ಮಧುಗಿರಿ | ಕೆಎಸ್ ಡಿಎಲ್ ಗೆ ವಿದ್ಯಾರ್ಥಿಗಳ ಭೇಟಿ

Date:

ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸ್ನಾತಕ –ಸ್ನಾತಕೋತ್ತರ ವಿದ್ಯಾರ್ಥಿಗಳು ಬೆಂಗಳೂರಿನ ರಾಜಾಜಿನಗರ ದಲ್ಲಿರುವ ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಸಂಸ್ಥೆಯಾದ ಕರ್ನಾಟಕ ಸಾಬೂನು ಮತ್ತು ಡಿಟರ್ಜೆಟ್ಸ್ ಲಿಮಿಟೆಡ್ (ಕೆ ಎಸ್ ಡಿ ಎಲ್) ಗೆ ಕೈಗಾರಿಕ ಭೇಟಿ ನೀಡಿದರು. 

ಕೆ ಎಸ್ ಡಿ ಎಲ್ ನ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್.ಪಿ.ಕೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸಂಸ್ಥೆಯು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಅಗ್ರಮಾನ್ಯ ಸ್ಥಾನ ಪಡೆದಿದ್ದು, ಸಾಬೂನು ಡಿಟರ್ಜೆಂಟ್ಸ್ ಮತ್ತು ವೈಯುಕ್ತಿಕ ಬಳಕೆಯ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಕೃಷ್ಣರಾಜ ಒಡೆಯರ್ ಮಾರ್ಗದರ್ಶನದಲ್ಲಿ ಅಭಿವೃದ್ದಿಯಾಯಿತು, ಪ್ರಸ್ತುತ ಸಾಬೂನು,ಚಂದನ ಎಣ್ಣೆ, ಡಿಟರ್ಜೆಂಟ್ಸ್, ಟಾಲ್ಕಂ ಪೌಡರ್ , ಹ್ಯಾಂಡ್ ವಾಶ್ ಹಾಗೂ ಅಗರ ಬತ್ತಿ ಮುಂತಾದ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಮೈಸೂರು ಸ್ಯಾಂಡಲ್ ಸಾಬೂನಿಗೆ ಭೌಗೋಳಿಕ ಸೂಚಕ ಟ್ಯಾಗ್ ದೊರೆತ್ತಿದ್ದು, ಸಂಸ್ಥೆಗೆ ನೂರು ವರ್ಷಕ್ಕಿಂತ ಹೆಚ್ಚು ಇತಿಹಾಸವಿದ್ದು, ಬೆಂಗಳೂರು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿದ್ದು, ಕರ್ನಾಟಕದ ಅರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ರಂಜಿತಾ ಬಿ.ಆರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಕೈಗಾರಿಕಾ ಭೇಟಿಯಿಂದಾಗಿ ಪ್ರಾಯೋಗಿಕ ಜ್ಞಾನ ಪಡೆಯಲು, ಉದ್ಯಮದ ಕಾರ್ಯಪದ್ದತಿ ತಿಳಿಯುವಿಕೆ, ಉದ್ಯೋಗ ಅವಕಾಶಗಳ ಅರಿವು , ನೈಪುಣ್ಯಗಳ ಅಭಿವೃದ್ದಿ , ತಜ್ಞರ ಜೊತೆ ಸಂವಾದ, ಪಠ್ಯ ಮತ್ತು ಉದ್ಯಮದ ನಡುವೆ ಸಂಪರ್ಕ ಹಾಗೂ ನೈಜ ಪರಿಸರದಲ್ಲಿ ಕಲಿಯುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಲೀಲಾವತಿ ಹೆಚ್ ಮಾತನಾಡಿ ಕೈಗಾರಿಕ ಭೇಟಿ ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ, ವಿಶೇಷವಾಗಿ ವಾಣಿಜ್ಯ, ನಿರ್ವಹಣಾ ಮತ್ತು ತಾಂತ್ರಿಕ ವಿಧ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ನೀಡುವ ಸಾದನವಾಗಿದ್ದು, ಕೇವಲ ಪ್ರವಾಸವಾಗಿರದೆ ಭವಿಷ್ಯದ ವೃತ್ತಿಜೀವನಕ್ಕೆ ದಿಕ್ಕು ತೋರಿಸುವ ಮಹತ್ವದ ಅನುಭವವಾಗಿದೆ ಎಂದರು. 

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕುಮಾರ್ ಕೆ.ಎಸ್, ಪ್ರಾಧ್ಯಾಪಕರಾದ ಮಂಜುನಾಥ್ ಬಿ. ಡಾ.ದುರ್ಗಪ್ಪ, ರಾಮಮೂರ್ತಿ, ಡಾ.ನಾಗರಾಜು, ಸಂಜೀವಮೂರ್ತಿ, ಡಾ.ಲತಾ, ಮುರುಳಿಧರ್, ಡಾ.ಮಂಜುನಾಥ್ ಬುಡಸನಹಳ್ಳಿ, ವ್ಯವಾಸ್ತಾಪಕಿ ಚಂದ್ರಕಲಾ, ರಂಗಸ್ವಾಮಯ್ಯ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಸರ್ವರಿಗೂ ಸಮಾನತೆ ಕಲ್ಪಿಸಿದ ಮಾನವತಾವಾದಿ ಅಂಬೇಡ್ಕರ್ : ಪಿಎಸ್ಐ ಚಂದ್ರಶೇಖರ್

ಭಾರತ ದೇಶದಲ್ಲಿ ಕೋಟ್ಯಂತರ ಶೋಷಿತ ವರ್ಗಗಳಿಗೆ ನ್ಯಾಯ ಸಿಗುವಂತಹ ಸಂವಿಧಾನವನ್ನು ರಚನೆ...

ಮಧುಗಿರಿ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಒತ್ತಾಯ

ಮುಂಗಾರು ವಿಫಲವಾಗಿದ್ದು ಕೃಷಿ ಭೂಮಿಯಲ್ಲಿ ಬಿತ್ತನೆಯಾಗದೆ ರೈತರು ಉದ್ಯೋಗ ಆರಿಸಿ ನಗರಕ್ಕೆ...

ಮಧುಗಿರಿ | ಸಾಹಿತಿ ವಿಜಯಾ ಮೋಹನ್ ನಿಧನ

 ಮಧುಗಿರಿ ತಾಲೂಕಿನ ಸುದ್ದೇಕುಂಟೆ ಗ್ರಾಮದ  ಸ.ಹಿ.ಪ್ರಾ.ಬಾಲಕಿಯರ ಶಾಲೆ ಕೆ.ಆರ್.ಬಡಾವಣೆಯಲ್ಲಿ ಮುಖ್ಯ ಶಿಕ್ಷಕಿ,...

ಮಧುಗಿರಿ, ಕೊರಟಗೆರೆ ಗೆ ಹೇಮೆ ಹರಿಸದೆ ಅನ್ಯಾಯ: ಪರಂ ವಿರುದ್ಧ ರೈತ ಸಂಘ ಕಿಡಿ

ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಹೇಮಾವತಿ ನೀರು ಹೋಗುತ್ತಿದೆ. ಆದರೆ ಮಧುಗಿರಿ,...