ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ರಾ.ಹೆ.73 ರಲ್ಲಿ ರಸ್ತೆ ಮಧ್ಯದ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಧಗಧಗನೇ ಹೊತ್ತಿ ಹುರಿದ ಘಟನೆ ಮಧ್ಯಾಹ್ನ ನಡೆದಿದೆ.
ಬೆಂಗಳೂರು ಮತ್ತು ತಿಪಟೂರು ಮಾರ್ಗ ಮಧ್ಯದಲ್ಲಿ ಬರುವ ಎಚ್ ಎ ಎಲ್ ಘಟಕ ಹತ್ತಿರದ ಶಿವಸಂದ್ರ ಗೇಟ್ ಬಳಿಯಲ್ಲಿ ನಡೆದ ಈ ಘಟನೆಯಲ್ಲಿ ಬೆಂಕಿಗೆ ಆಹುತಿಯಾದ ಕಾರು ಹಾಸನ ಮೂಲದ ಹೊಳೆನರಸೀಪುರದ ಮಂಜುನಾಥ ಎಂಬುವರಿಗೆ ಸೇರಿದ್ದಾಗಿದೆ. ಬೆಂಗಳೂರು ಕಡೆಯಿಂದ ತಿಪಟೂರು ಮಾರ್ಗವಾಗಿ ಕೆಎ 04 ಎಂಕೆ.9474 ನಂಬರ್ ನ ಹುಂಡೈ ಕಂಪನಿಯ ಐ10 ಕಾರಿನಲ್ಲಿ ಬರುತ್ತಿದ್ದ ವೇಳೆ ಆಯತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದಿರುವ ಘಟನೆ ಇಂದು ಮಧ್ಯಾಹ್ನ 2 ಗಂಟೆ ಸಮಯದಲ್ಲಿ ನಡೆದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಗುಬ್ಬಿ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡರು.





