ತಿಪಟೂರು | ಭಯವನ್ನು ಮೆಟ್ಟಿನಿಂತು ಸಮುದ್ರವಾಗಬೇಕು : ಮಾಹಿತಿ ಆಯುಕ್ತೆ ಡಾ. ಮಮತಾ

Date:

ಹೆಣ್ಣಿನಲ್ಲಿನ ಭಯವನ್ನು ಅವಳಿಗೆ ಬಳುವಳಿಯಾಗಿ ಕೊಡುತ್ತ ಬಂದಿರುವುದು ಹೆಣ್ಣೇ ಹೊರತು, ಗಂಡಲ್ಲ. ಮಹಿಳೆಯರು ತಮ್ಮಲ್ಲಿನ ದ್ವಂದ್ವ ಮತ್ತು ಭಯ ಬಿಟ್ಟು ಆತ್ಮವಿಶ್ವಾಸದಿಂದ ತಮ್ಮ ಗುರಿಯತ್ತ ಮುನ್ನಡೆಯಬೇಕು. ಭಯವನ್ನು ಮೆಟ್ಟಿನಿಂತು ಸಮುದ್ರವಾಗಬೇಕು ಎಂದು ರಾಜ್ಯ ಮಾಹಿತಿ ಆಯುಕ್ತೆ ಡಾ. ಮಮತಾ ಬಿ.ಆರ್. ತಿಳಿಸಿದರು. 

   ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸೆಮಿನಾರ್ ಹಾಲ್ ನಲ್ಲಿ ಬುಧವಾರ ಮಹಿಳಾ ಸಬಲೀಕರಣ ಕೋಶ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ, ಪಾಕ್, ಯುಕೆ, ಸ್ವೀಡನ್, ಸ್ವಿಜರ್ಲ್ಯಾಂಡ್ ದೇಶಗಳಲ್ಲಿನ ಹೆಣ್ಣಿನ ಸ್ಥಿತಿ ಗತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತ, ಸಬಲೀಕರಣವೆಂದರೆ, ಗಂಡಿಗಿಂತ ತಾನು ಶ್ರೇಷ್ಠಳು ಎಂದು ತೋರಿಸಿಕೊಳ್ಳುವ ಅಧಿಕಾರವಲ್ಲ, ಸಬಲೀಕರಣವೆಂದರೆ ನಮ್ಮ ಅಡೆತಡೆಗಳನ್ನು ಮೀರಿ ಸಮಾಜಕ್ಕೆ ಹೆಚ್ಚಾಗಿ ಒಳ್ಳೆಯದನ್ನು ನೀಡುವುದು ಎಂದರು.

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಶಶಿಕುಮಾರ್. ಎಚ್. ಸಿ. ಮಾತನಾಡಿ, ಮಹಿಳೆಯರಿಗೆ ಮೊದಲಿಗಿಂತ ಇಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶಗಳಿದ್ದು, ಅವರು ಅಡಿಗೆ ಮನೆ, ಸಂಸಾರ ಎಂಬೆಲ್ಲ ಕಟ್ಟುಪಾಡುಗಳಿಂದ ಹೊರಬಂದು ತಮ್ಮ ಗುರಿ ಸಾಧನೆಯತ್ತ ಹೆಜ್ಜೆ ಹಾಕಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

   ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ. ಯೋಗೀಶ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರೇಣುಕಾ.ಆರ್, ಐಕ್ಯೂಎಸಿ ಸಹ ಸಂಯೋಜಕ ಡಾ. ಸೈಯದ್ ಇಬ್ರಾಹಿಂ, ಕನ್ನಡ ವಿಭಾಗದ ಮುಖ್ಯಸ್ಥೆ ಸ್ಮಿತಾ, ಪ್ರಾಧ್ಯಾಪಕಿಯರಾದ ಸುಭದ್ರಮ್ಮ, ಅರಣಿ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ವರದಿ: ಹಣಮಂತ ಕಾಂಬಳೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯನಿಗೆ ‘ಯಶಸ್ವಿನಿ ಟ್ರಸ್ಟ್‌’ನಲ್ಲಿ ಸ್ಥಾನ; ಕಾಂಗ್ರೆಸ್‌ ಕಾರ್ಯಕರ್ತರ ವಿರೋಧ

ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯನನ್ನು ಸರ್ಕಾರದ 'ಯಶಸ್ವಿನಿ...

ತಿಪಟೂರು | ಹೆರಿಗೆಯಲ್ಲಿ ರಕ್ತಸ್ರಾವ, ಗುದನಾಳದಲ್ಲಿ ಆಗುವ ಸಣ್ಣ ಗಾಯದ ಬಗ್ಗೆ ಅರಿವು ಕಾರ್ಯಾಗಾರ

ಹೆರಿಗೆಯಲ್ಲಿ ರಕ್ತಸ್ರಾವ ಮತ್ತು ಗುದನಾಳದಲ್ಲಿ ಆಗುವ ಸಣ್ಣ ಗಾಯದ ಬಗ್ಗೆ ಅರಿವು...

ತಿಪಟೂರು | ಜನ ಸ್ವಾತಂತ್ರ್ಯೋತ್ಸವ : ಶ್ರಮಿಕ ಸೇನಾನಿಗಳಿಗೆ ಗೌರವ ಸಮರ್ಪಣೆ

ಜನಸ್ಪಂದನಾ ಟ್ರಸ್ಟ್ ತಿಪಟೂರು, ಹಾಗೂ ಸಂವಿಧಾನ ಸಂರಕ್ಷಣಾ ಪಡೆ, ಸಹಯೋಗದಲ್ಲಿ ಆಗಸ್ಟ್...

ತಿಪಟೂರು | ಕುಪ್ಪಾಳು ಪಂಚಾಯಿತಿಯಲ್ಲಿ  ಅವ್ಯವಹಾರ : ತನಿಖೆಗೆ ಗ್ರಾಪಂ ಅಧ್ಯಕ್ಷೆ ಗಾಯಿತ್ರಿ ಮೈಲಾರಸ್ವಾಮಿ  ಒತ್ತಾಯ

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ...