ಉನ್ನತ ಅಧಿಕಾರಿಗಳ ಸಹಿ ನಕಲು ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ನೀಡಿದ ದೂರಿನ ಮೇರೆಗೆ ಡಿ-ದರ್ಜೆ ನೌಕರ ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಆರೋಪದ ಮೇಲೆ ಪ್ರಾಥಮಿಕ ಪುರಾವೆಗಳು ಲಭ್ಯವಾದ ಹಿನ್ನಲೆಯಲ್ಲಿ ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕರ್ತವ್ಯ ಲೋಪ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಅಡಿಯಲ್ಲಿ ಶಿವಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ
ಆರೋಪಿ ಶಿವಕುಮಾರ್ ಗ್ರೇಡ್-2 ತಹಶೀಲ್ದಾರ್ ಅವರ ಸಹಿ ನಕಲು ಮಾಡಿ, ಯಳನಡು ಗ್ರಾಮದ ರಾಜಯ್ಯ ಹಾಗೂ ದೊಡ್ಡ ಎಣ್ಣೆಗೆರೆ ಬಸವರಾಜು ಎಂಬುವವರಿಗೆ ನಕಲಿ ಮರಣ ಪ್ರಮಾಣ ಪತ್ರಗಳನ್ನು ವಿತರಿಸಿದ್ದರು ಎಂದು ಆರೋಪಿಸಲಾಗಿತ್ತು.
.





