‘ಬರದ ನಾಡಿನ ಬಂಗಾರ’ ಹುಣಸೆಗೆ ಬಂಪರ್ ಬೆಲೆ! ವರ್ಷಕ್ಕೆ 500 ಕೋಟಿಗೂ ಅಧಿಕ ವಹಿವಾಟು

Date:

ಹುಣಸೆ ಹಣ್ಣಿನಿಂದ ವರ್ಷಕ್ಕೆ ₹500 ಕೋಟಿಗೂ ಅಧಿಕ ವಹಿವಾಟು ನಡೆಯುತ್ತದೆ. ಜೊತೆಗೆ ನಾಲ್ಕೈದು ತಿಂಗಳು ರೈತರು, ಮಹಿಳೆಯರು, ಕಾರ್ಮಿಕರು, ಟ್ರ್ಯಾಕ್ಟರ್, ಟೆಂಪೊ ಮಾಲೀಕರು, ಮಧ್ಯವರ್ತಿಗಳು ಸೇರಿದಂತೆ ಸಾವಿರಾರು ಮಂದಿಗೆ ಕೆಲಸ ನೀಡುವ ಮೂಲಕ ಆರ್ಥಿಕ ಚೈತನ್ಯ ನೀಡುತ್ತಿದೆ.

ನೆತ್ತಿಯ ಮೇಲೆ ಸುಡು ಬಿಸಿಲು, ಎಲ್ಲೋ ಒಮ್ಮೊಮ್ಮೆ ಬೀಸುವ ತಂಗಾಳಿ, ದೂರದಲ್ಲೆಲ್ಲೋ ಕೇಳಿಬರುವ ಹುಣಸೆ ಬೋಟು ಕುಟ್ಟುವ ಸದ್ದು, ಮರಗಳ ಕೆಳಗೆ ಇಲ್ಲವೇ ಮನೆಯ ಮುಂಭಾಗದಲ್ಲಿ ಹುಣಸೆಹಣ್ಣನ್ನು ಜಜ್ಜಿ ತೊಳೆಗಳಿಂದ ನಾರು, ಬೀಜ ಬೇರ್ಪಡಿಸುವ ಕೆಲಸದಲ್ಲಿ ಮಗ್ನರಾಗಿರುವ ಹೆಂಗಳೆಯರು…

ತುಮಕೂರಿನ ಗ್ರಾಮೀಣ ಭಾಗದಲ್ಲಿ ಕಂಡು ಬರುವ ದೃಶ್ಯಗಳಿವು. ಸದ್ಯ ‘ಬರದ ನಾಡಿನ ಬಂಗಾರ’ ಎಂದೇ ಕರೆಯಲ್ಪಡುವ ಹುಣಸೆ ಫಸಲು ಈ ಪ್ರದೇಶದಲ್ಲಿ ಸುಗ್ಗಿಯನ್ನೇ ಸೃಷ್ಟಿಸಿದೆ. ಹುಣಸೆ ಸಿಪ್ಪೆ ತೆಗೆಯುವ, ಹಣ್ಣು ಕುಟ್ಟಿ ಬೀಜ ತೆಗೆಯುವ, ಕರಿಪುಳಿ ಒತ್ತುವ, ಹುಣಸೆ ಹಣ್ಣಿನ ಚಕ್ಕ ತುಳಿಯುವ, ದೂರದ ಮಾರುಕಟ್ಟೆಗೆ ಸಾಗಿಸುವಂತಹ ಕೆಲಸಗಳು ಭರದಿಂದ ನಡೆಯುತ್ತಿವೆ.

tamarind tumakur workers

ತುಮಕೂರು ಜಿಲ್ಲೆ ತೆಂಗು ಬೆಳೆಗೆ ಪ್ರಸಿದ್ಧವಾದರೂ ಇಲ್ಲಿ ಹುಣಸೆ ಬೆಳೆಯುವವರ ಪ್ರಮಾಣವೂ ಗಣನೀಯವಾಗಿದೆ. ಜಿಲ್ಲೆಯ ಸುಮಾರು 7 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹುಣಸೆ ಬೆಳೆಯಲಾಗುತ್ತಿದೆ. ತುಮಕೂರು ತಾಲ್ಲೂಕಿನ ಹಳ್ಳಿಗಳು, ಕೊರಟಗೆರೆ, ಮಧುಗಿರಿ, ಶಿರಾ, ಪಾವಗಡ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು ತಾಲ್ಲೂಕುಗಳಲ್ಲಿ ಹುಣಸೆ ಮರಗಳ ಸಂಖ್ಯೆ ಹೇರಳವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಣಸೆ ಮಳೆನೀರು ಆಶ್ರಿತ ಬೆಳೆಯಾಗಿದ್ದು, ಕೀಟ ಮತ್ತು ರೋಗಬಾಧೆ ಕಡಿಮೆ. ನಿರ್ವಹಣೆ ಮಾಡುವುದೂ ಸುಲಭ. ಜಿಲ್ಲೆಯಲ್ಲಿ ಬೆರಳೆಣಿಕೆಯ ರೈತರನ್ನು ಬಿಟ್ಟರೆ ಉಳಿದಂತೆ ಎಲ್ಲೂ ಪ್ಲಾಂಟೇಷನ್‌ ರೂಪದಲ್ಲಿ ಹುಣಸೆ ಬೆಳೆದಿಲ್ಲ. ಅಲ್ಲಲ್ಲಿ ತೋಟಗಳಲ್ಲಿ, ಕಣದ ಜಾಗದಲ್ಲಿ, ರಸ್ತೆ ಬದಿ ಹಾಗೂ ಖಾಲಿ ನಿವೇಶನ, ಹಿತ್ತಲುಗಳು, ತಗ್ಗು ದಿಣ್ಣೆ ಪ್ರದೇಶದಲ್ಲಿ ಹುಣಸೆಯನ್ನು ಪರ್ಯಾಯ ಬೆಳೆಯಾಗಿ ಬೆಳೆಯುವುದೇ ಹೆಚ್ಚು.

TAMARIND

ಹುಣಸೆ ಹಣ್ಣಿಗೆ ದಾಖಲೆ ಬೆಲೆ

ಹೊಸ ವರ್ಷ ಈ ಭಾಗದ ಹುಣಸೆ ಬೆಳೆಗಾರರಲ್ಲಿ ಮಂದಹಾಸ ಮೂಡಿಸಿದೆ. ಇದಕ್ಕೆ ಕಾರಣ ತುಮಕೂರು ಮಾರುಕಟ್ಟೆಯಲ್ಲಿ ಹುಣಸೆ ಹಣ್ಣಿಗೆ ಬಂಪರ್ ಬೆಲೆ ಸಿಕ್ಕಿರುವುದು. ಫೆಬ್ರುವರಿ 7ರಂದು ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್‌ಗೆ ಕನಿಷ್ಠ‍ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದೆ.

ಕಳೆದ ವರ್ಷದ ಇದೇ ಹೊತ್ತಿಗೆ ಕ್ವಿಂಟಲ್ ಹುಣಸೆ ಗರಿಷ್ಠ ₹26 ಸಾವಿರದವರೆಗೂ ಮಾರಾಟವಾಗಿತ್ತು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಉತ್ತಮ ಬೆಲೆ ಸಿಗುತ್ತಿದೆ. ಇಳುವರಿ ತೀವ್ರವಾಗಿ ಕುಸಿದಿದ್ದು, ಮಾರುಕಟ್ಟೆಗೆ ಹಣ್ಣಿನ ಆವಕ ಕಡಿಮೆ ಆಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

‘ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಏನೋ ಸಿಗುತ್ತಿದೆ. ಆದರೆ ಈ ಬಾರಿ ಕಡಿಮೆ ಮಳೆ ಆಗಿರುವ ಕಾರಣ ಹಣ್ಣಿನ ತಿರುಳು ಸಣ್ಣ ಆಗಿದ್ದು, ಇದರಿಂದ ಇಳುವರಿಯೂ ಕಡಿಮೆಯಾಗಿದೆ. ಇದರಿಂದ ಆದಾಯದಲ್ಲಿ ಹೆಚ್ಚಿನ ವ್ಯತ್ಯಾಸ ಆಗಿಲ್ಲ’ ಎಂದು ರೈತ ರಂಗನಾಥ್ ತಿಳಿಸಿದರು.

ಹುಣಸೆ ಅಭಿವೃದ್ಧಿ ಮಂಡಳಿಗೆ ಹೆಚ್ಚಿದ ಕೂಗು

ತೆಂಗು ಅಭಿವೃದ್ಧಿ ಮಂಡಳಿ, ತೆಂಗು ನಾರಿನ ಅಭಿವೃದ್ಧಿ ಮಂಡಳಿ, ತಂಬಾಕು ಮಂಡಳಿ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಕಾಫಿ ಮಂಡಳಿ ಮಾದರಿಯಲ್ಲೇ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂಬುದು ಇಲ್ಲಿನ ಹುಣಸೆ ಬೆಳೆಗಾರರ ಒತ್ತಾಯ.

ಅಂದಾಜಿನ ಪ್ರಕಾರ ಜಿಲ್ಲೆಯಲ್ಲಿ ಹುಣಸೆ ಹಣ್ಣಿನಿಂದ ವರ್ಷಕ್ಕೆ ₹500 ಕೋಟಿಗೂ ಅಧಿಕ ವಹಿವಾಟು ನಡೆಯುತ್ತದೆ. ಜೊತೆಗೆ ನಾಲ್ಕೈದು ತಿಂಗಳು ರೈತರು, ಮಹಿಳೆಯರು, ಕಾರ್ಮಿಕರು, ಟ್ರ್ಯಾಕ್ಟರ್, ಟೆಂಪೊ ಮಾಲೀಕರು, ಮಧ್ಯವರ್ತಿಗಳು ಸೇರಿದಂತೆ ಸಾವಿರಾರು ಮಂದಿಗೆ ಕೆಲಸ ನೀಡುವ ಮೂಲಕ ಆರ್ಥಿಕ ಚೈತನ್ಯ ನೀಡುತ್ತಿದೆ.

manjunath activist
ಚಿಗುರು ಯುವಜನ ಸಂಘದ ಅಧ್ಯಕ್ಷ ಮಂಜುನಾಥ್ ಅಮಲಗೊಂದಿ

ಚಿಗುರು ಯುವಜನ ಸಂಘದ ಅಧ್ಯಕ್ಷ ಮಂಜುನಾಥ್ ಅಮಲಗೊಂದಿ ಮಾತನಾಡಿ, ತುಮಕೂರು ಎಪಿಎಂಸಿಯು ರಾಜ್ಯದ ಅತಿದೊಡ್ಡ ಹುಣಸೆ ಹಣ್ಣು ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆದಿದೆ. ಆದರೆ ಹುಣಸೆ ಬೆಳೆಗಾರರ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಮಿಷನ್ ದಂಧೆಯಿಂದ ರೈತರಿಗೆ ಭಾರಿ ಮೋಸವಾಗುತ್ತಿದೆ. ರಾಜ್ಯದಲ್ಲಿ ಉತ್ತಮ ಬೆಲೆ ಸಿಗದ ಕಾರಣ, ಇಲ್ಲಿನ ರೈತರು ಆಂಧ್ರಪ್ರದೇಶದ ಹಿಂದೂಪುರ ಮಾರುಕಟ್ಟೆಯಲ್ಲಿ ಹುಣಸೆ ಮಾರುತ್ತಿದ್ದಾರೆ. ಇದನ್ನೆಲ್ಲಾ ತಡೆಗಟ್ಟಲು ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಬೇಕು. ಮಂಡಳಿ ಮೂಲಕ ಹುಣಸೆ ಉತ್ಪನ್ನಗಳನ್ನು ಮಾಡುವ ಮೂಲಕ ಗ್ರಾಮೀಣ ಯುವಜನರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಅವರು ತಿಳಿಸಿದರು.

ತುಮಕೂರಿನ ಹುಣಸೆ ಸುಗ್ಗಿ ಸಂಭ್ರಮದ ವಿಡಿಯೊ

ತುಮಕೂರಿನಲ್ಲಿ ಕೋಲ್ಡ್‌ ಸ್ಟೋರೇಜ್‌ ಇಲ್ಲ. ಇದರಿಂದ ರೈತರು ಅನಿವಾರ್ಯವಾಗಿ ಕಡಿಮೆ ದರವಿದ್ದಾಗಲೇ ಹುಣಸೆ ಮಾರುವ ಸ್ಥಿತಿ ಎದುರಿಸಬೇಕಾಗಿದೆ. ಕೋಲ್ಡ್‌ ಸ್ಟೋರೇಜ್‌ ಇದ್ದರೆ ಬೆಲೆ ಕುಸಿತದ ಸಂದರ್ಭದಲ್ಲಿ ಹುಣಸೆ ಹಣ್ಣನ್ನು ದೀರ್ಘಕಾಲದವರೆಗೆ ಕಾಪಿಟ್ಟು ಧಾರಣೆ ಏರಿಕೆಯಾದಾಗ ಮಾರಾಟ ಮಾಡಿದರೆ ಲಾಭ ಸಿಗುತ್ತದೆ. ಹಾಗಾಗಿ, ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದೂ ಅವರು ಮನವಿ ಮಾಡಿದರು.

‘ನನ್ನ ಎರಡು ಎಕರೆ ಜಮೀನಿನಲ್ಲಿ 30 ಹುಣಸೆ ಮರಗಳಿವೆ. 25-30 ಕ್ವಿಂಟಲ್ ಹುಣಸೆ ಬರುತ್ತದೆ. ಮಳೆ ಅತಿ ಕಡಿಮೆ ಆದರೂ ಸಮಸ್ಯೆ. ಹೆಚ್ಚಾದರೂ ಸಮಸ್ಯೆ. ಕೂಲಿ, ಬಾಡಿಗೆ, ಕಮಿಷನ್ ದುಬಾರಿ ಆಗುತ್ತಿರುವ ಕಾರಣ ಬೆಳೆಗಾರರಿಗೆ ಏನೂ ದಕ್ಕುತ್ತಿಲ್ಲ. ಹುಣಸೆಗೆ ಬೆಳೆ ವಿಮೆ ಕಲ್ಪಿಸಬೇಕು. ಜೊತೆಗೆ ಜಿಲ್ಲೆಯಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಿದರೆ ನಮಗೂ ಒಳ್ಳೆಯದಾಗುತ್ತದೆ’ ಎನ್ನುತ್ತಾರೆ ಹುಣಸೆ ಬೆಳೆಗಾರ ರಂಗನಾಥ್.

ತೆಂಗು ಬಿಟ್ಟರೆ ಹುಣಸೆ ಈ ಭಾಗದ ಜನರ ಬದುಕಿಗೆ ಆಸರೆಯಾಗಿದೆ. ಹೀಗಾಗಿ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಿದರೆ ರೈತರಿಗೆ, ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗಲಿದೆ. ರಾಜ್ಯ ಸರ್ಕಾರ ಮಂಡಳಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂಬುದು ಇಲ್ಲಿನ ರೈತ ಮುಖಂಡರ ಒತ್ತಾಯವಾಗಿದೆ.

WhatsApp Image 2025 01 01 at 15.46.25
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...

ತುಮಕೂರು | ವಿವಿಧ ಜಯಂತಿ ಆಚರಣೆ ಪೂರ್ವಭಾವಿ ಸಭೆ

ತುಮಕೂರು ಜಿಲ್ಲಾಡಳಿತದಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...

ಮೌಢ್ಯಕ್ಕೆ ಸರ್ಕಾರಿ ಹಾಸ್ಟೆಲ್ ಬಲಿ; ‘ಮುಟ್ಟು’ ಮೈಲಿಗೆಯೆಂದು ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಬೀಗ

ಜಗತ್ತು ತಂತ್ರಜ್ಞಾನಗಳ ಹಿಂದೆ ಓಡುತ್ತಿದೆ. ಎಐ ಇಡೀ ಜಗತ್ತನ್ನೇ ಆಳುತ್ತಿದೆ. ಆದರೆ,...