ತುಮಕೂರು | ನಗರ ಸ್ಥಳೀಯ ಸಂಸ್ಥೆ : ಅನಧಿಕೃತ ಆಸ್ತಿಗಳನ್ನು ಬಿ-ಖಾತೆಯಲ್ಲಿ ದಾಖಲಿಸಲು 3 ತಿಂಗಳ ಕಾಲಾವಕಾಶ

Date:

ತುಮಕೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳನ್ನು ಹೊಂದಿರುವವರು ಬಿ-ಖಾತಾಗೆ ದಾಖಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.

 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಆಸ್ತಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ಕೊಟ್ಟಿದೆ. ಬಿ-ಖಾತಾ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅನಧಿಕೃತ ಬಡಾವಣೆಗಳ ಕಟ್ಟಡ ಮಾಲೀಕರು/ನಿವೇಶನದಾರರು ಮೂರು ತಿಂಗಳೊಳಗೆ ಬಿ-ಖಾತಾಗೆ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿ-ಖಾತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಬಡಾವಣೆಗಳ ಕಟ್ಟಡ ಮಾಲೀಕರು/ನಿವೇಶನದಾರರಿಗೆ ಬಿ-ಖಾತಾ ನೀಡಲು ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 18 ರಿಂದ ಮೂರು ತಿಂಗಳೊಳಗೆ ನಗರ ಸ್ಥಳೀಯ ಸಂಸ್ಥೆಯ ಅನಧಿಕೃತ ಬಡಾವಣೆಯಲ್ಲಿನ ನಿವೇಶನದಾರರಿಗೆ ಬಿ-ಖಾತಾ ನೀಡುವ ಕಾರ್ಯವನ್ನು ಆಂದೋಲನ ರೀತಿಯಲ್ಲಿ ಆರಂಭಿಸಿದ್ದೇವೆ ಎಂದು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001069844

 ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸುಮಾರು 70,000ಕ್ಕೂ ಅಧಿಕ ಅನಧಿಕೃತ ಆಸ್ತಿಗಳಿದ್ದು, ಅರ್ಹವಾದ ಆಸ್ತಿಗಳಿಗೆ ಬಿ-ಖಾತಾ ನೀಡಲು ಫೆ.18ರಿಂದ ಆಯಾ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ತೆರೆದು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. 

 ಆಸ್ತಿದಾರರು 2024ರ ಸೆಪ್ಟೆಂಬರ್ 10ಕ್ಕಿಂತ ಮುಂಚೆ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗಿರುವವರು ಮಾತ್ರ ಬಿ-ಖಾತಾ ಮಾಡಿಸಲು ಅರ್ಹರಿರುತ್ತಾರೆ. ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ಹಾಗೂ ಭೂಪರಿವರ್ತನೆಯಾಗದೆ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳನ್ನು ಅನಧಿಕೃತ ಆಸ್ತಿಗಳೆಂದು ಪರಿಗಣಿಸಿ ಬಿ-ಖಾತಾದಲ್ಲಿ ನಮೂದಿಸಲಾಗುವುದು ಎಂದು ತಿಳಿಸಿದರು. 

 ಬಿ-ಖಾತಾದಲ್ಲಿ ದಾಖಲಿಸಲಾಗುವ ಆಸ್ತಿಗಳಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2ರಷ್ಟು ತೆರಿಗೆಯನ್ನು ಹಾಗೂ ನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುವುದು. ಬಿ-ಖಾತಾದಲ್ಲಿ ದಾಖಲಿಸಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸ್ವಾಧೀನಪಡಿಸುವ ನೋಂದಾಯಿತ ಮಾರಾಟ ಪತ್ರ/ದಾನ ಪತ್ರ/ವಿಭಾಗ ಪತ್ರಗಳನ್ನು ಹೊಂದಿರಬೇಕು. ಸರ್ಕಾರಿ ಜಾಗದಲ್ಲಿರುವ ಸ್ವತ್ತು, ಸರ್ಕಾರದ ನಿಗಮ ಮಂಡಳಿಗಳ ಜಾಗ, ನಗರ ಸ್ಥಳೀಯ ಸಂಸ್ಥೆಗಳ ಜಾಗದಲ್ಲಿರುವ ಸ್ವತ್ತುಗಳನ್ನು ಬಿ-ಖಾತಾದಲ್ಲಿ ನಮೂದಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು. 

1001069842

 ಮಹಾನಗರಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ ಮಾತನಾಡಿ, ಅನಧಿಕೃತ ಸ್ವತ್ತುಗಳಿಗೆ ನಮೂನೆ-2ಎ/3ಎ ನೀಡಿದ್ದಲ್ಲಿ ಸದರಿ ಆಸ್ತಿಯನ್ನು ಸಕ್ರಮಗೊಳಿಸಲಾಗಿದೆ ಎಂದು ಆಸ್ತಿ ಮಾಲೀಕರು ಭಾವಿಸುವಂತಿಲ್ಲ. ಬಿ-ಖಾತಾಗೆ ಅನಧಿಕೃತ ಆಸ್ತಿಯನ್ನು ದಾಖಲಿಸಲಿಚ್ಛಿಸುವವರಿಗಾಗಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗುವುದು. ಈ ಕೌಂಟರ್‌ಗಳು ರಜಾ ದಿನಗಳಂದೂ ಸಹ ಕಾರ್ಯನಿರ್ವಹಿಸಲಿವೆ. ಆಸ್ತಿದಾರರು ಬಿ-ಖಾತೆಗೆ ದಾಖಲಿಸಲು ಮದ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಕೌಂಟರ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.  

ಆಸ್ತಿದಾರರು ಬಿ-ಖಾತಾಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ತುಮಕೂರು ಮಹಾನಗರ ಪಾಲಿಕೆ (9945212919 / 9449872599), ತಿಪಟೂರು ನಗರಸಭೆ(9448596379), ಸಿರಾ ನಗರಸಭೆ(8133270041), ಕುಣಿಗಲ್ ಪುರಸಭೆ(08132-220225), ಪಾವಗಡ ಪುರಸಭೆ (9742821910), ಚಿಕ್ಕನಾಯಕನಹಳ್ಳಿ ಪುರಸಭೆ (8660353951), ಮಧುಗಿರಿ ಪುರಸಭೆ (6361773631) ಕೊರಟಗೆರೆ ಪಟ್ಟಣ ಪಂಚಾಯಿತಿ (9964645923) ಗುಬ್ಬಿ ಪಟ್ಟಣ ಪಂಚಾಯಿತಿ (7406644909), ತುರುವೇಕೆರೆ ಪಟ್ಟಣ ಪಂಚಾಯಿತಿ (7026250340) ಹುಳಿಯಾರು ಪಟ್ಟಣ ಪಂಚಾಯಿತಿ(8133256056)ಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...