ತುಮಕೂರು | ವಿದ್ಯಾರ್ಥಿನಿಯರ ಜೊತೆ ಐಟಂ ಡಾನ್ಸ್‌; ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳ ವಿರುದ್ಧ ದೂರು ದಾಖಲು

Date:

ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರೊಂದಿಗೆ ಐಟಂ ಹಾಡೊಂದಕ್ಕೆ ನೃತ್ಯ ಮಾಡಿ, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿರುವ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ, ತಹಸಿಲ್ದಾರ್ ಸಿದ್ದೇಶ್, ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ ಕೊಡಿಗೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ತುಮಕೂರಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮಹಿಳಾ ಹಾಸ್ಟೆಲ್‌ನಲ್ಲಿ ಅಧಿಕಾರಿಗಳು ಅಸಹ್ಯ ಸಾಹಿತ್ಯದ ಹಾಡುಗಳಿಗೆ ವಿದ್ಯಾರ್ಥಿನಿಯರೊಂದಿಗೆ ನೃತ್ಯ ಮಾಡಿದ್ದರು. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹಂದ್ರಾಳ ಗ್ರಾಮದ ಹೆಚ್.ಆರ್ ನಾಗಭೂಷಣ್ ಎಂಬವರು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಅಧಿಕಾರಿಗಳು ದೀಪಾವಳಿ ಹಬ್ಬದ ಆಚರಣೆ ಮಾಡುತ್ತೇವೆ ಎಂಬ ನೆಪದಲ್ಲಿ ಎಸ್‌ಸಿ/ಎಸ್‌ಟಿ ಬಾಲಕಿಯ ಹಾಸ್ಟೆಲ್‌ಗೆ ನಿಯಮಬಾಹಿರವಾಗಿ ನುಗ್ಗಿ, ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡಿದ್ದಾರೆ. ಅವರ ಮೈ, ಕೈ ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾರೆ. ಸರ್ಕಾರಿ ಹೆಣ್ಣು ಮಕ್ಕಳ ಹಾಸ್ಟೆಲ್‌ಗಳಿಗೆ ರಾತ್ರಿ ವೇಳೆ ಪುರುಷರು ತೆರಳಬಾರದೆಂಬ ನಿಯಮಗಳಿದ್ದರೂ ಕೂಡ ಅಧಿಕಾರಿಗಳು ಹಾಸ್ಟೆಲ್‌ಗೆ ಅತಿಕ್ರಮ ಪ್ರವೇಶ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದೆ” ಎಂದು ನಾಗಭೂಷಣ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2023 12 07 at 10.14.08 AM

“ಪರಿಶಿಷ್ಟ ಸಮುದಾಯದ ಹೆಣ್ಣು ಮಕ್ಕಳನ್ನು ಮೋಜು ಮಸ್ತಿಗೆ ಅಧಿಕಾರಿಗಳು ಬಳಸಿಕೊಂಡಿರುವುದು ಎಸ್‌ಸಿ/ಎಸ್‌ಟಿ ಕಾಯ್ದೆಯ ಉಲ್ಲಂಘನೆಯಾಗಿದೆ. ಜವಾಬ್ದಾರಿಯಿಂದ ನಿಯಮಾನುಸಾರ ಮಕ್ಕಳಿಗೆ ಸರ್ಕಾರಿ ಸೇವೆ ನೀಡಬೇಕಾದ ಅಧಿಕಾರಿಗಳು ಸರ್ಕಾರಿ ಸೌಲಭ್ಯ ನೀಡುವ ನೆಪದಲ್ಲಿ ಮಕ್ಕಳನ್ನು ಇಂತಹ ಹೀನ ಕೃತ್ಯಗಳಿಗೆ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ. ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ, ತುಮಕೂರು ತಹಸಿಲ್ದಾರ್ ಸಿದ್ದೇಶ್, ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಗೂ ಇತರ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...