ತುಮಕೂರು | ಭೂಮಿ ವಸತಿ ಕೊಡದೆ, ನಮ್ಮ ವೋಟು ಕೊಡೆವು; ಅಲೆಮಾರಿ ಸಮುದಾಯ ಎಚ್ಚರಿಕೆ

Date:

ʼಭೂಮಿ ವಸತಿ ಕೊಡದೆ, ನಮ್ಮ ವೋಟು ಕೊಡೆವುʼ ಎಂಬ ಅಭಿಯಾನದೊಂದಿಗೆ ಹೋರಾಟ ಪ್ರಾರಂಭಿಸಿದ್ದೇವೆ. ನಾವುಗಳು ವಾಸವಿರುವ ಜಾಗಗಳಲ್ಲಿ ಮತ್ತು ಪ್ರತಿ ಗುಡಿಸಲುಗಳಿಗೆ  ಫ್ಲೆಕ್ಸ್‌, ಬ್ಯಾನರ್‌ಗಳನ್ನು ಹಾಕಿದ್ದೇವೆ ಎಂದು ಅಲೆಮಾರಿ ಸಮುದಾಯದ ನಾಗರಾಜು ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಭೂಮಿ-ವಸತಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹಂದಿಜೋಗಿ ಸಮುದಾಯದ ಅನೇಕ ಕುಟುಂಬಗಳು ಹಾಗೂ ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಹಾಗೂ ತಾಲೂಕಿನ ಇತರೆ ಹೋಬಳಿಯ ಅಲೆಮಾರಿ ಕುಟುಂಬಗಳು ಹಲವಾರು ವರ್ಷಗಳಿಂದ ಸೂರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇದೂವರೆಗೂ ತಮಗೆ ಸೂರು ಸಿಕ್ಕಿಲ್ಲ” ಎಂದು ಅವರು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತೊಪಡಿಸಿದ್ದಾರೆ.

“ಮುಂಗಾರು ಪೂರ್ವ ಮಳಗೆ ಗುಡಿಸಲುಗಳು ತುಂಬಿಕೊಂಡು ಒಳಗಡೆ ಇರಲಾಗದೆ ಪರಿತಪಿಸುವಂತಾಗಿದೆ. ಕಳೆದ ವರ್ಷವೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ತಿಮ್ಲಾಪುರ ಕೆರೆ ತುಂಬಿದ ಕಾರಣ ನಮ್ಮ ಗುಡಿಸಲುಗಳು ಕೆರೆಯಂತಾದವು” ಎಂದು ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಮಿ, ವಸತಿ ಹಕ್ಕು ಹೋರಾಟಗಾರರು ಭೇಟಿ ನೀಡಿ, ನಮ್ಮನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಿದರು. 3ರಿಂದ 4 ತಿಂಗಳುಗಳ ಕಾಲ ಗಂಜಿಕೇಂದ್ರದಲ್ಲಿಯೇ ಕಾಲ ಕಳೆದೆವು. ಅಂದು ಬಾರದ ರಾಜಕಾರಣಿಗಳು, ಜನಪ್ರತಿನಿಧಿಗಳು ಇಂದು ನಮ್ಮ ಗುಡಿಸಲುಗಳ ಬಳಿ ಬರುತ್ತಿದ್ದಾರೆ” ಎಂದರು.

“ಹಲವು ವರ್ಷಗಳಿಂದ ಸೂರಿಗಾಗಿ ಅಲೆದರೂ ತಲೆಕೆಡಿಸಿಕೊಳ್ಳದ ಜನಪ್ರತಿನಿಧಿಗಳು ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಗುಡಿಸಲುಗಳ ಬಳಿ ಬರುತ್ತಿದ್ದಾರೆ. ಯಾವುದೇ ರಾಜಕೀಯ ಪಕ್ಷದ ನಾಯಕರು ನಮ್ಮ ವೋಟು ಕೇಳಲು ಬರುವುದಾದರೆ, ಭೂಮಿ ವಸತಿ ಹಕ್ಕುಪತ್ರಗಳನ್ನು ನೀಡುವುದಾಗಿ ಕರಾರು ಪತ್ರಕ್ಕೆ ಸಹಿ ಹಾಕಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದರ್ಗಾದ ಪ್ರವೇಶ ದ್ವಾರಕ್ಕೆ ತಡೆಗೋಡೆ ನಿರ್ಮಾಣ; ತೆರವುಗೊಳಿಸುವಂತೆ ಒತ್ತಾಯ

“ನಿವೇಶನ ಮತ್ತು ವಸತಿಗಾಗಿ ಜನಪ್ರತಿನಿಧಿಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಸೂರು ಕಲ್ಪಿಸಿಕೊಡಲು ಅಲೆದು ಕಂಗಾಲಾಗಿದ್ದೇವೆ. ಹಾಗಾಗಿ, ಈ ಬಾರಿ 2023ನೇ ಮೇ 10ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು, ಮುಖಂಡರುಗಳು ನಮ್ಮಲ್ಲಿ ಮತ ಕೇಳಲು ಬಂದಾಗ ನಾವುಗಳು ನಮ್ಮ ಮತಗಳನ್ನು ಹಣ, ಹೆಂಡಕ್ಕೆ ಮಾರಿಕೊಳ್ಳಬಾರದು. ಭೂಮಿ, ವಸತಿ ಕೊಡದೆ ನಾವು ನಮ್ಮ ಮತಗಳನ್ನು ನೀಡಬಾರದೆಂದು ತೀರ್ಮಾನಿಸಿದ್ದೇವೆ” ಎಂದರು.

ನಮ್ಮ ಮತಗಳು ಬೇಕಾದವರು ಚುನಾವಣೆಯಲ್ಲಿ ಜಯಶೀಲರಾದ ಬಳಿಕ ಭೂಮಿ, ವಸತಿ ನೀಡುತ್ತೇವೆಂದು ಕರಾರಿನೊಂದಿಗೆ ಬಂದಲ್ಲಿ ಮತ ನೀಡುತ್ತೇವೆ” ಎಂದು ತಿಳಿಸಿದರು.

ʼಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವುʼ ಎಂಬ ಅಭಿಯಾನ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಆರಂಭವಾಗಲಿ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...