ತುಮಕೂರು | ಸಾಮಾಜಿಕ ಮಾಧ್ಯಮವನ್ನೇ ಅಭಿವ್ಯಕ್ತಿ ಮಾಧ್ಯಮವಾಗಿ ಬಳಸಿ : ಡಾ. ಎಚ್.ವಿ.ವಾಸು

Date:

 ಸುದ್ದಿಗಳೇ ಮನರಂಜನೆ ಆಗುತ್ತಿರುವ ಸಂದರ್ಭದಲ್ಲಿ ನ್ಯೂಸ್ ನೋಡುವವರ ಸಂಖ್ಯೆಯೇ ಗಣನಿಯವಾಗಿ ಇಳಿಕೆಯಾಗುತ್ತಿದೆ. ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳಬೇಕು ಎಂದು ಈದಿನ ಡಾಟ್ ಕಾಮ್ ಸಮುದಾಯ ವಿಭಾಗದ ಮುಖ್ಯಸ್ಥ ಡಾ. ಎಚ್.ವಿ. ವಾಸು ತಿಳಿಸಿದರು.

  ತುಮಕೂರು  ನಗರದ ಎಸ್ ಎಸ್‌ಎಸ್‌ಐಟಿ ಕ್ಯಾಂಪಸ್ ಆವರಣದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್,ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಈದಿನ ಡಾಟ್ ಕಾಮ್ ಹಾಗೂ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು (ಪತ್ರಿಕೋದ್ಯಮ ವಿಭಾಗ) ಇವರ ಸಹಯೋಗದಲ್ಲಿ ಎರಡನೇ ದಿನವಾದ ಇಂದು (ಶುಕ್ರವಾರ) ನಡೆದ “ಡಿಜಿಟಲ್ ಮಾಧ್ಯಮ: ಸವಾಲು ಮತ್ತು ಸಾಧ್ಯತೆಗಳು” ಕುರಿತು ಕಾರ್ಯಾಗಾರದಲ್ಲಿ ‘ಹೊಸ ಮಾಧ್ಯಮ-ಅದರಲ್ಲಿ ಹೊಸದೇನಿದೆ’ ವಿಷಯ ಮಂಡಿಸಿದ ಅವರು, ಸಾಮಾಜಿಕ ಸಂಪರ್ಕವನ್ನು ಗಟ್ಟಿಗೊಳಿಸಲು ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಸಾಮಾಜಿಕ ಜಾಲತಾಣದಿಂದ ಸಾಮಾಜಿಕ ಸಂಪರ್ಕ ಬೆಳೆಯುವುದಿಲ್ಲ ಎಂದರು.

1001229494

ಡಿಜಿಟಲ್ ಮಾಧ್ಯಮದಲ್ಲಿ ಕಂಟೆಟ್ ಕ್ರೀಯೆಟ್ ಮಾಡಲು ಮುಕ್ತ ಅವಕಾಶವಿರುವುದರಿಂದ ಸಾಮಾನ್ಯ ಜನರಲ್ಲಿಯೂ ಸೃಜನಶೀಲತೆ ಹೆಚ್ಚಾಗಿದೆ. ಡಿಜಿಟಲ್ ಮಾಧ್ಯಮದ ಸಾರ್ವತ್ರಿಕ ಶೇರ್ ಬಟನ್‌ನಿಂದ ಗ್ರಾಹಕರೇ ವಿತರಕರಾಗಿದ್ದಾರೆ. ಲೋಕಲ್ ಮತ್ತು ಹೈಪರ್ ಲೋಕಲ್ ಕಂಟೆಟ್ ಕ್ರೀಯೆಟ್ ಮಾಡಲು ಡಿಜಿಜಿಟಲ್ ಮಾಧ್ಯಮದಲ್ಲಿ ಹೆಚ್ಚು ಅವಕಾಶಗಳಿವೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಸಾಮಾನ್ಯ ಜನರ ಜೊತೆ ಸಂಪರ್ಕ ಗಟ್ಟಿಗೊಳಿಸಿಕೊಳ್ಳಬೇಕು. ಸ್ಕ್ರೀನ್ ಜೊತೆ ಕನೇಕ್ಟ್ ಆಗಿರುವುದರಿಂದ ಜನರ ನಡುವಿನ ಒಡನಾಟವನ್ನೇ ಕಡಿದುಕೊಂಡು, ಸ್ಕ್ರೀನ್ ಗೆ ಕನೇಕ್ಟ್ ಆಗಿದ್ದಾರೆ. ಇದು ಸಮಾಜದ ಆರೋಗ್ಯದ ದೃಷ್ಠಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಎಂದು ಡಾ. ಎಚ್.ವಿ. ವಾಸು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಜಾಲತಾಣಗಳ ಮಾಲೀಕರು ಆಳುವ ಸರ್ಕಾರಗಳ ಭಾಗವಾದರೆ ಅಥಾವ ಅವರ ಪರವಾಗಿದ್ದರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.

1001229547

ಈದಿನ ಡಾಟ್ ಕಾಮ್ ರಿಸರ್ಚ್ ಟೀಮ್ ಮುಖ್ಯಸ್ಥ ಭರತ್ ಹೆಬ್ಬಾಳ್ ಅವರು ‘ಸಾಮಾಜಿಕ ಬದಲಾವಣೆಯಲ್ಲಿ ಸಮೀಕ್ಷೆ ಅಧ್ಯಯನದ ಪಾತ್ರ’ ವಿಷಯ ಕುರಿತು ಮಾತನಾಡಿ, ಒಬ್ಬರ ಅಭಿಪ್ರಾಯ ಇಡೀ ಸಮಾಜದ ಅಭಿಪ್ರಾಯ ಎಂದು ಕೃತಕ ಜನಾಭಿಪ್ರಾಯ ರೂಪಿಸುವ ಮೂಲಕ ಜನರ ನಿಜ ಅಭಿಪ್ರಾಯವನ್ನು ಗೌಣವಾಗಿಸಲಾಗುತ್ತಿದೆ. ಜನರ ನೈಜ ಅಭಿಪ್ರಾಯ ತಿಳಿಯ ಬೇಕಾದರೇ ಸಮೀಕ್ಷೆ ಅಧ್ಯಯನಗಳು ಅಗತ್ಯವಾಗಿದೆ. ಸಮೀಕ್ಷೆ ಅಧ್ಯಯನದಿಂದ ಮಾತ್ರ ಸಾಮಾಜಿಕ ಪರಿರ್ವತೆನೆ ಸಾಧ್ಯವಿದೆ. ಸಮಾಜಕ್ಕೆ ಕನ್ನಡಿ ಹಿಡಿಯಲು ಇರುವ ಏಕೈಕ ಮಾರ್ಗವು ಹೌದು ಎಂದರು.

1001229548

ಕನ್ನಡ ಫ್ಯಾಕ್ಟ್ ಚೆಕ್ ಸಂಪಾದಕ ಮುತ್ತುರಾಜು ಅವರು ‘ಫ್ಯಾಕ್ಟ್ ಚೆಕ್ – ಯಾವುದು ನಿಜ?’ ಕುರಿತು ಮಾತನಾಡಿ, ಹೆಟ್ ನ್ಯೂಸ್ ಮತ್ತು ಫೇಕ್ ನ್ಯೂಸ್‌ಗಳ ಬಗ್ಗೆ ಎಚ್ಚರವಹಿಸಬೇಕು. ಅನುಮಾನ ಬಂದ ಸುದ್ದಿಗಳನ್ನು ಪರಿಶೀಲಿಸದೆ ಹಂಚ ಬಾರದು. ಡಿಜಿಟಲ್ ಆರೆಸ್ಟ್ ಎನ್ನುವುದೆಲ್ಲ ಸುಳ್ಳು, ಇಂತಹ ಕರೆಗಳಿಗೆ ಪ್ರತಿಕ್ರಿಯಿಸಬಾರದು. ಎಐ ಕಾಲದಲ್ಲಿ ಏನು ಬೇಕಾದರು ಎಡಿಟ್ ಮಾಡಬಹುದು. ಹಾಗಾಗಿ ಸುಳ್ಳು ಸುದ್ದಿ ಬಗ್ಗೆ ತಿಳಿದುಕೊಳ್ಳಲು ಫ್ಯಾಕ್ಟ್ ಚೆಕ್ ಮಾಡುವ ಪತ್ರಿಕೆ, ವೆಬ್‌ಸೈಟ್ ನೆರವು ಪಡೆದುಕೊಳ್ಳಿ. ಮೊಸಕ್ಕೊಳಗಾದ ತಕ್ಷಣ ಪೊಲೀಸ್‌ಗೆ ದೂರು ನೀಡಿ. ಹಾಗೇ ಆ ಬಗ್ಗೆ ಅರಿವು ಮೂಡಿಸಿ. ಫೆಕ್ ನ್ಯೂಸ್ ತಡೆಯಲು ಮೊದಲು ಸಾಮಾನ್ಯ ಜ್ಞಾನ ಉಪಯೋಗಿಸಿ, ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಈ ಮೂರು ವಿಚಾರ ಗೋಷ್ಠಿಗಳ ಅಧ್ಯಕ್ಷತೆಯನ್ನು ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲರಾದ ಡಾ ಮಮತ ಜಿ ವಹಿಸಿದ್ದರು.

1001229493

 ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ.ಟಿ.ಮುದ್ದೇಶ್ , ಸಹಾಯಕ ಪ್ರಧ್ಯಾಪಕರಾದ ಡಾ.ಜ್ಯೋತಿ, ಎಂ.ಪಿ. ಶ್ವೇತಾ, ಎನ್.ಜಿ.ನವೀನ್, ರವಿಕುಮಾರ್ ಸಿ.ಎಚ್., ಸಿದ್ದಾರ್ಥ ಪದವಿ ಕಾಲೇಜಿನ ಅಧ್ಯಾಪಕರಾದ ಡಾ.ರಂಗಸ್ವಾಮಿ, ಮಣಿ ಎಚ್.ಜಿ., ಶಿಲ್ಪಶ್ರೀ, ಪತ್ರಕರ್ತರಾದ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಸಂತೋಷ್ ಎಚ್.ಎಂ, ಚಂದನ್, ರೇಡಿಯೋ ಸಿದ್ದಾರ್ಥದ ಗೌತಮ್, ವಿಶಾಲ್, ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...