ಗುಬ್ಬಿ | ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

Date:

 ಬ್ರೈನ್ ಕ್ಯಾನ್ಸರ್ ಗೆ ತುತ್ತಾದ ಯೋಗಿತಾ ಎಂಬ ಬಾಲಕಿಯ ಆಧಾರ್ ಕಾರ್ಡ್ ತಾಂತ್ರಿಕ ಸಮಸ್ಯೆ ಬಗ್ಗೆ ಮಾಧ್ಯಮದಲ್ಲಿ ವರದಿ ಬಿತ್ತರವಾದ ಹಿನ್ನಲೆ ಕೂಡಲೇ ಸ್ಪಂದಿಸಿದ ಜಿಲ್ಲಾಡಳಿತ ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್ ಬಾಲಕಿಯ ಮನೆಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಸ್ಥಳದಲ್ಲೇ ತಾಂತ್ರಿಕ ಸಮಸ್ಯೆ ನಿವಾರಿಸುವಲ್ಲಿ ಯಶಸ್ವಿಯಾದರು.

ಗುಬ್ಬಿ ಪಟ್ಟಣದ ಸಮೀಪದ ಜಿ. ಹರಿವೇಸಂದ್ರ ಗ್ರಾಮಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ನೇರ ಯೋಗಿತಾ ಬಾಲಕಿಯ ಮನೆಗೆ ಭೇಟಿ ನೀಡಿ ಒಂದು ತಾಸು ಎಲ್ಲಾ ಸಮಸ್ಯೆ ಆಲಿಸಿದರು. ಮಾರಕ ಕಾಯಿಲೆ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದ್ದ ಬಗ್ಗೆ ತೀವ್ರ ಮರುಕ ವ್ಯಕ್ತಪಡಿಸಿ ಆಧಾರ್ ಕಾರ್ಡ್ ತಿದ್ದುಪಡಿ ಆಗದ ಬಗ್ಗೆ ವಿಚಾರಿಸಿ ಜೊತೆಯಲ್ಲಿದ್ದ ತಾಂತ್ರಿಕ ಸಿಬ್ಬಂದಿಗಳಿಗೆ ಸರಿ ಪಡಿಸಲು ಸೂಚಿಸಿದರು. 

ಇಡೀ ಮಂಜುನಾಥ್ ಕುಟುಂಬವನ್ನು ನಲುಗಿಸಿದ್ದ ಮಾರಕ ಮೆದುಳು ಕ್ಯಾನ್ಸರ್ ಗೆ ತುತ್ತಾದ ಬಾಲಕಿ ಯೋಗೀತಾಗೆ ಚಿಕಿತ್ಸೆಗೆ ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್ ಇಲ್ಲದಿರುವುದು ಕುಟುಂಬಕ್ಕೆ ಆರ್ಥಿಕ ಹೊರೆಯಾಗಿದೆ. ಕೂಡಲೇ ತಾಂತ್ರಿಕ ಸಮಸ್ಯೆ ಬಗೆಹರಿಸಿ ಬಿಪಿಎಲ್ ಕಾರ್ಡ್ ಗೆ ಬಾಲಕಿ ಹೆಸರು ಸೇರ್ಪಡೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಧಾರ್ ಕಾರ್ಡ್ ನಿಪುಣತೆ ಪಡೆದ ಸಿಬ್ಬಂದಿಗಳನ್ನು ಮನೆಗೆ ಕರೆತಂದು ಮಗುವಿನ ಬಯೋಮೆಟ್ರಿಕ್ ಪಡೆದು ಆಧಾರ್ ಸಮಸ್ಯೆ ಬಗೆಹರಿಸಲು ಮುಂದಾದ ಉಪ ವಿಭಾಗಾಧಿಕಾರಿಗಳು ನಿಮ್ಮ ಮಗುವಿನ ಸಮಸ್ಯೆಗೆ ನಮ್ಮ ಜಿಲ್ಲಾಡಳಿತ ಜೊತೆ ನಿಲ್ಲಲಿದೆ ಎಂದು ಧೈರ್ಯ ತುಂಬಿದರು. ಮಗುವಿನ ಸ್ಥಿತಿಗೆ ಮರುಗಿದ ಅಧಿಕಾರಿಣಿ ಓದಿ ಏನು ಆಗಲು ಬಯಸಿದ್ದೆಯೇ ಎನ್ನುವ ಪ್ರಶ್ನೆಗೆ ಮಗು ಎಂಜಿನಿಯರ್ ಎಂಬ ಉತ್ತರಕ್ಕೆ ಸ್ಥಳದಲ್ಲಿದ್ದ ಎಲ್ಲರ ಕಣ್ಣಲ್ಲಿ ಕಂಬನಿ ಮಿಡಿದಿತ್ತು.

ಮುಂದಿನ ಚುನಾವಣೆ ಸಂದರ್ಭಗಳಲ್ಲಿ ನಡೆಯುವ ಎಲ್ಲಾ ಪ್ರಚಾರಗಳಿಗೆ ನಿನ್ನನ್ನು ವಾರಿಯರ್ ಆಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿ, ಆಧಾರ್ ಕಾರ್ಡ್ ಸಿದ್ಧವಾದ ತಕ್ಷಣ ಆಹಾರ ನಿರೀಕ್ಷಕರಿಗೆ ಮೊಬೈಲ್ ಕರೆ ಮಾಡಿ ಬಿಪಿಎಲ್ ಕಾರ್ಡ್ ಗೆ ಮಗುವಿನ ಹೆಸರು ಸೇರಿಸಿ ಖುದ್ದು ಈ ಕುಟುಂಬಕ್ಕೆ ಕಾರ್ಡ್ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.

ಸ್ಥಳದಲ್ಲಿ ತಹಶೀಲ್ದಾರ್ ಆರತಿ.ಬಿ, ಗ್ರಾಮ ಆಡಳಿತಾಧಿಕಾರಿ ಸ್ವಾಮಿ, ಆಧಾರ್ ಕಾರ್ಡ್ ತಾಂತ್ರಿಕ ವಿಭಾಗದ ಮುಖ್ಯಸ್ಥ ಪ್ರಶಾಂತ್, ಆಪರೇಟರ್ ಗಂಗಾ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ತೋಟಕ್ಕೆ ತಗುಲಿದ ಬೆಂಕಿ : ತೆಂಗು, ಅಡಿಕೆ, ಬಾಳೆಗಿಡಗಳು ಭಸ್ಮ

ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿ ರಭಸಕ್ಕೆ ಪಕ್ಕದ ತೋಟಕ್ಕೆ ಹರಡಿ...

ಗುಬ್ಬಿ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

 ಮೀಸಲಾತಿ ಜಾರಿಗೆ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ...

ಗುಬ್ಬಿ | ಬೆಸ್ಕಾಂ ನಿಂದ ರೈತರ ಸಭೆ : ಸೂಕ್ತ ಪರಿಹಾರಕ್ಕೆ ರೈತ ಸಂಘ ಆಗ್ರಹ

 ಬೇಸಿಗೆ ಕಾಲದಲ್ಲಿ ವಿದ್ಯುತ್ ಕಡಿತ ರೈತರ ಕೃಷಿ ಚಟುವಟಿಕೆಗೆ ಸಾಕಷ್ಟು ಸಮಸ್ಯೆ...

ತುಮಕೂರು | ಪೌರಕಾರ್ಮಿಕ ಅಯ್ಯಪ್ಪನ ಮನೆ ಬೆಂಕಿಗೆ ಆಹುತಿ : ಪರಿಹಾರಕ್ಕೆ ಸಿಪಿಎಂ ಒತ್ತಾಯ

ತುಮಕೂರು ಮಹಾನಗರದಲ್ಲಿ ವಾಸವಾಗಿರುವ ಪೌರಕಾರ್ಮಿಕರಾದ ಅಯ್ಯಪ್ಪ ಅವರ ಮನೆಯಲ್ಲಿ ಸಂಭವಿಸಿದ ಅಗ್ನಿ...