ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

Date:

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು, ಮದ್ಯವಲ್ಲ. ಸರ್ಕಾರ ಜನರ ಮೂಲಭೂತ ಸೌಕರ್ಯಗಳನ್ನು ಬಲಿಷ್ಠಗೊಳಿಸಬೇಕೇ ಹೊರತು, ಮದ್ಯದ ನಶಯನ್ನಲ್ಲ ಎಂದು ಸ್ಲಂ ಜನಾಂದೋಲನ ಸಂಘಟನೆಯ ಸಂಚಾಕಲ ಎ ನರಸಿಂಹಮೂರ್ತಿ ಹೇಳಿದ್ದಾರೆ.

ತುಮಕೂರಿನ ಎಸ್.ಎನ್ ಪಾಳ್ಯದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯು ಜಾಗೃತಿ ಸಭೆಯನ್ನು ನಡೆಸಿದೆ. ಸಭೆಯಲ್ಲಿ ಅವರು ಮಾತನಾಡಿದರು.

“ರಾಜ್ಯ ಸರ್ಕಾರದ ಅಬಕಾರಿ ಸಚಿವರು ಒಂದು ಸಾವಿರ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡುವ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದು ಬಡಜನರ ವಿರೋಧಿ ನೀತಿಯಾಗಿದೆ. ವಿಶೇಷವಾಗಿ ನಗರಪ್ರದೇಶಗಲ್ಲಿ ಕೂಲಿ ಮಾಡುವ ಬಡಜನರ ನೆಮ್ಮದಿಯ ಜೀವನವನ್ನು ಹಾಳು ಮಾಡುತ್ತದೆ. ಸರ್ಕಾರವು ಜನತೆಯನ್ನು ನಶೆಗೆ ತಳ್ಳುವ ನಡೆಯಿಂದ ಹಿಂದೆ ಬರಬೇಕು. ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರ – ಈ ಅಂಶಗಳನ್ನು ಸರ್ಕಾರಗಳು ಬಲಿಷ್ಠಗೊಳಿಸಬೇಕೆ ಹೊರತು ಮಧ್ಯದ ನಶೆಯನ್ನಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ಮುಖಂಡ ಗುಲ್ನಾಜ್ ಮಾತನಾಡಿ, “ಸರ್ಕಾರದ ಗೃಹಲಕ್ಷ್ಮೀ, ಗೃಹ ಜ್ಯೋತಿ ಮತ್ತು ಅನ್ನ ಭಾಗ್ಯದಿಂದ ಬಡಜನರಿಗೆ ಅನುಕೂಲವಾಗಿದೆ. ಗಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಮುಂದಾದರೇ ನಮ್ಮ ಕುಟುಂಬದ ಆದಾಯ ಲಿಕ್ಕರ್ ಪಾಲಾಗುತ್ತದೆ. ಹಾಗಾಗಿ, ರೇಷನ್ ಅಂಗಡಿಗಳನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸರ್ಕಾರ ಚಿಂತಿಸಬೇಕು” ಎಂದರು.

ಸಭೆಯಲ್ಲಿ ಸಂಘಟನೆಯ ಕಾರ್ಯದರ್ಶಿ ಅರುಣ್, ಉಪಾಧ್ಯಕ್ಷ ಶಂಕರಯ್ಯ, ತಿರುಮಲಯ್ಯ, ಕೃಷ್ಣಮೂರ್ತಿ, ಮುಬಾರಕ್, ಮೋಹನ್ಕುಮಾರ್, ಶಿವಪ್ಪ, ಜಯಣ್ಣ, ಸೈಯದ್ಪೀರ್, ರಫೀಕ್, ಹನುಮಕ್ಕ, ಲಕ್ಷ್ಮಮ್ಮ, ಜಯಮ್ಮ, ಲಲಿತಮ್ಮ, ರೆಹಮಾನ್, ಮುಮ್ತಾಜ್ ಮುಂತಾದವರು ಪಾಲ್ಗೊಂಡಿದ್ದರು.

ವರದಿ: ಅರುಣ್, ಮಾಸ್‌ ಮೀಡಿಯಾ ವಾಲೆಂಟಿಯರ್, ತುಮಕೂರು 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...