ಕೊರಟಗೆರೆ | ಗೃಹ ಸಚಿವರ ಕ್ಷೇತ್ರದಲ್ಲಿ ಕೆ.ಎಚ್ ಮುನಿಯಪ್ಪ ಸಿಎಂ ಎಂದು ಘೋಷಣೆ ಮೊಳಗಿಸಿದ ಬೆಂಬಲಿಗರು

Date:

ಕರ್ನಾಟಕದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ  ಸಚಿವ ಕೆ.ಹೆಚ್. ಮುನಿಯಪ್ಪ  ಅವರು ಮಧುಗಿರಿಯ ತನ್ನ ಸಂಬಂಧಿಗಳ ಖಾಸಗಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಸಚಿವರನ್ನು ಸ್ವಾಗತಿಸಿದ ಮಾದರ ಮಹಾಸಭಾ ಮತ್ತು ಮಾದಿಗ ಸಂಘಟನೆಗಳ ಮುಖಂಡರು ಮುಂದಿನ ದಲಿತ ಮುಖ್ಯಮಂತ್ರಿ ಕೆ.ಎಚ್ ಮುನಿಯಪ್ಪ ಗೆ ಜೈ… ಮುಂದಿನ ದಲಿತ ಮುಖ್ಯಮಂತ್ರಿ ಕೆ.ಎಚ್ ಮುನಿಯಪ್ಪಜಿ ಗೆ ಜೈ.. ಎಂಬ ಏರು ಧ್ವನಿಯ ಘೋಷಣೆಗಳು ಮಾರ್ದನಿಸಿದ ಘಟನೆ ನಡೆಯಿತು.

 ಮಧುಗಿರಿ ತಾಲೂಕಿನ ಜಡಗೊಂಡನಹಳ್ಳಿ ಗ್ರಾಮದಲ್ಲಿ ಸಂಬಂಧಿಕರ ಖಾಸಗಿ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದ ಸಚಿವರನ್ನ ತುಮಕೂರು ಜಿಲ್ಲೆಯ ಮಾದಿಗ ಸಮುದಾಯದ ಮುಖಂಡರು ಪಟ್ಟಣದ ರಿಂಗ್ ರಸ್ತೆಯಲ್ಲಿ ಜಮಾವಣೆಗೊಂಡು ಮುಂದಿನ ಸಿಎಂ ಮುನಿಯಪ್ಪ ಎಂಬ ಘೋಷಣೆ ಮೊಳಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ..

 ಇದೇ ಸಂದರ್ಭದಲ್ಲಿ ಸುವರ್ಣಗಿರಿ ಸಂಜೀವಿನಿ ತಪ್ಪೋ ಕ್ಷೇತ್ರ ಸಿದ್ದರಬೆಟ್ಟ ಪ್ರಾಂತ್ಯವನ್ನು ಆಳಿದ ಕುರಂಗರಾಜ ಅಳಿದ ನೆಲವನ್ನ ಗುರುತಿಸಿ ಸಂರಕ್ಷಿಸುವುದರ ಜೊತೆಗೆ ಕುರಂಗರಾಜನ ಪ್ರತಿಷ್ಠಾನದ ಬೆಳವಣಿಗೆಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಬೇಕು ಎಂಬ ಮನವಿಯನ್ನ ಕೊರಟಗೆರೆ ತಾಲೂಕು ಮಾದರ ಮಹಾಸಭಾ ಅಧ್ಯಕ್ಷ ವಿಭೂತಿ ಸಿದ್ದಪ್ಪ, ದಾಡಿ ವೆಂಕಟೇಶ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ತುಮಕೂರು ಜಿಲ್ಲಾ ಮಾದರಾ ಮಹಾಸಭಾ ಜಿಲ್ಲಾಧ್ಯಕ್ಷ ಹುಚ್ಚಯ್ಯ ಅವರು ಶತಶತಮಾನಗಳಿಂದ ಶೋಷಣೆ ತುಳಿತ ಕೊಳಗಾದ ಮಾದಿಗ ಸಮುದಾಯದ ಯುವಕರನ್ನ ಸಂಘಟಿಸಿ ಮುನ್ನಡೆಸಬೇಕು ಎಂದು ಸಚಿವರಲ್ಲಿ ಬೇಡಿಕೆ ಇಟ್ಟರು.

 ಇದೇ ಸಂದರ್ಭದಲ್ಲಿ ಮಾದರ ಮಹಾಸಭಾದ ಮಾಜಿ ಶಾಸಕ ಗಂಗಾ ಹನುಮಯ್ಯ, ಜಿಲ್ಲಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಉಪಾಧ್ಯಕ್ಷರಾದ ಡಾ. ಎಲ್ ಮುಕುಂದರಾಜ್, ಕೊಟ್ಟ ಶಂಕರ್ , ಗೂಳರಿವೆ ನಾಗರಾಜು, ಕೊರಟಗೆರೆ ತಾಲೂಕು ಮಾದರ ಮಹಾಸಭಾದ ವಿಭೂತಿ ಸಿದ್ದಪ್ಪ ದಾಡಿ ವೆಂಕಟೇಶ್,ಲಕ್ಷ್ಮೀ ನರಸಪ್ಪ, ವೀರ ಕ್ಯಾತರಾಯ, ಟೌನ್ ಮಾರುತಿ, ಗೋಪಿ, ತೋವಿನಕೆರೆಹನುಮಂತರಾಯಪ್ಪ,ಕಾಮರಾಜನಹಳ್ಳಿ ದೊಡ್ಡಯ್ಯ,ಗಂಗಣ್ಣ, ಚಿಂಪುಗಾನಹಳ್ಳಿ ರವಿ,ನೇಗಲಾಲ ಸಿದ್ದೇಶ್ ಸೇರಿದಂತೆ ಮಾದಿಗ ಸಮುದಾಯದ ವಿವಿಧ ಮುಖಂಡರುಗಳು ಹಲವರು ಉಪಸ್ಥಿತರಿದ್ದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು...