ತುಮಕೂರು | ಯುವತಿ ಆತ್ಮಹತ್ಯೆ : ತಲೆ‌ ಮರೆಸಿಕೊಂಡ ಪ್ರೇಮಿ

Date:

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಚಂದ್ರಿಕಾ (21) ಆತ್ಮಹತ್ಯೆ ಪ್ರಕರಣಕ್ಕೆ ಡೆತ್ ನೋಟ್ ಪತ್ತೆಯಾಗುತ್ತಿದಂತೆ ಹೊಸ ತಿರುವು ಪಡೆದುಕೊಂಡಿದ್ದು, ಪ್ರೀತಿಯ ಮಗ್ಗುಲಿಗೆ ಹೊರಳಿದೆ.

ಶಿರಾ ತಾಲೂಕಿನ ಮಡಕನಹಳ್ಳಿ ಗ್ರಾಮದ ಚಂದ್ರಿಕಾ ಎಸ್ ಐಟಿ ಬಳಿಯ ಹಿಂದುಳಿದ ವರ್ಗಗಳ ಹಾಸ್ಟಲ್ ನಲ್ಲಿದ್ದುಕೊಂಡು ತುಮಕೂರು ನಗರದ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಯೋಗೀಶ್ ಮತ್ತು ಚಂದ್ರಿಕಾ ಪರಸ್ಪರ ಪ್ರೀತಿಸುತ್ತಿದ್ದರು. ಯೋಗೀಶ್ ಎಂಬ ಯುವಕ ಪ್ರೀತಿಸಿ ಮೋಸ ಮಾಡಿದ್ದಕ್ಕೆ, ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಚಂದ್ರಿಕಾ ಡೆತ್ ನೋಟ್ ಬರೆದಿಟ್ಟಿದ್ದಾರೆ. ಡೆತ್ ನೋಟ್ ಪೊಲೀಸರ ಕೈ ಸೇರಿದ ಬೆನ್ನಲ್ಲೆ ಯೋಗೀಶ್ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ತುಮಕೂರಿನ ಹೊಸ ಬಡವಾಣೆ ಠಾಣೆಯ ಪೊಲೀಸರು ಅಸ್ವಾಭಾವಿಕ ಸಾವು (ಯುಡಿಆರ್) ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಡೆತ್ ನೋಟ್ ಪತ್ತೆಯಾಗಿದೆ. ಈ ಬೆಳವಣಿಗೆಯ ನಂತರ ಚಂದ್ರಿಕಾ ತಾಯಿ ನೀಡಿದ ದೂರಿನ ಮೇರೆಗೆ ಯೋಗೀಶ್ ಮತ್ತು ಆತನ ತಾಯಿ ಹಾಗೂ ಮತ್ತೂಬ್ಬರ ವಿರುದ್ಧ ಆತ್ಮಹತ್ಯೆ ಗೆ ಪ್ರಚೋದನೆ, ಎಸ್. ಸಿ, ಎಸ್. ಟಿ, ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಂಗಾಯತ ಸಮುದಾಯದ ಯೋಗೀಶ್ ಪ್ರೀತಿ ಹೆಸರಿನಲ್ಲಿ ಮೋಸ ಮಾಡಿದ್ದಾನೆ. ನೀನು ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಮನೆಯಲ್ಲಿ ಮದುವೆಗೆ ಒಪ್ಪುತ್ತಿಲ್ಲ ಎಂದು ಚಂದ್ರಿಕಾ ಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾನೆ. ಬೇರೆ ಹುಡುಗಿ ಜತೆ ಮದುವೆ ಆಗುತ್ತಿರುವುದಾಗಿ ಹೇಳಿ ಕಿರುಕುಳ ನೀಡಿದ್ದಾನೆ. ಮನೆಯಲ್ಲಿ ನೋಡಿದ ಹುಡುಗಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ಕಿರುಕುಳ, ಹಿಂಸೆ ತಾಳಲಾರದೆ ಚಂದ್ರಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತುಮಕೂರಿನ ಎಸ್ ಎಸ್ ಪುರಂ ನ ‘ತಿಂಡಿ ಗುರು’ ಹೊಟೇಲ್ ನಲ್ಲಿ ಚಂದ್ರಿಕಾ ಕ್ಯಾಶಿಯರ್ ಆಗಿ ಪಾರ್ಟ್
ಟೈಮ್ ಕೆಲಸ ಮಾಡುತ್ತಿದ್ದರು. ಹೋಟೆಲ್ ಮುಚ್ಚಿದ ನಂತರ ಇದರ ಮಾಲೀಕ ದರ್ಶನ್ ಮನೆಯಲ್ಲೆ ಮೇಕಿಂಗ್ ಸೆಂಟರ್ ನಡೆಸುತ್ತಿದ್ದರು. ಕೆಲವು ದಿನಗಳಿಂದ ಚಂದ್ರಿಕಾ ಅಡುಗೆ ಕೆಲಸ ಮಾಡುತ್ತಾ, ಅಲ್ಲಿಯೆ ವಾಸವಿದ್ದರು. ಇದೇ ಮನೆಯಲ್ಲಿ ಈಚೆಗೆ ನೇಣು ಹಾಕಿಕೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...