ಸೇವಾ ನಿರತ ಶಿಕ್ಷಕರಿಗೂ ಟಿಇಟಿ ಕಡ್ಡಾಯಗೊಳಿಸಿರುವ ಸುಪ್ರೀಂಕೋರ್ಟ್ ಆದೇಶಕ್ಕೆ ತಿದ್ದುಪಡಿ ತಂದು ಶಿಕ್ಷಕರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಗುಬ್ಬಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರು ಇದೆ ಜನವರಿ 8 ರಂದು ತಮ್ಮ ಕರ್ತವ್ಯದ ಸಮಯದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವುದರ ಮೂಲಕ ಮೌನ ಪ್ರತಿಭಟನೆ ನಡೆಸಲಾಗುವುದು ಗುಬ್ಬಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ ಮಂಜುನಾಥ್ ತಿಳಿಸಿದ್ದಾರೆ.
ಕೋರ್ಟ್ ಆದೇಶದ ವಿರುದ್ಧ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನೇತೃತ್ವದಲ್ಲಿ ರಚನೆಯಾಗಿರುವ ಅಖಿಲ ಭಾರತ ಶಿಕ್ಷಕರ ಸಂಘಟನೆ ಜಂಟಿ ಕ್ರಿಯಾ ಸಮಿತಿ ದೇಶಾದ್ಯಂತ ಜನವರಿ 8 ರಂದು ಎಲ್ಲಾ ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಬೇಕೆಂದು ಕರೆ ನೀಡಿದೆ. ಹಳೆಯ ಪಿಂಚಣಿ ವ್ಯವಸ್ಥೆ ಮುಂದುವರಿಯಬೇಕು ಎಂದು ಕರೆ ನೀಡಿದರು.
ಟಿಇಟಿ ನಿಯಮಗಳನ್ನು ಸಡಿಲಗೊಳಿಸಬೇಕು ಹಾಗೂ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಂಡಿರುವ ಶಿಕ್ಷಕರನ್ನು ಕೈಬಿಟ್ಟು ಖಾಯಂ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆಗಳು ಇವೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಈ ಕಪ್ಪು ಪಟ್ಟಿ ಪ್ರದರ್ಶನ ಮೌನ ಪ್ರತಿಭಟನೆಗೆ ಬೆಂಬಲಿಸಬೇಕು ಎಂದು ಅಧ್ಯಕ್ಷ ಮಂಜುನಾಥ್ ಮನವಿ ಮಾಡಿದ್ದಾರೆ.





