ತುಮಕೂರು | ಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು : ಡಾ.ಯತೀಂದ್ರ ಸಿದ್ದರಾಮಯ್ಯ

Date:

ತುಮಕೂರು : ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

 ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ತಿಪಟೂರು ಜನಸ್ಪಂದನ ಟ್ರಸ್ಟ್ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಡಿಗ್ರಿ ಕಾಲೇಜು ವಿದ್ಯಾಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಏರ್ಪಡಿಸಲಾಗಿದ್ದ ಸಂವಿಧಾನ ಅರಿವು ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. 

ಈಗ ನಮ್ಮ ಸಂವಿಧಾನವನ್ನು ರಕ್ಷಣೆ ಮಾಡಿ ಎಂದು ಕೇಳಿಕೊಳ್ಳುವಂತಹ ಪರಿಸ್ಥಿತಿ ಬಂದಿದೆ, ಸಂವಿಧಾನದಲ್ಲಿ ಸಮಾನತೆ ಕೊಟ್ಟಿರುವುದರಿಂದ ಒಂದು ಧರ್ಮದಂತೆ ಸಮಾಜ ನಡೆಯಬೇಕು ಎಂದು ಮನುವಾದ ಪ್ರತಿಪಾದಿಸುತ್ತಿದ್ದವರು ಈ ಸಂವಿಧಾನವನ್ನು ವಿರೋಧ ಮಾಡಿದರು. ಮನುಸ್ಮೃತಿ ಆಶಯದವರು ಕೆಲವರು ಮಾತ್ರ ವಿದ್ಯೆ, ಸಂಪತ್ತು, ಅಧಿಕಾರ ಅನುಭವಿಸಬೇಕು ಎಂದು ಸಮಾನತೆ ನೀಡದೆ ಲಿಂಗ ತಾರತಮ್ಯ ಇರಬೇಕು ಎಂದುಕೊಂಡು ಸಂವಿಧಾನದ ಮೂಲ ಆಶಯಕ್ಕೆ ವಿರೋಧಿಗಳಾಗಿದ್ದಾರೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001435655

ಸಂವಿಧಾನದಲ್ಲಿ ಜಾತ್ಯತೀತೆ ಹೇಳುತ್ತಿದ್ದು, ಸಮಾನವಾಗಿ ಬದುಕಬೇಕು ಎಂದು ಸಂವಿಧಾನ ಹೇಳಿದ್ದರೂ, ಒಂದು ಧರ್ಮ ಮಾತ್ರ ಬೇಕು ಎಂದು ಹೇಳಿದರೆ ಇತರೆ ಧರ್ಮದವರು ದ್ವಿತೀಯ ದರ್ಜೆ ಪ್ರಜೆಗಳಾಗಿ ಬದುಕಬೇಕಾಗುತ್ತದೆ, ಆದ್ದರಿಂದ ಸಂವಿಧಾನ ವಿರೋಧಿ ಶಕ್ತಿಗಳನ್ನು ವಿರೋಧಿಸಬೇಕು ಎಂದು ಹೇಳಿದರು. 

ಒಂದು ದೇಶ ನಡಯಬೇಕೆಂದರೆ ಒಂದು ಚೌಕಟ್ಟಿರಬೇಕು, ಆ ಚೌಕಟ್ಟೇ ಸಂವಿಧಾನವಾಗಿದ್ದು, ಭಾರತ ದೇಶ ಹಲವು ಜಾತಿ, ಧರ್ಮಗಳನ್ನು ಹೊಂದಿರುವಂತಹ ದೇಶ, ಈ ಹಿನ್ನೆಲೆಯಲ್ಲಿ ಎಲ್ಲಾ ತಾರತಮ್ಯಗಳನ್ನು ಒಗ್ಗೂಡಿಸಿಕೊಂಡು ವಿಶ್ವಾಸದಿಂದ ಬದುಕಲು ಸಂವಿಧಾನದಿಂದ ಮಾತ್ರ ಸಾಧ್ಯ, ಸಂವಿಧಾನ ಒಂದು ದೇಶವನ್ನು ಸಮಾನತೆಯಿಂದ ನಡೆಸುವಂತಹವುದು, ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರಿಗೂ ಸಂವಿಧಾನದ ಅರಿವು ಅಗತ್ಯವಿದೆ ಎಂದು ಹೇಳಿದರು. 

ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ.ಶಶಿಧರ್(ಟೂಡಾ) ಪ್ರಾಸ್ತಾವಿಕ ಮಾತಗಳನ್ನಾಡಿದರು.

 ಸಭೆಯಲ್ಲಿ ಹಿಂದುಳಿದ ವರ್ಗಗಳ ಅಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ಧ್ವಾರಕನಾಥ್, ತುಮಕೂರು ವಿ.ವಿ.ಯ ಉಪಕುಲಪತಿ ಎಂ.ವೆಂಕಟೇಶ್ವರಲು, ಸಿ.ಜೆ.ಲಕ್ಷ್ಮೀಪತಿ, ಬೆಂಗಳೂರು ವಿ.ವಿ. ಕುಲಸಚಿವ ರಮೇಶ್, ಎಸ್.ನಾಗಣ್ಣ ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...