ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಹರದಗೆರೆ ಗ್ರಾಮದ ಬೋವಿ ಕಾಲೋನಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ಚಿರತೆ ಸೆರೆಸಿಕ್ಕಿದ್ದು ಹಲವು ದಿನಗಳಿಂದ ಈ ಭಾಗದ ಜನರ ನಿದ್ದೆ ಗೆಡಿಸಿದ್ದ ಚಿರತೆಯ ಸೆರೆ ನಿಟ್ಟುಸಿರು ಬಿಡುವಂತೆ ಮಾಡಿತು.
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಅನುಭಾಗದ ತೀರ್ಥ ರಾಂಪುರ ಬೀಟ್ ನಲ್ಲಿ ಬರುವ ಹರದಗೆರೆ ಗ್ರಾಮದ ಬೋವಿ ಕಾಲೋನಿಯಲ್ಲಿ ಹಲವು ದಿನಗಳಿಂದ ಚಿರತೆ ಉಪಟಳ ಜಾಸ್ತಿಯಾಗಿ ಕಳೆದ ಒಂದು ತಿಂಗಳಲ್ಲಿ ಸುಮಾರು 7 ಮೇಕೆ ಮತ್ತು ಕುರಿಗಳನ್ನು ಬಲಿ ಪಡೆಯುವ ಜೊತೆಗೆ ಈ ಭಾಗದ ಜನತೆಯನ್ನು ಭಯಭೀತರನ್ನಾಗಿ ಮಾಡಿತ್ತು.
ಆತಂಕಕ್ಕೆ ಒಳಗಾದ ಗ್ರಾಮಸ್ಥರು ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ಪಟ್ಟು ಹಿಡಿದು ನಂತರ ಎಚ್ಚತ್ತ ಇಲಾಖೆ ಸಿಬ್ಬಂದಿಗಳು ಗೋವಿಂದಪ್ಪ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದ ದಿನದಲ್ಲೇ 3 ವರ್ಷದ ಹೆಣ್ಣು ಚಿರತೆ ಬೋನಿಗೆ ಸೆರೆಸಿಕ್ಕಿದೆ. ಈ ಘಟನೆಯಿಂದ ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.
ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ನರಸಿಂಹಮೂರ್ತಿ ಸೇರಿದಂತೆ ಶಶಿಕುಮಾರ್, ಶಂಕರ್, ಷಣ್ಮುಖ, ಶಿವು, ಸಂತೋಷ್, ಮತ್ತು ಪ್ರಜ್ವಲ್ ಸ್ಥಳದಲ್ಲಿದ್ದು ಸುರಕ್ಷಿತ ಸ್ಥಳದಲ್ಲಿ ಚಿರತೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಸಿದರು.





