ತುರುವೇಕೆರೆ ಪಟ್ಟಣದಲ್ಲಿ ಕಾಣಿಸಿಕೊಂಡ ಚಿರತೆ : ಮನೆ ಮಾಡಿದ ಆತಂಕ

Date:

 ತುರುವೇಕೆರೆ  ತಾಲೂಕಿನಲ್ಲಿ ಚಿರತೆ ಕಾಟ ಅತಿಯಾಗಿದೆ. ಗುರುವಾರ ರಾತ್ರಿ ಪಟ್ಟಣದ ಎಪಿಎಂಸಿ ಹಿಂಭಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ಜನರ ಮುಂದೆಯೇ ಬೀದಿ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇದರಿಂದಾಗಿ ಜನರು ಭಯಭೀತರಾಗಿದ್ದಾರೆ. 

 ಎಪಿಎಂಸಿ ಕಾಂಪೌಂಡ್‌ ಹಿಂಭಾಗ ಹನುಮಂತಪ್ಪ ಎನ್ನುವವರ ಮನೆ ಮುಂದೆ ಸಾಯಂಕಾಲ 7.30 ರ ಸಮಯದಲ್ಲಿ ಬೀದಿ ನಾಯಿಯನ್ನು ಹೊತ್ತೊಯ್ದ ದೃಶ್ಯವನ್ನು ಅವರ ಮನೆಯ ಮೇಲ್ಭಾಗ ನಿಂತಿದ್ದವರು ಕಣ್ಣಾರೆ ನೋಡಿದ್ದಾರೆ. ಈ ದೃಶ್ಯದಿಂದ ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಅಕ್ಕಪಕ್ಕದ ಮನೆಯವರು ಭಯಭೀತರಾಗಿದ್ದಾರೆ. ಮನೆಯಿಂದ ಹೊರಬರಲೂ ಹೆದರುತ್ತಿದ್ದಾರೆ. 

 ತಾಲೂಕಿನ ಮಾರಪ್ಪನಹಳ್ಳಿಯಲ್ಲಿಯೂ ಚಿರತೆ ಕಾಣಿಸಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಚಿರತೆ ಮರಿ ಕಾಣಿಸಿಕೊಂಡಿದೆ. ತಾರಾ ಕರೀಗೌಡ ಎಂಬುವವರ ಮನೆಯಲ್ಲಿ ಸಾಕಲಾಗಿದ್ದ ನಾಯಿಯನ್ನೂ ಚಿರತೆ ಹೊತ್ತೊಯ್ದಿದೆ. ಅಲ್ಲದೇ ಮುದ್ದೇಗೌಡ ಎಂಬುವವರ ಮನೆಯಲ್ಲಿ ಸಾಕಲಾಗಿದ್ದ ನಾಯಿಯನ್ನು ಸಹ ತಿಂದು ಹಾಕಿದೆ. ತೋಟದ ಸಾಲಿನಲ್ಲಿ ಚಿರತೆ ಕೂಗುವ ಮತ್ತು ಓಡಾಡುವ ದೃಶ್ಯ ಕಾಣಬರುತ್ತಿದೆ ಎಂದು ಮಾರಪ್ಪನಹಳ್ಳಿಯ ರೈತ ಮಹಿಳೆ ತಾರಮ್ಮ ಆತಂಕ ವ್ಯಕ್ತಡಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣದಲ್ಲಿ ಗುರುವಾರ ರಾತ್ರಿ ಚಿರತೆ ಕಾಣಿಸಿಕೊಂಡ ಜಾಗದಲ್ಲಿ ಸಾಕಷ್ಟು ಮನೆಗಳು ಇವೆ. ಅಲ್ಲದೇ ಶಾಲಾ ಕಾಲೇಜುಗಳೂ ಸಹ ಇವೆ. ಚಿರತೆ ಕಾಣಿಸಿಕೊಂಡಿರುವುದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಕೂಡಲೇ ಅರಣ್ಯ ಇಲಾಖಾ ಸಿಬ್ಬಂದಿ ಬೋನು ಇಡುವ ಮೂಲಕ ಚಿರತೆಯನ್ನು ಹಿಡಿಯಬೇಕೆಂದು ನಾಗರೀಕರು ಆಗ್ರಹಿಸಿದ್ದಾರೆ

ವರದಿ – ಎಸ್. ನಾಗಭೂಷಣ್

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುರುವೇಕೆರೆ | ಸಹಜ ಕೃಷಿಯ ಅಚ್ಚರಿ ನಡಿಗೆ ವಿಷಮುಕ್ತ ಆಹಾರದ ಕಡೆಗೆ

 ರೈತರು ಸಹಜ ಕೃಷಿಯತ್ತ ಮುಖ ಮಾಡಿ ವಿಷಮುಕ್ತ ತರಕಾರಿ, ಹಣ್ಣು, ಆಹಾರಗಳನ್ನು...

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...