ತುಮಕೂರು | ಮಹಿಳೆಯ ಕೊಲೆ: ಮೃತದೇಹವನ್ನು ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Date:

ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಸಮೀಪದ ಮುತ್ಯಾಲಮ್ಮ ದೇವಾಲಯದ ಬಳಿ ಈ ಭೀಕರ ಘಟನೆ ನಡೆದಿದೆ.

ಲಿಂಗಾಪುರದ ಸೇತುವೆ ಬಳಿ ಮಹಿಳೆಯ ಕೊಲೆಯಾದ ಬಳಿಕ ಹೊಟ್ಟೆಯ ಭಾಗ, ಚಿಂಪುಗಾನಹಳ್ಳಿ ಸೇತುವೆ ಬಳಿ ಕರುಳು, ಕೈ ಮತ್ತು ಮುತ್ಯಾಲಮ್ಮ ದೇವಾಲಯದ ಎದುರು ಮತ್ತೊಂದು ಕೈನ ಭಾಗಗಳು ಕಾಣಿಸಿಕೊಂಡಿವೆ. ಇದರ ಜತೆಗೆ ಗರುಡಚಲ ನದಿ ದಡದಲ್ಲಿ ಮೂಟೆಯೊಂದು ಪತ್ತೆಯಾಗಿದೆ. ಬೇರೆ ಕಡೆ ಕೊಲೆ ಮಾಡಿದ್ದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆಯಲ್ಲಿ ತುಂಬಿ ಎಸೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ದೇಹದ ಭಾಗಗಳು ಮಹಿಳೆಯದ್ದ, ಪುರುಷನದ್ದ ಎಂದು ಹುಡುಕಾಟ ನಡೆಸಲಾಗಿತ್ತು. ಕೈ, ಹೊಟ್ಟೆ ಭಾಗ, ಕರುಳಿನ ಭಾಗಗಳು ಸಿಕ್ಕಿವೆ. ಶವದ ವಾಸನೆ ಬಂದ ಹಿನ್ನೆಲೆ ಸ್ಥಳೀಯರು ದೂರು ನೀಡಿದ್ದರು.

ಮಹಿಳೆಯ ಕೊಲೆ ಮಾಡಿದ ನಂತರ ಮೃತ ದೇಹವನ್ನು ತುಂಡು ತುಂಡಾಗಿ ಬೇರ್ಪಡಿಸಿ ಕೈಕಾಲು ಒಂದು ಕಡೆ, ಹೃದಯದ ಭಾಗ ಮತ್ತೊಂದು ಕಡೆ, ಹೊಟ್ಟೆ ಮತ್ತು ಕರುಳಿನ ಭಾಗ ಇನ್ನೊಂದು ಕಡೆ, ತಲೆಬುರುಡೆ ಮತ್ತು ಮುಖವೇ ಕಾಣದಂತೆ ಕತ್ತರಿಸಿ ಕಪ್ಪು ಬಣ್ಣದ ಕವರ್‌ನಲ್ಲಿ ಹಾಕಿ ರಸ್ತೆಯುದ್ದಕ್ಕೂ ಎಸೆಯಲಾಗಿದೆ.

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಹೇಳಿಕೆ ನೀಡಿದ್ದು, “ಬೆಳಿಗ್ಗೆ 8.30ಸುಮಾರಿಗೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ಬಗ್ಗೆ ಮಾಹಿತಿ ಬಂದ ಪ್ರಕಾರ ಹೊಳವನಹಳ್ಳಿ ಹೋಬಳಿಯ ಲಿಂಗಾಪುರ, ಚಿಂಪುಗಾನಹಳ್ಳಿ ಗ್ರಾಮಗಳಲ್ಲಿನ ರಸ್ತೆ ಪಕ್ಕದ ಜಮೀನುಗಳಲ್ಲಿ ಮನುಷ್ಯನ ಕೈ, ಹೊಟ್ಟೆಭಾಗದ ಕತ್ತರಿಸಿ ಭಾಗಗಳು ಸಿಕ್ಕಿವೆ. ಅವುಗಳನ್ನು ಎಫ್‌ಎಸ್‌ಐಗೆ ಕಳುಹಿಸಲಾಗಿದೆ. ದೇಹ ಗುರುತುಪಡಿಸಲ್ಲಾಗಿಲ್ಲ, ಇದು ಯಾವಾಗ ತಂದು ಹಾಕಿರುವುದು ಎಂಬುದೂ ತಿಳಿದುಬಂದಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಆರೋಪಿ

“ತಕ್ಷಣ ತನಿಖೆ ಚುರುಕುಗೊಳಿಸಿ ಅದಷ್ಟು ಬೇಗ ಆರೋಪಿಯನ್ನು ಪತ್ತೆಹಚ್ಚಿ, ನಡೆದಿರುವ ಘಟನೆ ಬಗ್ಗೆ ತಿಳಿಸುತ್ತೇವೆ. ಸದ್ಯಕ್ಕೆ ಅದು ಮಹಿಳೆ ಅಥವಾ ಪುರುಷನ ದೇಹವೇ ಎಂಬುದು ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಮಹಿಳೆಯ ದೇಹದ ಭಾಗಗಳೆಂದು ಕಂಡುಬಂದಿದೆ. ಜಿಲ್ಲೆ ಸೇರಿದಂತೆ ಹೊರರಾಜ್ಯ ಆಂದ್ರಪ್ರದೇಶದ ಕಾಣೆಯಾದ ಪ್ರಕರಣಗಳ ಬಗ್ಗೆ ತಿಳಿದುಕೊಂಡು ಹೆಚ್ಚಿನ ತನಿಖೆ ನಡೆಸಿ, ಎಫ್‌ಎಸ್‌ಇ ವರದಿಗಳು ಬಂದ ನಂತರ ಹಚ್ಚಿನ ಮಾಹಿತಿಯನ್ನು ನೀಡಲಾಗುತ್ತದೆ, ದೇಹದ ಬಿಡಿ ಭಾಗಗಳು ಸಿಕ್ಕಿರುವುದು ಕಂಡರೆ ಈ ಕೃತ್ಯ ನಡೆದು ಸುಮಾರು ಆರೇಳು ದಿನಗಳಾಗಿರುವ ಶಂಕೆ ಇದೆ” ಎಂದು ಹೇಳಿದರು.

ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್, ತಿಪಟೂರು ಡಿವೈಎಸ್‌ಪಿ ಕುಮಾರಶರ್ಮ, ಕೊರಟಗೆರೆ ಸಿಪಿಐ ಅನಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...