ತುಮಕೂರು | ಸಂಶೋಧನಾರ್ಥಿಗಳ ಮೇಲೆ ವಿವಿ ಆಡಳಿತಾತ್ಮಕ ದಬ್ಬಾಳಿಕೆ; ಯುಜಿಸಿ ನಿಯಮ ಉಲ್ಲಂಘನೆಯ ಆರೋಪ

Date:

ಯುಜಿಸಿ ನಿಯಮಾವಳಿ 2022ರ ಅನ್ವಯ ಯುಜಿಸಿಯಿಂದ ಸಂಶೋಧನಾ ವೇತನ ಪಡೆಯುತ್ತಿರುವ ಎಲ್ಲ ಪೂರ್ಣಕಾಲಿಕ ಸಂಶೋಧನಾರ್ಥಿಗಳು ಕಡ್ಡಾಯವಾಗಿ ವಿಶ್ವವಿದ್ಯಾಲಯದ ವಿಜ್ಞಾನ ಹಾಗೂ ಕಲಾ ಕಾಲೇಜುಗಳಲ್ಲಿ ವಾರಕ್ಕೆ ಕನಿಷ್ಟ 4 ಗಂಟೆಗಳ ಬೋಧನ ಕಾರ್ಯಭಾರವನ್ನು ನಿವರ್ಹಿಸಬೇಕು ಎಂದು ತುಮಕೂರು ವಿಶ್ವವಿದ್ಯಾಲಯ ಆದೇಶಿಸಿದೆ. ಅಲ್ಲದೆ, ಇದಕ್ಕೆ ಬದ್ಧರಾಗದವರ ಮೇಲೆ ಸೂಕ್ತ ಶಿಸ್ತು ಕ್ರಮ ಜರಗಿಸುವುದಾಗಿ ‘ಅಂತಿಮ ಎಚ್ಚರಿಕೆ ಪತ್ರ’ವನ್ನೂ ಕಳುಹಿಸಿರುವುದು ಸಂಶೋಧನಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಸಂಶೋಧನಾರ್ಥಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಯುಜಿಸಿ ನಿಯಮಾವಳಿಯ ಕ್ಲಾಸ್ 9(2) ಪ್ರಕಾರ ಬೋಧನ ಕಾರ್ಯಭಾರದ ಅಗತ್ಯ ಕೋರ್ಸ್ ವರ್ಕ್ ಸಂದರ್ಭಕ್ಕಷ್ಟೇ ಸೀಮಿತವಾಗಿದ್ದು, ಕೋರ್ಸ್ ವರ್ಕ್ ಮುಗಿಸಿದ ಸಂಶೋಧನಾರ್ಥಿಗಳು ಬೋಧನ ಕಾರ್ಯಭಾರ ನಿರ್ವಹಿಸುವ ಅಗತ್ಯವಿಲ್ಲ. ಈ ವಿಚಾರವಾಗಿ ವಿಶ್ವವಿದ್ಯಾಲಯಕ್ಕೆ ಅನೇಕ ಮನವಿ ಪತ್ರಗಳನ್ನು ಸಲ್ಲಿಸಿದ್ದರೂ, ಅವುಗಳಿಗೆ ಸೂಕ್ತ ಉತ್ತರ ನೀಡದೆ, ಮೊದಲು ಬೋಧನೆ ಆಮೇಲೆ ಸಂಶೋಧನೆ ಎಂಬ ಧಾಟಿಯಲ್ಲಿ ಉತ್ತರಿಸಿದೆ. ಇದರಿಂದ ನಮ್ಮ ಸಂಶೋಧನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ” ಎಂದು ಅವಲತ್ತುಕೊಂಡಿದ್ದಾರೆ.

“ಕ್ಲಾಸ್ 9(2) ವಿಚಾರದಲ್ಲಿ ಸ್ಪಷ್ಟೀಕರಣ ಕೋರಿ ಯುಜಿಸಿಗೆ ಇಮೇಲ್ ಮಾಡಿದ್ದರೂ ಈವರೆಗೆ ಯುಜಿಸಿಯಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ವಿಶ್ವವಿದ್ಯಾನಿಲಯ ಹಾಗೂ ಯುಜಿಸಿಯ ಈ‌ ನಡೆಯಿಂದ‌ ಸಂಶೋಧನಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ವಿಶ್ವವಿದ್ಯಾಲಯವು ದುರುದ್ದೇಶಪೂರಿತವಾಗಿ ಹಾಗೂ ನಿಯಮಬಾಹಿರವಾಗಿ, ಯುಜಿಸಿಯಿಂದ ಸಂಶೋಧನ ವೇತನ‌ ಪಡೆಯುತ್ತಿದ್ದೇವೆ ಎಂಬುದನ್ನಷ್ಟೇ ಗುರಿಯಾಗಿಸಿಕೊಂಡು, ತಮ್ಮನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ” ಎಂದು ಸಂಶೋಧನಾರ್ಥಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳ್ತಂಗಡಿ| ಬಾಲಕಿಯ ಮಾನಭಂಗ ಯತ್ನ: ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಕೇಸ್ ದಾಖಲು

ತುಮಕೂರು ವಿಶ್ವವಿದ್ಯಾಲಯದ ಕುಲಸಚಿವ ಮಹೇಶ್ ಈ ದಿನ.ಕಾಮ್‌ನೊಂದಿಗೆ ಪ್ರತಿಕ್ರಿಯಿಸಿದ್ದು, “ಎಲ್ಲಾವನ್ನು ನಿಯಮಾನುಸಾರವೇ ಮಾಡಿದ್ದೇವೆ. ಯಾವುದನ್ನು ನಿಯಮ ಬಿಟ್ಟು ಮಾಡಿಲ್ಲ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...