ಗುಬ್ಬಿ | ಪ್ರಜಾಪ್ರಭುತ್ವದಲ್ಲಿ ಮಕ್ಕಳ ಗ್ರಾಮ ಸಭೆ ಮಹತ್ವವಾದದ್ದು : ಪಿಡಿಒ ಶೇಖರ್

Date:

 ಗ್ರಾಮ ಪಂಚಾಯಿತಿ ಹಂತದಲ್ಲಿ ಮಕ್ಕಳಿಗಾಗಿ ವಿಶೇಷ ಗ್ರಾಮಸಭೆ ಹಮ್ಮಿಕೊಂಡಿರುವುದು ಪ್ರಜಾಸತ್ತಾತ್ಮಕ ಸೌಲಭ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಒ ಕೆ.ಎಂ.ಶೇಖರ್ ತಿಳಿಸಿದರು.

ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಸರ್ ಸಂಸ್ಥೆ, ಗ್ರಾಮ ವಿಕಾಸ,ಅಮ್ಮನ ಮಡಿಲು ಪ್ರಕೃತಿ ಸಂಸ್ಥೆ, ಅನಲೆ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ವಿಶೇಷ ಗ್ರಾಮ ಸಭೆ ಉದ್ದೇಶಿಸಿ ಮಾತನಾಡಿ ಗ್ರಾಮಸಭೆ ಮಕ್ಕಳ ಹಕ್ಕು ಪ್ರತಿಪಾದಿಸುವ ಪ್ರಜಾಪ್ರಭುತ್ವ ತಿಳುವಳಿಕೆಗೆ ನೆರವಾಗಿದೆ ಎಂದರು.

ಶಿಕ್ಷಕರು ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ಹೊಂದಿರುವಂತೆ ಊರಿನ ಪ್ರಮುಖರು, ಜನಪ್ರತಿನಿಧಿಗಳು, ಪೋಷಕರು ಮತ್ತು ಸಮುದಾಯ ಮಕ್ಕಳ ಹಕ್ಕು ಚ್ಯುತಿ, ಮಕ್ಕಳ ಮೇಲಿನ ದೌರ್ಜನ್ಯ, ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಹೀಗೆ ಅನೇಕ ಸಮಾಜಘಾತುಕ ಕೃತ್ಯಗಳ ಬಗ್ಗೆ ಗ್ರಾಮೀಣ ಭಾಗದಲ್ಲೂ ಎಚ್ಚರಿಕೆ ವಹಿಸುವ ಅವಶ್ಯವಿದೆ. ಜೊತೆಗೆ ಮನೆಯಲ್ಲಿ ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪನ್ಮೂಲ ವ್ಯಕ್ತಿ ಹಾಗೂ ವಕೀಲ ಕೆ.ಎಸ್.ರಾಘವೇಂದ್ರ ಮಾತನಾಡಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಕ್ಕಳ ಹಕ್ಕುಗಳಲ್ಲಿ ಒಂದಾದ ಭಾಗವಹಿಸುವಿಕೆಯ ಹಕ್ಕನ್ನು ಪ್ರೋತ್ಸಾಹಿಸುವುದಕ್ಕಾಗಿ ಹಾಗೂ ಮಕ್ಕಳ ಮೂಲ ಸೌಕರ್ಯ, ರಕ್ಷಣೆಯ ಕುರಿತ ವಿಚಾರಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆ ಸೇರಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮಕ್ಕಳ ಹಕ್ಕುಗಳ ಸಭೆ ನಡೆಸಲಾಗುತ್ತಿದೆ. ಮಕ್ಕಳಿಗಾಗಿಯೇ ಸರ್ಕಾರದಿಂದ ವಿಶೇಷ ಸೌಲಭ್ಯಗಳಿದ್ದು ಅವುಗಳನ್ನು ಬಳಸಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್ ಮಾತನಾಡಿ ಪ್ರೌಢಶಾಲೆಯಲ್ಲಿ ಹದಿಹರೆಯದ ಮಕ್ಕಳಿದ್ದು, ಶಿಕ್ಷಕರು ಅವರಿಗೆ ಪೋಕ್ಸೊ ಬಗ್ಗೆ ತಿಳಿಸಬೇಕು. ಮೊಬೈಲ್ ಗೀಳಿನಿಂದ ವಿದ್ಯಾರ್ಥಿಗಳ ವ್ಯಾಸಂಗ ಕುಂಠಿತವಾಗುತ್ತಿದೆ. ದೃಶ್ಯ ಮಾಧ್ಯಮಗಳು ದೃಶ್ಯಗಳನ್ನು ವೈಭವೀಕರಿಸದಂತೆ ತಡೆಯಲು ಕಟ್ಟುನಿಟ್ಟಿನ ಕಾನೂನು ಬರಬೇಕಿದೆ. ಈ ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ಅವಶ್ಯಕತೆ ಹಾಗೂ ಸಮಸ್ಯೆ ಬಗ್ಗೆ ಲಿಖಿತ ಅರ್ಜಿ ಸಲ್ಲಿಸಿ ಚರ್ಚಿಸಿದರು.

ವೇದಿಕೆಯಲ್ಲಿ ಗ್ರಾಪಂ ಸದಸ್ಯರಾದ ಪದ್ಮ, ರಾಮಕ್ಕ, ಸಾವಯವ ಕೃಷಿಕ ಮಹೇಶ್, ಸುಧಾ ಸೇರಿದಂತೆ ಶಾಲಾ ಮಕ್ಕಳು, ಶಿಕ್ಷಕರು, ಗ್ರಾಪಂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...