ತುಮಕೂರು | ಸಂವಿಧಾನ ಉಳಿವಿಗಾಗಿ ಮತ ಚಲಾಯಿಸಿ: ಮಾಜಿ ಸಚಿವೆ ಲಲಿತಾ ನಾಯಕ್

Date:

ದೇಶದಲ್ಲಿ ಬಹುತ್ವವನ್ನು ಉಳಿಸಿ ಬೆಳೆಸುವ ಮತ್ತು ಸಂವಿಧಾನವನ್ನು ರಕ್ಷಿಸುವ ನೆಲೆಯಲ್ಲಿ ಹಾಗೂ ಸರ್ವಜನಾಂಗದ ಶಾಂತಿಯ ತೋಟ ಸಂರಕ್ಷಿಸಿಕೊಳ್ಳಲು ರಾಜ್ಯದ ಜನರು ಮತ ಚಲಾಯಿಸಬೇಕು ಎಂದು ಮಾಜಿ ಸಚಿವೆ ಬಿ ಟಿ ಲಲಿತಾನಾಯಕ್ ತಿಳಿಸಿದರು.

ತುಮಕೂರು ನಗರದ ಜನಚಳವಳಿ ಕೇಂದ್ರದಲ್ಲಿ ಜಾಗೃತಿ ನಾಗರಿಕರು ಕರ್ನಾಟಕ ಮತ್ತು ತುಮಕೂರು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಜಾಗೃತಿ ಆಂದೋಲನ ಕುರಿತು ನಡೆದ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.

“ಮತದಾರರು ಯಾವುದೇ ಅಮಿಷಗಳಿಗೆ ಒಳಗಾಗದಂತೆ ದೇಶದ ಸಾಮರಸ್ಯ ಪರಂಪರೆಯ ಪರವಾಗಿ ನಿಲ್ಲಬೇಕು. ನಿರ್ಭೀತಿಯಿಂದ ಚುನವಾಣೆ ನಡೆಯಬೇಕು ಮತ್ತು ಸಂವಿಧಾನದ ಆಶಯಗಳಿಗೆ ಯಾವುದೇ ಧಕ್ಕೆ ಆಗಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏಪ್ರಿಲ್ 1 ರಿಂದ 8 ರವರೆಗೆ ರಾಜ್ಯವ್ಯಾಪಿ ಸಂಕಲ್ಪ ಯಾತ್ರೆಯನ್ನು ಬೆಂಗಳೂರಿನಿಂದ ಬೆಳಗಾವಿವರೆಗೆ ಹಮ್ಮಿಕೊಂಡು ಮತಜಾಗೃತಿ ಅಭಿಯಾನ ಪ್ರಾರಂಭಿಸಲಾಗಿದೆ. ತುಮಕೂರಿನ ಜೀವಪರ ಮತ್ತು ಸಂವಿಧಾನ ಪ್ರಿಯರೇ ಈ ಜಾಗೃತಿ ಅಭಿಯಾನಕ್ಕೆ ಕೈಜೊಡಿಸಬೇಕು” ಎಂದು ಮನವಿ ಮಾಡಿದರು.

ಪ್ರಗತಿಪರ ಚಿಂತಕ ಸಿ ಯತಿರಾಜ್ ಮತ್ತು ಪ್ರೊ. ಕೆ ದೊರೈರಾಜ್ ಮಾತನಾಡಿ, “ದೇಶದಲ್ಲಿ ಜನಾಂಗೀಯ ದ್ವೇಷ ಮತ್ತು ಧರ್ಮತೀತವಾಗಿ ಪ್ರಜಾಪ್ರಭುತ್ವವನ್ನು ಆಳುವ ಯಾವುದೇ ಪಕ್ಷಗಳು ಉಳಿದಿಲ್ಲ. ದೇಶದಲ್ಲಿ ಶಾಂತಿ, ಸೌಹಾರ್ದತೆಯನ್ನು ಬಯಸುವ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಟ್ಟಿಗೊಳಿಸುವ ಮನಸ್ಸುಗಳು ಸಂವಿಧಾನದ ಉಳಿವಿಗಾಗಿ, ರೈತರ ಉಳಿವಿಗಾಗಿ ಮತ್ತು ಭವಿಷ್ಯದಲ್ಲಿ ನೆಮ್ಮದಿಯ ಬದುಕಿಗಾಗಿ ಉತ್ತಮರನ್ನು ಆಯ್ಕೆ ಮಾಡಲು ಎಚ್ಚರವಹಿಸಿ ಮತ ಚಲಾಯಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ 

ಸಭೆಯಲ್ಲಿ ಸಂವಿಧಾನ ರಕ್ಷಿಸಿ- ಪ್ರಜಾಪ್ರಭುತ್ವ ಉಳಿಸಿ ಜಾಗೃತಿ ನಾಗರಿಕರು-ಕರ್ನಾಟಕದ ಮುಖಂಡರುಗಳಾದ ಡಾ ಕೆ ಮರುಳಸಿದ್ದಪ್ಪ, ಹಾಗೂ ರೈತಮುಖಂಡರು, ತುಮಕೂರು ಪ್ರಗತಿಪರ ಸಂಘಟನೆಗಳ ಒಕ್ಕೂಟ ಪದಾಧಿಕಾರಿಗಳಾದ ಸೈಯದ್‌ ಮುಜೀಬ್, ತಾಜುದ್ದೀನ್‌ ಶರೀಫ್, ಮುರುಗೇಶ್ ಫ್ರಾಂಕ್ಲಿನ್ ಕೃಷ್ಣಮೂರ್ತಿ, ಅರುಣ್ ಸೇರಿದಂತೆ  ವಿವಿಧ ಸಂಘನೆಗಳ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...