ತುಮಕೂರು | ಡಿಜಿಟಲ್ ಮಾಧ್ಯಮವನ್ನು ಸಮಾಜದ ಒಳಿತಿಗೆ ಬಳಸಿ : ಸಾಹೇ ವಿವಿ ಕುಲಪತಿ ಡಾ.ಲಿಂಗೇಗೌಡ

Date:

 ತಂತ್ರಜ್ಞಾನದ ಆವಿಷ್ಕಾರದಿಂದಾಗಿ ಡಿಜಿಟಲ್ ಮಾಧ್ಯಮದ ಮಜಲುಗಳು ವ್ಯಾಪಕವಾಗಿದ್ದು, ಪತ್ರಿಯೊಬ್ಬರಿಗೂ ಇದರ ಸೇವೆ ಸಿಗುತ್ತಿದೆ. ಸಮಾಜದ ಒಳಿತಿಗಾಗಿ ಮಾತ್ರ ಈ ಮಾಧ್ಯಮಗಳನ್ನು ಬಳಸಿಕೊಳ್ಳಿ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಪತಿ ಡಾ.ಲಿಂಗೇಗೌಡ ತಿಳಿಸಿದರು.

ತುಮಕೂರು ನಗರದ ಎಸ್ ಎಸ್‌ಎಸ್‌ಐಟಿ ಕ್ಯಾಂಪಸ್ ಆವರಣದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್,ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ,, ಈದಿನ ಡಾಟ್ ಕಾಮ್ ಹಾಗೂ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು (ಪತ್ರಿಕೋದ್ಯಮ ವಿಭಾಗ) ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಡಿಜಿಟಲ್ ಮಾಧ್ಯಮ: ಸವಾಲು ಮತ್ತು ಸಾಧ್ಯತೆಗಳು” ಕುರಿತು ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,  

1001232907

ಮಾಧ್ಯಮಗಳ ಮಹತ್ವ ಮತ್ತು ಅವುಗಳ ಅಗತ್ಯತೆಯನ್ನು ಅರಿತುಕೊಳ್ಳಬೇಕು. ಆ ಮೂಲಕ ಅಭಿವೃದ್ಧಿ ಮತ್ತು ಜನಪರ ಒಳಿತಿಗಾಗಿ ಮಾಧ್ಯಮಗಳ ಬಳಕೆಯಾಗಬೇಕು. ಪತ್ರಿಕೋದ್ಯಮ ವಿದ್ಯಾರ್ಥಿಗಳು ಡಿಜಿಟಲ್ ಮಾಧ್ಯಮ ತಮ್ಮ ಮುಂದೆ ಇಟ್ಟಿರುವ ಸವಾಲುಗಳನ್ನು ಎದುರಿಸಿ ತಮ್ಮ ಜೀವನದಲ್ಲಿ ರೂಪಿಸಿಕೊಳ್ಳಬೇಕು ಎಂದು  ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಮಾತನಾಡಿ ಪ್ರಸ್ತುತ ಎಲ್ಲಾ ಕ್ಷೇತ್ರ ಗಳಲ್ಲೂ ಸವಾಲೇ ಆಗಿದೆ. ಎಲ್ಲಾ ಸವಾಲುಗಳನ್ನು ಎದುರಿಸುವ ಶಕ್ತಿ ಸಾಮರ್ಥ್ಯಗಳನ್ನು ಬಳಸಿಕೊಳ್ಳಬೇಕಿದೆ. ಒಂದು ಕಾಲದಲ್ಲಿ ಶಕ್ತಿ ಬಲಕ್ಕಿತ್ತು, ಇಂದು ಕೌಶಲ್ಯಕ್ಕಿದೆ. ಕೌಶಲ್ಯ ಮತ್ತು ತಂತ್ರಜ್ಞಾನ ವನ್ನು ಹೇಗೆ ಬಳಸಿಕೊಳ್ಳುತ್ತೇವೆ, ಅದರ ಮೇಲೆ ನಮ್ಮ ಭವಿಷ್ಯ ನಿಂತಿರುತ್ತದೆ ಎಂದರು. 

1001232909

ಹಿಂದೆ ಮುದ್ರಣ ಪತ್ರಿಕೆ ತುಂಬಾ ಜನ ಓದುತ್ತಿದ್ದರು. ಈಗ ಜನರಿಗೆ ಪತ್ರಿಕೆ ಓದಲು ಸಮಯ ವಿಲ್ಲವೋ, ಆಸಕ್ತಿ ಇಲ್ಲವೋ, ಮನಸ್ಸಿಲ್ಲವೋ ಗೊತ್ತಿಲ್ಲ. ಸುದ್ದಿ ಮಾಧ್ಯಮಗಳು ಆರ್ಕಷಿತ ಮತ್ತು ವರ್ಣರಂಜಿತ ಸುದ್ದಿಗಳು ಬೇಕು. ಸುದ್ದಿ ಹೊರಗೆ ಬರುವ ತನಕ ಅದು ನಿಮ್ಮ ನಿಯಂತ್ರಣದಲ್ಲಿ ಇರುತ್ತದೆ. ಸುದ್ದಿ ಹೊರಗೆ ಬಂದ ಮೇಲೆ ಅದು ನಿಮ್ಮನ್ನು ಆಳುತ್ತದೆ. ಸುದ್ದಿಗಳು ನ್ಯಾಯ, ಸತ್ಯ, ಧರ್ಮದ ನಿಟ್ಟಿನಲ್ಲಿ ಒಳ್ಳೆಯ ಆಲೋಚನೆ ಉತ್ತಮ ಸುದ್ದಿಗಳನ್ನು ನೀಡಲು ಸಿದ್ದರಾಗಿ ಎಂದು ಭವಿಷ್ಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅವರು ಕಿವಿ ಮಾತುಗಳನ್ನು ಹೇಳಿದರು. 

ತುಮಕೂರು ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ  ಮಾತನಾಡಿ, ಸುದ್ದಿಗಳನ್ನು ಮಾಡುವಾಗ ಹಳ್ಳಿಯ ಮತ್ತು ರೈತರ ಸಮಸ್ಯೆ, ಆದರ್ಶ ರೈತ, ಆದರ್ಶ ಕೃಷಿಕ, ಶುಂಠಿ, ನಾಟಿ ಈರುಳ್ಳಿ, ಉಪ್ಪಿನಕಾಯಿ ಮಾಡುವ ಹಳ್ಳಿಯ ಪ್ರತಿಭೆ ಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ರೈತರು, ಸಮಾಜ ಸುಧಾರಕರು, ನಾಡಿಗಾಗಿ ಶ್ರೀಗಂಧದಂತೆ ಶ್ರಮಿಸಿದವರ ಬಗ್ಗೆ ಸುದ್ದಿಗಳನ್ನು ಪ್ರಸಾರ ಮಾಡುವತ್ತ ಮುಂದಾಗುವ ಅಗತ್ಯತೆಯನ್ನು ಒತ್ತಿ ಹೇಳಿದರು.

1001232910

ಈದಿನ ಡಾಟ್ ಕಾಮ್‌ನ ಸಮುದಾಯ ವಿಭಾಗ ದ ಮುಖ್ಯಸ್ಥ  ಡಾ. ಹೆಚ್. ವಿ. ವಾಸು  ಮಾತನಾಡಿ ಸಮುದಾಯದ ಒಳಿತಿಗಾಗಿ ಮಾಧ್ಯಮ ಕೆಲಸ ಮಾಡಬೇಕು. ನಾವೆಲ್ಲರು ಸೇರಿ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು. 

ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಡಾ. ಹೇಮಲತಾ ಪಿ. ಮಾತನಾಡಿ ವಿದ್ಯಾರ್ಥಿ ಗಳಿಗೆ ಹೊಸದಾಗಿ ಇನ್ನಷ್ಟು ತಂತ್ರಜ್ಞಾನ ಕಲಿತು-ಬಳಸಿ ಮುಂದಿನ ಉದ್ಯೋಗ ಭವಿಷ್ಯವನ್ನು ಖಾತ್ರಿ ಮಾಡಿಕೊಳ್ಳಿ ಎಂದರು.

ಸಮಾರೋಪ ಮಾತುಗಳನ್ನಾಡಿದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ಮುಂದಿನ ದಿನದಲ್ಲಿ ವೈದ್ಯಕೀಯ ಮತ್ತು ತಂತ್ರಜ್ಞಾನ ಶಿಕ್ಷಣದಲ್ಲಿ ಮಾಧ್ಯಮಗಳ ಪಾತ್ರ, ವಿವಿಧ ಮಾಧ್ಯಮಗಳ ಅನಿವಾರ್ಯತೆ ಮತ್ತು ಅಗತ್ಯತೆಯ ವಿಷಯಗಳನ್ನು ಕುರಿತ ಕಾರ್ಯಾಗಾರಗಳನ್ನು ಮುದ್ರಣ ಮತ್ತು ಟೆಲಿವಿಷನ್ ಮಾಧ್ಯಮ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಮುಂದುವರಿಸಲಾಗುವುದು ಎಂದರು. 

ಈದಿನ ಡಾಟ್ ಕಾಮ್‌ನ ರಿಸರ್ಚ್ ಟೀಮ್‌ನ ಮುಖ್ಯಸ್ಥರಾದ ಭರತ್ ಹೆಬ್ಬಾಳ್,  ಕನ್ನಡ ಫ್ಯಾಕ್ಟ್ ಚೆಕ್ ನ ಸಂಪಾದಕ ಮುತ್ತುರಾಜು, ಪತ್ರಕರ್ತರಾದ ಚಂದನ್, ಅನಿಲ್ ಕುಮಾರ್,  ಸಂತೋಷ್, ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಎಂ.ಪಿ.ಶ್ವೇತ ಕಾರ್ಯಕ್ರಮ ನಿರೂಪಿಸಿದರೆ, ರವಿ ವಂದನಾರ್ಪಣೆ ಮಾಡಿದರೆ, ಉಪನ್ಯಾಸಕಿ ಶಿಲ್ಪಶ್ರೀ ಸ್ವಾಗತ ಮಾಡಿದರು. ತುಮಕೂರು ಸೇರಿದಂತೆ ರಾಜ್ಯದ ವಿವಿದ ಭಾಗಗಳಿಂದ ಆಗಮಿಸಿ, ಕಾರ್ಯಾಗಾರದಲ್ಲಿ ಭಾಗವಹಿಸಿದ್ದ 130 ಮಂದಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...