ತುಮಕೂರು | ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಯುವಕ: ವಿಡಿಯೋ ವೈರಲ್

Date:

ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಯುವಕನೋರ್ವನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ವಿಡಿಯೋ ವೈರಲಾಗುತ್ತಿದ್ದಂತೆಯೇ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಗುಬ್ಬಿ ಪಟ್ಟಣದಲ್ಲಿ ಯುವಕರಿಬ್ಬರು ಮಾರ್ಕೆಟ್ ರಸ್ತೆಯಲ್ಲಿ ಸ್ನೇಹಿತರೊಂದಿಗೆ ತನ್ನ ಹುಟ್ಟು ಹಬ್ಬವನ್ನು ತಲ್ವಾರ್ ಎಂಬ ಹಿಡಿದು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡಿದ್ದು, ಗುಬ್ಬಿ ಪಟ್ಟಣದ ಜನತೆಯಲ್ಲಿ ಭಯ ಹುಟ್ಟಿಸಿದೆ.

ತುಮಕೂರು ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳು ನಡೆಯುತ್ತಿವೆ ಎಂಬ ಸುದ್ದಿ ಕೆಲ ದಿನಗಳಿಂದ ಸದ್ದು ಮಾಡುತ್ತಿರುವುದು ಒಂದೆಡೆಯಾದರೆ, ಗುಬ್ಬಿ ಪಟ್ಟಣದಲ್ಲಿ ಯಾವುದೇ ಕಾನೂನಿನ ಭಯವಿಲ್ಲದೆ ಯುವಕನೊಬ್ಬ ರೌಡಿಯ ರೀತಿ ತಲ್ವಾರ್ ಹಿಡಿದು ಬಾಸ್ ಎಂಬ ಕೇಕ್ ಕತ್ತರಿಸುವ ದೃಶ್ಯವನ್ನು ವಿಡಿಯೋ ಮಾಡಿ ಆತನ ಸ್ನೇಹಿತರು ತಮ್ಮ ಸ್ಟೇಟಸ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡು ಭಯದ ವಾತಾವರಣ ಸೃಷ್ಟಿಸಿರುವುದು ಮತ್ತೊಂದೆಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 17 at 10.56.41 AM

ಗುಬ್ಬಿಯಲ್ಲಿ ಎಂದೂ ಈ ಮಟ್ಟದ ಹುಟ್ಟುಹಬ್ಬ ಆಚರಣೆ ಮಾಡಿದ್ದು ಕಂಡಿಲ್ಲ ಎನ್ನುವ ಜನ ಈ ಆಚರಣೆ ಬಗ್ಗೆ ಖಂಡಿಸುತ್ತಿದ್ದಾರೆ. ಬಾಸ್ ಎಂಬ ಅಕ್ಷರದ ಕೇಕ್ ಕತ್ತರಿಸಲು ತಲ್ವಾರ್ ಬಳಸಿದ ಬಗ್ಗೆ ಪೊಲೀಸರು ಜಾಣ ಮೌನ ತಾಳಿದ್ದಾರೆ. ವಿಷಯ ತಿಳಿದು ಯುವಕರ ವಿಚಾರಣೆ ಮಾಡಿ ಪ್ರಭಾವಿಗಳ ಶಿಫಾರಸ್ಸಿಗೆ ಹಾಗೆಯೇ ಮರಳಿಸಿರುವ ಆರೋಪ ಕೂಡ ಕೇಳಿ ಬಂದಿದೆ.

ಮಾರ್ಕೆಟ್ ರಸ್ತೆಯಲ್ಲಿ ಹುಟ್ಟು ಹಬ್ಬ ಆಯೋಜನೆ ಮಾಡಿದ ಯುವಕರು ಬಾಸ್ ಎಂಬ ಕೇಕ್ ತಂದು ಸ್ನೇಹಿತರಾದ ಶಾರುಖ್ ಹಾಗೂ ಮುಗಲ್ ಪಾಷ ಎಂಬ ಇಬ್ಬರು ಯುವ ಮುಖಂಡರ ಜನುಮ ದಿನ ಆಚರಣೆಯನ್ನು ಮಾಡಿದ್ದು, ಈ ಪೈಕಿ ಓರ್ವ ತಲ್ವಾರ್ ಬಳಸಿ ಕೇಕ್ ಕತ್ತರಿಸಿದ್ದು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಆತಂಕ ಮೂಡಿಸಿದ ಈ ಘಟನೆ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಗಮನ ಹರಿಸಬೇಕಿದೆ ಎಂದು ಸಾರ್ವಜನಿಕರ ಒತ್ತಾಯವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...