ತುಮಕೂರು | ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಸಂಯುಕ್ತ ಹೋರಾಟದಿಂದ ಪ್ರತಿಭಟನೆ : ಅಧಿವೇಶನದಲ್ಲಿ ಧ್ವನಿ ಎತ್ತಲು ಆಗ್ರಹ

Date:

ತುಮಕೂರು ಜಿಲ್ಲೆಗೆ ಮರಣ ಶಾಸನವಾಗಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯನ್ನು ಸರಕಾರ ಕೂಡಲೇ ನಿಲ್ಲಿಸಬೇಕು.ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಇಂದು ಸಂಯುಕ್ತ ಹೋರಾಟ-ಕರ್ನಾಟಕ ತುಮಕೂರು ಜಿಲ್ಲಾ ಘಟಕದವತಿ ಯಿಂದ ಪ್ರತಿಭಟನಾ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಾಯಿತು.

1000747088

ಸಂಯುಕ್ತ ಹೋರಾಟ-ಕರ್ನಾಟಕದ ಸಂಚಾಲಕ ಸಿ.ಯತಿರಾಜು,ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು,ಪ್ರಾಂತ ರೈತ ಸಂಘದ ಬಿ.ಉಮೇಶ್,ಎಐಕೆಎಸ್‌ನ ಗಿರೀಶ್,ಎಐಕೆಕೆಎಸ್‌ನ ಎಸ್.ಎನ್.ಸ್ವಾಮಿ ಹಾಗೂ ಇತರೆ ರೈತಮುಖಡರುಗಳ ನೇತೃತ್ವದಲ್ಲಿ ನಗರದ ಸ್ವಾತಂತ್ರ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೊಳಿಗೆ ಕಪ್ಪುಪಟ್ಟಿ ಧರಿಸಿ,ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಎ.ಗೋವಿಂದರಾಜು, ಜಿಲ್ಲೆಯ ಹಲವಾರು ಹಿರಿಯರ ಹೋರಾಟದ ಫಲವಾಗಿ ಹೇಮಾವತಿ ನೀರು ತುಮಕೂರು ಜಿಲ್ಲೆಗೆ ಹರಿದಿದೆ.ಆದರೆ ಕುಣಿಗಲ್ ತಾಲೂಕು ತೋರಿಸಿ, ನಮ್ಮ ಜಿಲ್ಲೆಯ ನೀರನ್ನು ಕದಿಯುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ.ಆರಂಭದಲ್ಲಿ ಇದನ್ನು ವಿರೋಧಿಸಿ, ಜಿ.ಪಂ. ಕೆಡಿಪಿ ಸಭೆಯಲ್ಲಿ ನಿರ್ಣಯ ಮಂಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್,ಈಗ ಸರಕಾರದ ನಿರ್ಧಾರಕ್ಕೆ ಬದ್ದ ಎಂದು ಹೇಳುವ ಮೂಲಕ ಇಡೀ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ.ಸರಕಾರ ಹೇಮಾವತಿ ಎಕ್ಸ್ ಪ್ರೆಸ್  ಕೆನಾಲ್ ಯೋಜನೆಯಿಂದ ಹಿಂದೆ ಸರಿಯದಿದ್ದರೆ, ಮುಂಬರುವ ಜಿ.ಪಂ., ತಾ.ಪಂ., ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಗಳಲ್ಲಿ ರೈತರು ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000747092

ಕಳೆದ ಎಂಟು ತಿಂಗಳಿನಿಂದ ವಿವಿಧ ಹಂತದ ಹೋರಾಟಗಳು ಎಕ್ಸ್ ಪ್ರೆಸ್  ಲಿಂಕ್ ಕೆನಾಲ್ ವಿರೋಧಿ ನಡೆಯುತ್ತಿವೆ. ಅಂದಿನಿಂದಲೂ ಜಿಲ್ಲಾಡಳಿತ ರೈತರು,ಸಾರ್ವಜನಿಕರೊಂದಿಗೆ ಮಾತುಕತೆ ನಡೆಸುವಂತೆ ಒತ್ತಾಯ ಮಾಡುತ್ತಲೇ ಬಂದಿದ್ದರೂ ಕಣ್ಣು,ಕಿವಿ ಇಲ್ಲದಂತೆ ವರ್ತಿಸುತ್ತಿದೆ.ಇಂದು ತಾಂತ್ರಿಕ ಸಮಿತಿ ವರದಿ ಕುರಿತು ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನಲ್ಲಿ ಏರ್ಪಡಿಸಿದ್ದಾರೆ.ಜಿಲ್ಲೆಯ ಸಮಸ್ಯೆಯೇ ಗೊತ್ತಿರದ ಪತ್ರಕರ್ತರು ಯಾವ ಪ್ರಶ್ನೆ ಕೇಳಲು ಸಾಧ್ಯ. ಈ ರೀತಿಯ ಬೇಕಾಬಿಟ್ಟಿ ವರ್ತನೆ ಸರಿಯಲ್ಲ. ಸರಕಾರ ಕೂಡಲೇ ಯೋಜನೆಯನ್ನು ಕೈಬಿಡಬೇಕು.ಹಾಗೆಯೇ ಜಿಲ್ಲೆಯ ಎಲ್ಲಾ ಶಾಸಕರು,ಸಚಿವರು ಪಕ್ಷಬೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಧ್ವನಿಎತ್ತಿ ಜಿಲ್ಲೆಯ ಹಿತ ಕಾಯಬೇಕೆಂದು ಎ.ಗೋವಿಂದರಾಜು ಆಗ್ರಹಿಸಿದರು.

1000747091

ಸಂಯುಕ್ತ ಹೋರಾಟದ ಸಂಚಾಲಕ ಸಿ.ಯತಿರಾಜು ಮಾತನಾಡಿ,ಜನರಿಗೆ ನೀರು ಪ್ರಾಥಮಿಕ ಅದ್ಯತೆ.ಕುಡಿಯಲು ಮತ್ತು ಕೃಷಿಗೆ ನೀರು ಅತಿ ಅವಶ್ಯ.ಆದರೆ ಆಳುವ ಸರಕಾರಗಳ ಇಚ್ಚಾಶಕ್ತಿಯ ಕೊರತೆಯಿಂದ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಸರಕಾರ ಇದನ್ನು ಖಾತ್ರಿ ಪಡಿಸಿಲ್ಲ.ಚುನಾವಣಾ ಗಿಮಿಕ್‌ಗಳಾಗಿ ನೀರಾವರಿ ಯೋಜನೆಗಳು ಬಳಕೆಯಾಗುತ್ತಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.ಜಿಲ್ಲೆ, ಜಿಲ್ಲೆಗಳ ನಡುವೆ ಜಗಳಕ್ಕೆ ಕಾರಣವಾಗಿದೆ.ಹೇಮಾವತಿ ನಾಲೆಯಿಂದ ಜಿಲ್ಲೆಗೆ ನಿಗಧಿಪಡಿಸಿರುವ ಪ್ರಮಾಣದ ಸಂಪೂರ್ಣ ನೀರು, ಯೋಜನೆ ಪ್ರಾರಂಭವಾಗಿ 40 ವರ್ಷ ಕಳೆದರೂ ಒಮ್ಮೆಯೂ ಹರಿದಿಲ್ಲ. ಹೀಗಿರುವಾಗ, ಮೂಲನಾಲೆಯ ಅರ್ಧ ಭಾಗದಿಂದ ನೀರು ತೆಗೆದುಕೊಂಡು ಹೋಗುವ ಮೂಲಕ ಇಡೀ ಜಿಲ್ಲೆಗೆ ಅನ್ಯಾಯ ಎಸಗಲಾಗುತ್ತಿದೆ. ಇದರ ವಿರುದ್ದ ರೈತರು, ಸಾರ್ವಜನಿಕರು ಧ್ವನಿ ಎತ್ತಬೇಕಾಗಿದೆ ಎಂದರು.

1000747089

ಪ್ರಾಂತ ರೈತ ಸಂಘದ ಬಿ.ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ,ತುಮಕೂರು ಜಿಲ್ಲೆಗೆ ಹೇಮಾವತಿ ಹರಿಯುವಲ್ಲಿ ಕೆಲವರ ಶ್ರಮವಿದೆ.ಅದರೆ ಕೆಲ ಶಾಸಕರು ಸ್ವಯಂ ಘೋಷಿತ ಭಗೀರಥರಾಗಿದ್ದಾರೆ.ಏಕ್ಸ್ ಪ್ರೆಸ್  ಕೆನಾಲ್ ಸಾಧಕ, ಭಾಧಕಗಳ ಕುರಿತು ತಾಂತ್ರಿಕ ವರದಿಯನ್ನು ಜನಸಾಮಾನ್ಯರಿಂದ ಮುಚ್ಚಿಟ್ಟು ಕಾಮಗಾರಿ ಮಾಡಲು ಹೊರಟಿರುವುದು ಸರಿಯಲ್ಲ.ಎಕ್ಸ್ ಪ್ರಸ್ ಕೆನಾಲ್ ಆರಂಭಗೊಂಡರೇ, ಮೊದಲ ಬಲಿಪಶು ತುಮಕೂರು ನಗರ.ಹಾಗಾಗಿ ಜನರು ಹೆಚ್ಚಿನ ರೀತಿಯಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

1000747090

ಹೇಮಾವತಿ ಎಕ್ಸ್ ಪ್ರೆಸ್  ಕೆನಾಲ್ ವಿರೋಧಿ ಮುಷ್ಕರದಲ್ಲಿ ರೈತ ಮುಖಂಡರಾದ ಎಸ್.ಎನ್.ಸ್ವಾಮಿ,ಜಿ.ಶಂಕರಪ್ಪ,ಗಿರೀಶ್, ಕಂಬೇಗೌಡ, ಸೈಯದ್ ಮುಜೀಬ್ ಸೇರಿದಂತೆ ಹಲವು ನಾಯಕರು ಮಾತನಾಡಿದರು. ಮುಷ್ಕರದಲ್ಲಿ ರೈತ ಸಂಘದ ಚಿಕ್ಕಬೋರೇಗೌಡ, ಗುಬ್ಬಿಯ ಲೋಕೇಶ್, ಕೊರಟಗೆರೆಯ ಶಬ್ಬೀರ್, ಮಹಿಳಾ ಘಟಕದ ನಾಗರತ್ನಮ್ಮ, ಭಾಗ್ಯಮ್ಮ, ಅಜ್ಜಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.  

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...