ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

Date:

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಉದ್ಯೋಗ ನೀಡದ ಹಿನ್ನಲೆ ಯುವಶಕ್ತಿ ಈಗಾಗಲೇ ಧಾರವಾಡದಲ್ಲಿ ಹೋರಾಟ ಆರಂಭಿಸಿದ್ದಾರೆ. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕಿತ್ತು. ತಡವಾದರೆ ರಾಜ್ಯವ್ಯಾಪಿ ಯುವಕರು ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಕಳ್ಳಿಪಾಳ್ಯ ಗೇಟ್ ಬಳಿ ಅನ್ಯ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಗುಬ್ಬಿ ಕಾರ್ಯಕರ್ತರನ್ನು ಭೇಟಿ ಮಾಡಿ ನಂತರ ಸುದ್ದಿಗಾರರ ಜೊತೆ ಮಾತನಾಡಿ ಯುವಶಕ್ತಿ ರೊಚ್ಚಿಗೆದ್ದರೆ ಎಂತಹ ಸ್ಥಿತಿ ಎಂಬುದಕ್ಕೆ ನೇಪಾಳ ರಾಷ್ಟ್ರ ನಿದರ್ಶನವಾಗಿದೆ. ಅದೇ ದುಸ್ಥಿತಿ ರಾಜ್ಯದಲ್ಲಿ ಬಾರದಂತೆ ಕೂಡಲೇ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಯಾವುದೇ ಪಕ್ಷವಾದರೂ ಕಾರ್ಯಕರ್ತರ ಹಿತ ಕಾಯುವ ಕೆಲಸ ಮಾಡಬೇಕಿದೆ. ಸ್ಥಳೀಯ ಚುನಾವಣೆ ಕಾರ್ಯಕರ್ತರಿಗೆ ಅರ್ಪಿಸುವ ಚುನಾವಣೆ. ಇಂತಹ ಲೋಕಲ್ ಚುನಾವಣೆ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿದೆ. ನ್ಯಾಯಾಲಯ ಕೂಡಾ ಆದೇಶ ನೀಡಿರುವ ಹಿನ್ನಲೆ ಈ ವರ್ಷ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಮಾಡಬೇಕಿದೆ. ಈ ಹಿನ್ನಲೆ ಪಕ್ಷ ಸಂಘಟನೆಗೆ ಒತ್ತು ನೀಡಿ ರಾಜ್ಯ ಪ್ರವಾಸ ನಡೆಸಿದ್ದೇನೆ. ಈಗಾಗಲೇ 42 ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮುಗಿದಿದೆ. ಜನರೊಂದಿಗೆ ಜನತಾದಳ ಸಂಘಟನಾ ಸಮಾವೇಶಕ್ಕೆ ಜನರಿಂದ ದೊಡ್ಡ ಮಟ್ಟದ ಸ್ಪಂದನೆ ಸಿಕ್ಕಿದೆ. ಕಾರ್ಯಕರ್ತರು ಸಹ ಹುಮ್ಮಸ್ಸಿನಿಂದ ಪಕ್ಷ ಕಟ್ಟುವ ಕೆಲಸ ನಡೆಸಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷ ನಂಬಿದ ಕಾರ್ಯಕರ್ತರ ಭವಿಷ್ಯ ರೂಪಿಸುವ ಕೆಲಸ ಪಕ್ಷದ ಮುಖಂಡರು ಮಾಡಬೇಕಿದೆ. ಲೋಕಲ್ ಚುನಾವಣೆಯಲ್ಲಿ ಗೆಲ್ಲಿಸಿ ಅಧಿಕಾರ ಕೊಡಿಸುವ ಕೆಲಸ ಪ್ರಾಮಾಣಿಕವಾಗಿ ಮಾಡುತ್ತೇವೆ. ಶಾಸಕರು, ಸಂಸದರ ಗೆಲುವಿಗೆ ಹೇಗೆ ಕಾರಣಕರ್ತರಾಗುತ್ತಾರೆ ಹಾಗೆಯೇ ಅವರನ್ನು ಸ್ಥಳೀಯ ಅಧಿಕಾರ ಕೊಟ್ಟು ಭವಿಷ್ಯಕ್ಕೆ ನಾಂದಿ ಹಾಡಬೇಕು ಎಂದು ಮುಖಂಡರಿಗೆ ಸೂಚಿಸಿದ ಅವರು ತುರುವೇಕೆರೆ ಮೈತ್ರಿ ಟಿಕೆಟ್ ಬಗ್ಗೆ ಅವರವರ ಸಮಾಧಾನಕ್ಕೆ ಮಾತನಾಡುತ್ತಾರೆ. ಚುನಾವಣೆ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ನಿಂಗಪ್ಪ, ಶಾಸಕ ಸುರೇಶ್ ಬಾಬು, ಮುಖಂಡರಾದ ಬಿ.ಎಸ್.ನಾಗರಾಜು, ಕಳ್ಳಿಪಾಳ್ಯ ಲೋಕೇಶ್, ಗಂಗೇಗೌಡ, ಡಿ.ರಘು, ಸಿಂಗೋನಹಳ್ಳಿ ಸೋಮಣ್ಣ, ಕಾಂತರಾಜು, ಶಿವಾನಂದ್, ರವಿ, ಮನೋಜ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...