ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ ನಾಟಕ ದಲಿತ ಸಂಕಟಗಳ ಹಿಡಿಗನ್ನಡಿ

Date:

‘ಒಂದು’ ಕೇಂದ್ರವನ್ನು ನಿರಾಕರಿಸಿ ಒಂದೂ ಮುಕ್ಕಾಲು ಗಂಟೆಗಳ ಕಾಲ ನೋಡಿಸಿಕೊಳ್ಳುವ ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ ನಾಟಕ ದಲಿತ ಪರಂಪರೆ ಸಂಕಟಗಳ ಸರಮಾಲೆಯನ್ನೇ ನಮ್ಮ ಮುಂದಿಡುತ್ತದೆ. ಒಂದು ಮೂಳೆ ಪ್ರಸಂಗದಿಂದ ಆರಂಭವಾಗುವ ನಾಟಕ ನೋಡುಗರನ್ನು ಹಾಸ್ಯ ಭರಿತ ಸಂಕಟಗಳಿಂದ ತೊಯ್ಯುಸುತ್ತದೆ. ದಲಿತರಿಗೆ ಹಳ್ಳಿಗಳು ಶೋಷಣೆಯ ಕೂಪಗಳು ಎಂಬುವುದರಿಂದ ಆರಂಭವಾಗಿ ನಗರಗಳಲ್ಲಿಯೂ ಅದೇ ಸರ್ಕಲ್ ನಲ್ಲಿ ಬದುಕಬೇಕಾದ ಆಧುನಿಕ ದಲಿತ ಸಂಕಟಗಳನ್ನು ಅನಾವರಣ ಮಾಡುವ ಮಾಡುವ ಬಾಬ್ ಮಾರ್ಲಿ ಕನ್ನಡ ನಾಟಕ ರಂಗ ಭೂಮಿಗೆ ಅಪೂರ್ವವಾದ ಕೊಡುಗೆ.

ಕಳೆದ ಶತಮಾನದ ಎಂಬತ್ತರ ದಶಕದಲ್ಲಿ ಅಲಕ್ಷಿತ ಪರಂಪರೆಗಳ ಸಂಕಟಗಳನ್ನು ರಂಗಭೂಮಿಯ ಮೇಲೆ ತಂದು ಆಂದೋಲನವನ್ನೇ ರೂಪಿಸಿದ್ದ ಸಿಜಿಕೆಯ ಪರಂಪರೆಯ ಕೊಂಡಿ,ಮತ್ತಷ್ಟು ಆಧುನಿಕ ಪರಿಭಾಷೆಯಲ್ಲಿ ತಳಮೂಲ ಪರಂಪರೆಗಳ ತಿಳುವಳಿಕೆಗಳ ನೆನಪುಗಳನ್ನು ರಂಗದ ಮೇಲೆ ಯಶಸ್ವಿಯಾಗಿ ತರುತ್ತಿರುವ ಕೆ. ಪಿ.ಲಕ್ಷ್ಮಣ್ ಮತ್ತು ವಿ.ಎಲ್.ನರಸಿಂಹಮೂರ್ತಿ ಕನ್ನಡ ರಂಗಭೂಮಿಯ ಭರವಸೆಯ ನಾಟಕಕಾರರು ಮತ್ತು ನಿರ್ದೇಶಕರು.

WhatsApp Image 2024 09 01 at 10.40.04 AM 4

ಮಾಂಸಾಹಾರ ಮತ್ತು ಮಾಂಸ ತಿನ್ನುವವರ ಆಚರಣೆಗಳೇ ಶೋಷಣೆಗೆ ಮೂಲ ಕಾರಣ ಎಂದು ಭೀಗುವ ಪ್ರಭೂತಿಗಳಿಗೆ ಅವೇ ತಳಮೂಲ ನೆಲಮೂಲ ಸಂಸ್ಕೃತಿಯ ಐಡೆಂಟಿಟಿ ಎಂಬುದನ್ನು ಪ್ರಬಲವಾಗಿ ಪ್ರತಿಪಾದಿಸುವ ನಾಟಕ. ಮಿಣುಕು ಹುಳು,ಉತ್ತರಾಣಿ, ತುಂಬೆ, ಎಕ್ಕೆ ಇವುಗಳ ನೆನಪುಗಳ ಮೂಲಕ ಜೀವಂತ ಸಂಸ್ಕೃತಿ ಅನಾವರಣ ಈ ನಾಟಕದ ಹೆಗ್ಗುರುತು.
ತಾಯಿ ಮಗಳನ್ನು ಇಬ್ಬರನ್ನು ಕೂಡವ ಹೊರ ಸಂಸ್ಕೃತಿಯೊಂದರ ಸಮುದಾಯಕ್ಕೆ ಬೀಜಗಳನ್ನು ಕಿತ್ತು ಕೈಗೆ ಕೊಟ್ಟ ಪರಂಪರೆಯೊಂದರ ದಾಖಲೆ ಈ ನಾಟಕದ ಯಶಸ್ವಿಯಲ್ಲೊಂದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 01 at 10.40.04 AM 5

ಮಾರಮ್ಮನ ಪುರಾಣ ಪ್ರಸಂಗವನ್ನು ಅತ್ಯಂತ ಆರ್ದ್ರವಾಗಿ ನಿರೂಪಿಸಿದ, ಕ್ರೌರ್ಯಕ್ಕೆ ತುತ್ತಾದ ಪರಂಪರೆಯ ವಾರಸುದಾರರನ್ನೇ ಅದೇ ಕ್ರೌರ್ಯದಲ್ಲಿ ಮಿಂದೇಳುವಂತೆ ಮಾಡುವ ಬ್ರಾಹ್ಮಣ್ಯ ಪರಂಪರೆಯ ಚೋಧ್ಯವನ್ನು ಈ ನಾಟಕ ಅತ್ಯಂತ ಧಾರಣವಾಗಿ ಮುಂದಿಡುತ್ತದೆ. ಝಮೈಕಾ ದೇಶದ ಸಂಗೀತಗಾರ ಬಾಬ್ ಮಾರ್ಲಿಯ ಜೀವನ ವೃತ್ತಾಂತವನ್ನು ಹೋಲುವ ಕನ್ನಡ ದಲಿತ ಪರಂಪರೆ ನೆನಪುಗಳ ಮೂಲಕ ನೋಡುವ ಈ ನಾಟಕ ಕನ್ನಡ ರಂಗಭೂಮಿಗೆ ವಿಶಿಷ್ಟ ಕೊಡುಗೆ.

ಈ ನಾಟಕವನ್ನು ತುಮಕೂರು ಜನಕ್ಕೆ ತಲುಪಿಸಿ ದ ಡ್ಯಾಗೇರಳ್ಳಿ ಮತ್ತು ತಂಡಕ್ಕೆ ನಮಸ್ಕಾರ

– ಡಾ. ನಾಗಭೂಷಣ ಬಗ್ಗನಡು
ಪ್ರಾಧ್ಯಾಪಕ, ತುಮಕೂರು ವಿಶ್ವವಿದ್ಯಾನಿಲಯ
.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ವಿವಿಧ ಜಯಂತಿ ಆಚರಣೆ ಪೂರ್ವಭಾವಿ ಸಭೆ

ತುಮಕೂರು ಜಿಲ್ಲಾಡಳಿತದಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು...