ಗುಬ್ಬಿ ಪಟ್ಟಣದ ಕೋಟೆ ಬೀದಿಯಲ್ಲಿ ಚಿನ್ನದ ಸರ ಅಪಹರಣ.

Date:

ಬೀದಿ ನಾಯಿಗೆ ಅನ್ನ ಹಾಕಲು ಮನೆಯಿಂದ ಹೊರ ಬಂದ ಮಹಿಳೆಯ ಕತ್ತಿನಲ್ಲಿದ ಚಿನ್ನದಸರವನ್ನು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತು ಪರಾರಿಯಾದ ಘಟನೆ ಗುಬ್ಬಿ ಪಟ್ಟಣದ ಕೋಟೆ ಬೀದಿಯಲ್ಲಿ ನಡೆದಿದೆ.

ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಮಾಮೂಲಿಯಂತೆ ನಾಯಿಗೆ ಅನ್ನ ಹಾಕಲು ದಂಪತಿಗಳು ಮನೆಯಿಂದ ಹೊರ ಬಂದ ಸಮಯದಲ್ಲಿ ಗಿರಿಜಮ್ಮ ಎಂಬ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 58 ಗ್ರಾಂ ತೂಕದ ಚಿನ್ನದ ಸರವನ್ನು ಡಿಯೋ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಚಿನ್ನದಸರ ಕಿತ್ತು ವೇಗವಾಗಿ ಪರಾರಿಯಾದರು. ಅಲ್ಲೇ ನಾಯಿಗೆ ಅನ್ನ ಹಾಕುತ್ತಿದ್ದ ಪತಿ ರೇಣುಕಾರಾಧ್ಯ ಬೈಕ್ ಹಿಂಬಾಲಿಸಿ ಕಳ್ಳರನ್ನು ಹಿಡಿಯಲು ಪ್ರಯತ್ನಿಸಿ ಕೆಳಗೆ ಬಿದ್ದರು.

ಸಂತ್ರಸ್ತರು ಗುಬ್ಬಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...