ಗುಬ್ಬಿ | “ಭಾರತ ಭೀಮ್ ಸೇನೆ” ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Date:

ಶೋಷಿತರು, ಸಮಾಜದಲ್ಲಿ ತುಳಿತಕ್ಕೆ ಒಳಗಾದವರು ಹಾಗೂ ಅಹಿಂದ ವರ್ಗದ ಸರ್ವತೋಮುಖ ಬೆಳವಣಿಗೆಗೆ ಪಣ ತೊಟ್ಟ ಭಾರತ ಭೀಮ್ ಸೇನೆ ಸಂಘಟನೆಯ ಬೆನ್ನೆಲುಬಾಗಿ ಶ್ರಮಿಸುವ ಪದಾಧಿಕಾರಿಗಳ ಆಯ್ಕೆ ಗುಬ್ಬಿ ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು.

ಸಭಾಂಗಣದಲ್ಲಿ ಭಾರತ ಭೀಮ್ ಸೇನೆ ರಾಜ್ಯಾಧ್ಯಕ್ಷ ದಿನೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಟಿ.ಸಿ.ಸಚಿನ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಎಚ್.ಕೆ.ಮಧು, ತಾಲ್ಲೂಕು ಅಧ್ಯಕ್ಷರಾಗಿ ಭಾಸ್ಕರ್ ಆಯ್ಕೆ ನಡೆಯಿತು.

ಸೇನೆಯ ಯುವ ಘಟಕದ ಗೌರವಾಧ್ಯಕ್ಷ ಎ.ಟಿ.ಮುನಿರಾಜು, ಜಿಲ್ಲಾ ಉಪಾಧ್ಯಕ್ಷ ಗಿರೀಶ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ನವೀನ್, ಸೃಜನ್, ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಎನ್.ಮಂಜುನಾಥ್, ಅಲ್ಪ ಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಇಮ್ರಾನ್ ಪಾಷ, ಅಲ್ಪ ಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷ ಜಬಿವುಲ್ಲಾ, ಯುವ ಘಟಕದ ಅಧ್ಯಕ್ಷ ಸಾದತ್ ಹೀಗೆ ಅನೇಕ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ನಂತರ ಪ್ರಮಾಣಪತ್ರ ನೀಡಿ ಸೇನೆಯ ಕೆಲಸಕ್ಕೆ ಬದ್ಧರಾಗಿ ದುಡಿಯಲು ಪಣ ತೊಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಭೀಮ್ ಸೇನೆ ರಾಜ್ಯಾಧ್ಯಕ್ಷ ದಿನೇಶ್ ಮಾತನಾಡಿ ಸಾಮಾಜಿಕ ನ್ಯಾಯ ಕಾಪಾಡುವಲ್ಲಿ ಹಲವು ಸಂಘಟನೆಗಳು ದುಡಿಯುತ್ತಿವೆ. ಈ ಪೈಕಿ ನಮ್ಮ ಸೇನೆ ವಿಶೇಷವಾಗಿ ಯುವ ಶಕ್ತಿಯಿಂದ ತುಂಬಿ ಚೈತನ್ಯದಿಂದ ಕೆಲಸ ನಡೆದಿದೆ. ಅಂಬೇಡ್ಕರ್ ಅವರ ಮಾರ್ಗದಲ್ಲಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗದೆ ಶೋಷಿತ ಎಲ್ಲಾ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದೇವೆ. ಸೇನೆಯ ನಾನಾ ಮಜಲು ರಾಜ್ಯದಲ್ಲಿ ಹರಡಿದೆ. ಎಲ್ಲಾ ಜಿಲ್ಲೆಯಲ್ಲಿ ಶಾಖೆ ಹೊಂದಿದ್ದು ತುಮಕೂರು ಜಿಲ್ಲೆಯಲ್ಲೂ ಸೇನೆಯ ಸೇವೆಗೆ ಯುವಕರು ಸಿದ್ಧರಿದ್ದಾರೆ. ಅವರೊಟ್ಟಿಗೆ ಸಮಾಜ ಸುಧಾರಣೆ ತರುವ ಕೆಲಸ ಒಗ್ಗೂಡಿ ಮಾಡೋಣ ಎಂದು ಕರೆ ನೀಡಿದರು.

ಸೇನೆಯ ಯುವ ಘಟಕದ ನೂತನ ರಾಜ್ಯಾಧ್ಯಕ್ಷ ಟಿ.ಸಿ.ಸಚಿನ್ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಶಿಕ್ಷಣ ಹೋರಾಟ ಸಂಘಟನೆಯ ಪರಿಕಲ್ಪನೆಯಲ್ಲಿ ನಮ್ಮ ಸೇನೆ ಕೆಲಸ ಮಾಡಲಿದೆ. ಶೋಷಣೆ ಕಂಡಲ್ಲಿ ಸೇನೆ ಸಂತ್ರಸ್ತರ ಪರ ನಿಲ್ಲಲಿದೆ. ರಾಜ್ಯದಲ್ಲಿ ಯುವಕರ ಈ ಸೇನೆ ದಲಿತರು, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರ ಮೇಲೆತ್ತುವ ಕಾರ್ಯ ನಿರಂತರ ಮಾಡಲಿದೆ. ಈ ಸತ್ಕಾರ್ಯಕ್ಕೆ ತುಮಕೂರು ಜಿಲ್ಲೆ ಹಾಗೂ ಗುಬ್ಬಿ ತಾಲ್ಲೂಕು ಘಟಕ ಪ್ರಾಮಾಣಿಕವಾಗಿ ದುಡಿಯಲಿದೆ ಎಂದರು.

ಇದೇ ಸಂದರ್ಭದಲ್ಲಿ ಸೇನೆಯ ನೂರಾರು ಸದಸ್ಯರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ತೋಟಕ್ಕೆ ತಗುಲಿದ ಬೆಂಕಿ : ತೆಂಗು, ಅಡಿಕೆ, ಬಾಳೆಗಿಡಗಳು ಭಸ್ಮ

ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿ ರಭಸಕ್ಕೆ ಪಕ್ಕದ ತೋಟಕ್ಕೆ ಹರಡಿ...

ಗುಬ್ಬಿ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

 ಮೀಸಲಾತಿ ಜಾರಿಗೆ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ...

ಗುಬ್ಬಿ | ಬೆಸ್ಕಾಂ ನಿಂದ ರೈತರ ಸಭೆ : ಸೂಕ್ತ ಪರಿಹಾರಕ್ಕೆ ರೈತ ಸಂಘ ಆಗ್ರಹ

 ಬೇಸಿಗೆ ಕಾಲದಲ್ಲಿ ವಿದ್ಯುತ್ ಕಡಿತ ರೈತರ ಕೃಷಿ ಚಟುವಟಿಕೆಗೆ ಸಾಕಷ್ಟು ಸಮಸ್ಯೆ...

ತುಮಕೂರು | ಪೌರಕಾರ್ಮಿಕ ಅಯ್ಯಪ್ಪನ ಮನೆ ಬೆಂಕಿಗೆ ಆಹುತಿ : ಪರಿಹಾರಕ್ಕೆ ಸಿಪಿಎಂ ಒತ್ತಾಯ

ತುಮಕೂರು ಮಹಾನಗರದಲ್ಲಿ ವಾಸವಾಗಿರುವ ಪೌರಕಾರ್ಮಿಕರಾದ ಅಯ್ಯಪ್ಪ ಅವರ ಮನೆಯಲ್ಲಿ ಸಂಭವಿಸಿದ ಅಗ್ನಿ...