆ. ಎಡಗೈ ನವರು ಇನ್ನು ಶೋಷಿತರಾಗಿಯೇ ಇದ್ದಾರೆ. ಈ ಸಮುದಾಯಕ್ಕೆ ನ್ಯಾಯ ಸಿಗಬೇಕು  ಅಂದ್ರೆ ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ಗೆ ನಾಮಿನಿ ಮಾಡಿ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದ್ದು ಇದರಲ್ಲಿ ಏನು ಪಾತ್ರ ಇಲ್ಲ. ಇಬ್ಬರು ಸಚಿವರ ವರ್ತನೆ ಬಗ್ಗೆ ನಾನು ಸಿಎಂ‌ ಗಮನಕ್ಕೆ ತಂದಿದ್ದೇನೆ. ಸಹಕಾರ ಸಚಿವ ಹಾಗೂ ಗೃಹ ಸಚಿವರಿಗೆ ಹೇಳುತ್ತೀನಿ ಅಂತ ಹೇಳಿದ್ದರು. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಿಲ್ಕ್ ಯುನಿಯನ್ ಗೆ ನಾಮಿನಿ ಸದಸ್ಯರನ್ನ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇವರು ಮಾತು ಎತ್ತಿದ್ದರೆ ಶೋಷಿತ ವರ್ಗಕ್ಕೆ ನ್ಯಾಯ ಕೊಡ್ತೀವಿ ಅನ್ನುತ್ತಾರೆ.  ನೋಡಿದ್ರೆ ಶೋಷಿತರನ್ನು ಇವರು ನಿಕೃಷ್ಟವಾಗಿ  ಕಾಣುತ್ತಿದ್ದಾರೆ ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...