ತುಮಕೂರು | ಅಂಬೇಡ್ಕರ್ ಅರ್ಥವಾಗದೆ ಭಾರತ ಅರ್ಥವಾಗುವುದಿಲ್ಲ: ಪ್ರಾಧ್ಯಾಪಕ ಡಾ. ಶ್ರೀನಿವಾಸ್

Date:

ಅಂಬೇಡ್ಕರ್ ಅವರನ್ನು ಅರ್ಥಮಾಡಿಕೊಳ್ಳದೇ ಭಾರತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಅಭಿಪ್ರಾಯಪಟ್ಟರು.

ತುಮಕೂರು ವಿಶ್ವ ವಿದ್ಯಾನಿಲಯ ಹಾಗೂ ತಿಪಟೂರಿನ ಜನಸ್ಪಂದನ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿರುವ ‘ಸಂವಿಧಾನ ಅರಿವು’ ಎರಡು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಎಲ್ಲ ಸಂವಿಧಾನಗಳಿಗೂ ಬ್ರಿಟನ್ ಸಂವಿಧಾನವೇ ತಾಯಿ ಎಂದು ಹೇಳಲಾಗುತ್ತದೆ. ಆದರೆ ಬ್ರಿಟನ್ ವಿದ್ವಾಂಸರಾದ ಜಾನ್ ಆಸ್ಟನ್ ಅವರು ಭಾರತದ ಸಂವಿಧಾನವೇ ಅತ್ಯುನ್ನತವಾದ ಸಂವಿಧಾನವೆಂದು ಹೇಳಿದ್ದಾರೆ. ನಮ್ಮ ಸಂವಿಧಾನ ಎಲ್ಲ ಸ್ಥರದ ಜನರಿಗೆ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಒದಗಿಸುತ್ತದೆ. ಅಂಬೇಡ್ಕರ್ ಅವರನ್ನು ಅರ್ಥಮಾಡಿಕೊಳ್ಳದೇ ಭಾರತವನ್ನಾಗಲಿ, ಭಾರತದ ಸಂವಿಧಾನವನ್ನಾಗಲಿ ಅರ್ಥಮಾಡಿಕೊಳ್ಳುವುದು ಅಪೂರ್ಣವಾದಂತೆ” ಎಂದು ಹೇಳಿದರು.

“ನಮ್ಮ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುತ್ತದೆ. ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಸಂವಿಧಾನ ಹಾಗೂ ಕಾನೂನುಗಳ ಮೂಲಕ ಒದಗಿಸಬಹುದು. ಆದರೆ, ಭ್ರಾತೃತ್ವ ಭಾವನೆಯನ್ನು ಸಂಪೂರ್ಣವಾಗಿ ಉಂಟುಮಾಡಲಾರದು. ಅದು ಭಾರತದ ಪ್ರಜೆಗಳಾದ ನಮ್ಮ ಜವಾಬ್ದಾರಿ” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕನ್ನಡದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 73 ಅಂಕ

“ಇಂದು ಹಿಂದೂ ರಾಷ್ಟ್ರ ಅಥವಾ ಇನ್ನಾವುದೇ ರಾಷ್ಟ್ರದ ಕುರಿತು ಮಾತನಾಡುವವರು ಇದ್ದಾರೆ. ಆದರೆ, ನಮ್ಮ ಸಂವಿಧಾನ ಇದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ. ನಮ್ಮ ಸಂವಿಧಾನ ಎಂದಿಗೂ ಭಾರತ ರಾಷ್ಟ್ರಕ್ಕಾಗಿ ಮಾತ್ರ ಅವಕಾಶ ನೀಡುತ್ತದೆ.
ಇದಕ್ಕಾಗಿ ನಾವು ನಮ್ಮ ಸಂವಿಧಾನವನ್ನು ಸಂರಕ್ಷಣೆ ಮಾಡಬೇಕು. ಇದು ನಮ್ಮೆಲ್ಲರ ಜವಾಬ್ದಾರಿ. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಸಂವಿಧಾನ ರಕ್ಷಣೆಗೆ ಸ್ವತಃ ಅಂಬೇಡ್ಕರ್ ಅವರೇ ನಮಗೆ ಆದರ್ಶ” ಎಂದರು.

ಗೋಷ್ಠಿಯಲ್ಲಿ ಜನ ಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ ಬಿ ಶಶಿಧರ್(ಟೂಡ) ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...