ತುಮಕೂರು ಮೆಟ್ರೋ ಯೋಜನೆ ಡಿಪಿಆರ್​ಗೆ ಬಿಡ್ ಕರೆದ ಬಿಎಂಆರ್‌ಸಿಎಲ್

Date:

ಬೆಂಗಳೂರಿನ ನಮ್ಮ ಮೆಟ್ರೋ ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದ್ದು, 59.6 ಕಿಮೀ ಹಸಿರು ಮಾರ್ಗ ವಿಸ್ತರಣೆಯ ವಿಸ್ತ್ರತ ಯೋಜನಾ ವರದಿ ತಯಾರಿಸಲು ಬಿಎಂಆರ್‌ಸಿಎಲ್ ಬಿಡ್ ಆಹ್ವಾನಿಸಿದೆ.

ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಿರುವ ಈ ಯೋಜನೆಗೆ ನೋಂದಾಯಿಸಿಕೊಳ್ಳುವ ಕಂಪನಿಗಳು 4.5 ಲಕ್ಷ ರೂ ಠೇವಣಿ ಇಡಬೇಕಿದೆ. ಬಿಡ್ ಸಲ್ಲಿಸಲು ನವೆಂಬರ್ 20ರವರೆಗೆ ಗಡುವಿದ್ದು, ನವೆಂಬರ್ 21ರಂದು ಟೆಂಡರ್ ತೆರೆಯುವ ಸಾಧ್ಯತೆಯಿದೆ. ಡಿಪಿಆರ್ ತಯಾರಿಕೆಗೆ ಐದು ತಿಂಗಳ ಅವಧಿ ಕೊಡಲಾಗಿದೆ.

ಮಾದಾವರ (ಬಿಐಇಸಿ)–ತುಮಕೂರು ಮಾರ್ಗವು ನೆಲಮಂಗಲ, ದಾಬಸ್‌ಪೇಟೆ ಮತ್ತು ಕ್ಯಾತಸಂದ್ರ ಮೂಲಕ ಹಾದು ಹೋಗಲಿದ್ದು, ಯೋಜನೆಯ ಮೊದಲ ಹಂತಕ್ಕೆ 20,649 ಕೋಟಿ ರೂ.ವೆಚ್ಚವಾಗುವ ಅಂದಾಜು ಇದೆ. ಈ ಯೋಜನೆ 2024–25ರ ಕರ್ನಾಟಕ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದ ಪ್ರಮುಖ ಸಾರಿಗೆ ಯೋಜನೆಗಳಲ್ಲಿ ಒಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಆತ್ಮಾವಲೋಕನದ ಕಾಲ ಮಾತ್ರವಲ್ಲ, ಪ್ರಬಲವಾಗಿ ಸಜ್ಜುಗೊಳ್ಳುವ ಸಮಯ!

ಮೆಟ್ರೋ ಲೈನ್ ವಿಸ್ತರಣೆಯಾದಲ್ಲಿ ಒಂದು ದಿಕ್ಕಿನಲ್ಲಿ ಪ್ರತೀ ಗಂಟೆಗೆ ಸುಮಾರು 15 ಸಾವಿರ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ. ಮಾದವಾರದ ಬಿಐಇಸಿಯಿಂದ ತುಮಕೂರುವರೆಗೆ ಪ್ರಮುಖವಾಗಿ 26 ಮೆಟ್ರೋ ನಿಲ್ದಾಣಗಳನ್ನು ಬರಲಿದ್ದು, ಎಲ್ಲವೂ ಎಲೆವೆಟೆಡ್‌ ಮಾದರಿಯ ನಿಲ್ದಾಣಗಳಾಗಿವೆ.

ಬೆಂಗಳೂರು – ತುಮಕೂರು ಮೆಟ್ರೋ ಮಾರ್ಗದ ಸಂಭಾವ್ಯ ನಿಲ್ದಾಣಗಳು :

  • ಮಾದಾವರ
  • ಮಾಕಳಿ
  • ದಾಸನಪುರ
  • ನೆಲಮಂಗಲ
  • ವೀವರ್ ಕಾಲೋನಿ
  • ನೆಲಮಂಗಲ ವಿಶ್ವೇಶ್ವರಪುರ
  • ನೆಲಮಂಗಲ ಟೋಲ್‌ಗೇಟ್
  • ಬೂದಿಹಾಳ್
  • ಟಿ. ಬೇಗೂರು
  • ತಿಪ್ಪಗೊಂಡನಹಳ್ಳಿ
  • ಕುಲವನಹಳ್ಳಿ
  • ಮಹಿಮಾಪುರ
  • ಬಿಲ್ಲನ್‌ಕೋಟೆ
  • ಸೋಂಪುರ ಕೈಗಾರಿಕಾ ಪ್ರದೇಶ
  • ದಾಬಸ್‌ಪೇಟೆ
  • ನಲ್ಲಾಯನಪಾಳ್ಯ
  • ಚಿಕ್ಕಹಳ್ಳಿ
  • ಹಿರೇಹಳ್ಳಿ ಕೈಗಾರಿಕಾ ಪ್ರದೇಶ
  • ಪಂಡಿತನಹಳ್ಳಿ
  • ಕ್ಯಾತ್ಸಂದ್ರ ಬೈಪಾಸ್
  • ಕ್ಯಾತ್ಸಂದ್ರ
  • ಎಸ್‌ಐಟಿ (ಸಿದ್ಧಾರ್ಥ ಕಾಲೇಜು)
  • ತುಮಕೂರು ಬಸ್ ನಿಲ್ದಾಣ
  • ಟೂಡಾ ಲೇಔಟ್
  • ನಾಗಣ್ಣ ಪಾಳ್ಯ
  • ಶಿರಾ ಗೇಟ್‌
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....