ಗುಬ್ಬಿ | ಜಿ.ಹೊಸಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಎಸ್.ಲೋಹಿತ್ ಕುಮಾರ್ ಅಧ್ಯಕ್ಷರಾಗಿ, ಎಚ್.ಜಯಣ್ಣ ಉಪಾಧ್ಯಕ್ಷರಾಗಿ ವಿರೋಧ ಆಯ್ಕೆಯಾದರು.

ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯ ಪ್ರಕ್ರಿಯೆಯನ್ನು ಸಹಕಾರ ಅಭಿವೃದ್ದಿ ಅಧಿಕಾರಿ ಲಿಯಾಖಿತ್ ಆಲಿಖಾನ್ ನಡೆಸಿಕೊಟ್ಟರು. ಒಟ್ಟು 13 ಮಂದಿ ನಿರ್ದೆಶಕರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಲೋಹಿತ್ ಕುಮಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಣ್ಣ ಏಕೈಕ ನಾಮಪತ್ರ ಸಲ್ಲಿಸಿದ್ದ ಹಿನ್ನಲೆ ಅವಿರೋಧ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷ ಎಚ್.ಎಸ್.ಲೋಹಿತ್ ಕುಮಾರ್ ಮಾತನಾಡಿ ಹೈನುಗಾರಿಕೆ ರೈತನ ಆರ್ಥಿಕ ಸದೃಢತೆಗೆ ಸಹಕಾರಿಯಾಗಿದೆ. ಇಂತಹ ಹಾಲು ಉತ್ಪಾದಕರ ಕಷ್ಟಸುಖಕ್ಕೆ ಸಹಕಾರಿ ಸಂಘ ಸ್ಪಂದಿಸುತ್ತದೆ. ಸರ್ಕಾರದಿಂದ ಹಾಗೂ ಹಾಲು ಒಕ್ಕೂಟದಿಂದ ದೊರೆಯುವ ಎಲ್ಲಾ ಸವಲತ್ತು ನಮ್ಮ ಡೈರಿಯ ಎಲ್ಲಾ ಸದಸ್ಯರಿಗೆ ಹಾಗೂ ಹಾಲು ಉತ್ಪಾದಕರಿಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಉಪಾಧ್ಯಕ್ಷ ಎಚ್.ಜಯಣ್ಣ ಮಾತನಾಡಿ ಕೃಷಿ ಚಟುವಟಿಕೆಯಲ್ಲಿ ಲಾಭ ಕಾಣದ ರೈತರ ಕುಟುಂಬಕ್ಕೆ ಆಧಾರವಾದ ಹೈನುಗಾರಿಕೆ ಈ ಹಾಲು ಉತ್ಪಾದನೆ. ಗ್ರಾಮೀಣ ಬದುಕಿನಲ್ಲಿ ನಿತ್ಯ ಕಾಯಕ ಎನಿಸಿ ಆರ್ಥಿಕವಾಗಿ ಬೆಳೆದ ರೈತರು ಬಹಳ ಮಂದಿ ಇದ್ದಾರೆ. ಈ ನಿಟ್ಟಿನಲ್ಲಿ ಹೊಸಹಳ್ಳಿ ಡೈರಿ ತಾಲ್ಲೂಕಿನಲ್ಲಿ ಹೆಚ್ಚು ಹಾಲು ಉತ್ಪಾದಿಸುವ ಡೈರಿಯಾಗಿ ಮಾರ್ಪಾಡು ಮಾಡಲು ಎಲ್ಲಾ ನಿರ್ದೇಶಕರ ಜೊತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಡೈರಿಯ ನಿರ್ದೇಶಕರಾದ ವೆಂಕಟ ನರಸಿಂಹಾಚಾರ್ಯ, ಗಂಗಾಧರಯ್ಯ, ನಾಗರತ್ನ, ನಾಗರಾಜು, ರಂಗರಾಜು, ಮಂಗಳಮ್ಮ, ರಂಗನಾಥ್, ದೇವರಾಜ್, ಕುಮಾರ್, ತೀರ್ಥಪ್ರಸಾದ ಅರಸ್, ಚನ್ನಪ್ಪ ಮುಖಂಡರಾದ ಬಸವರಾಜು, ನರೇಶ್, ಚನ್ನಬಸವಣ್ಣ, ಡೈರಿಯ ಕಾರ್ಯದರ್ಶಿ ಎಚ್.ಸಿ.ಜಗದೀಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...