ತಿಪಟೂರು | ಭವಿಷ್ಯದ ಬಗ್ಗೆ ದೃಢ ನಿರ್ಧಾರ ಕೈಗೊಳ್ಳಿ : ಸಪ್ತಶ್ರೀ

Date:

ವಿದ್ಯಾರ್ಥಿಗಳು ತಾವು ಭವಿಷ್ಯದಲ್ಲಿ ಏನು ಮಾಡಬೇಕು, ಏನಾಗಬೇಕು, ಯಾವ ಹುದ್ದೆಗೇರಬೇಕು ಎಂಬುದರ ಬಗ್ಗೆ ದೃಢ ನಿರ್ಧಾರ ಕೈಗೊಂಡು, ತಮ್ಮ ಗುರಿಯತ್ತ ಕಾರ್ಯ ಪ್ರವೃತ್ತರಾಗಬೇಕು. ಆಗ ಅವಕಾಶಗಳು ತಾನಾಗಿಯೇ ಸಿಗುತ್ತವೆ ಎಂದು ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಬಿ.ಕೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಸಬಲೀಕರಣ ಕೋಶ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಶೈಕ್ಷಣಿಕವಾಗಿ ಸಬಲರಾಗುವುದರಿಂದ ಬಾಲ್ಯ ವಿವಾಹ, ಭ್ರೂಣ ಹತ್ಯೆ ಎಂಬ ಸಾಮಾಜಿಕ ಪಿಡುಗುಗಳ ಜೊತೆಗೆ ಬಡತನ ನಿರ್ಮೂಲನೆ ಮಾಡಬಹುದು.ಆದ್ದರಿಂದ ಪದವಿ ಮುಗಿಸಿದ ಕೂಡಲೇ ವಿದ್ಯಾರ್ಥಿಗಳು ಅದರಲ್ಲೂ ಮಹಿಳೆಯರು ಮದುವೆ, ಮಕ್ಕಳು ಅಂತ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ, ಯುಪಿಎಸ್ಸಿ, ಕೆಪಿಎಸ್ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ, ಅಧಿಕಾರಿಗಳಾಗುವ ಕನಸು ಹೊಂದಿರಬೇಕು ಎಂದರು. 

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿಮ್ಮ ಅಂಕಗಳಿಗಿಂತ ನಿಮ್ಮಲ್ಲಿನ ಕೌಶಲ್ಯಗಳು ಮುಖ್ಯವಾಗುತ್ತವೆ. ಆದ್ದರಿಂದ ನಿಮ್ಮ ಗುರಿಯೆಡೆಗೆ ತಲುಪಲು ಹೆಚ್ಚಿನ ಕೌಶಲ್ಯಗಳನ್ನು ಕಲಿಯಿರಿ, ಮಾರ್ಗದರ್ಶನಕ್ಕೆ ನಿಮ್ಮ ಶಿಕ್ಷಕ ವರ್ಗವನ್ನು ಬಳಸಿಕೊಳ್ಳಿ. ಒಟ್ಟಾರೆ ನಿಮ್ಮಿಷ್ಟದ ಕ್ಷೇತ್ರಗಳಲ್ಲಿ ಹೆಚ್ಚಿನ ಜ್ಞಾನ ಪಡೆಯುತ್ತಾ ಸಾಗಿರಿ, ಜೊತೆಗೆ ಸ್ಪರ್ಧಾತ್ಮಕ ಪರೀಕ್ಷಾ ತಯಾರಿಯಲ್ಲಿರುವವರು ಎಲ್ಲ ರೀತಿಯ ಪರೀಕ್ಷೆಗಳನ್ನು ಎದುರಿಸುತ್ತಾ ಬನ್ನಿ ಎಂದು ತಮ್ಮ ಸ್ಪರ್ಧಾತ್ಮಕ ದಿನಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಶಶಿಕುಮಾರ್. ಎಚ್. ಸಿ. ಮಾತನಾಡಿ, ವಿದ್ಯಾರ್ಥಿಗಳು ತಮಗಿರುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಗುರಿಯತ್ತ ಸಾಗಬೇಕು. ಸಪ್ತಶ್ರೀ ಮೇಡಂ ಹೇಳಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ, ಉನ್ನತ ಹುದ್ದೆ ತಲುಪುವಂತಾಗಬೇಕು ಎಂದರು.

   ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ. ಯೋಗೀಶ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರೇಣುಕಾ.ಆರ್, ಐಕ್ಯೂಎಸಿ ಸಹ ಸಂಯೋಜಕ ಡಾ. ಸೈಯದ್ ಇಬ್ರಾಹಿಂ, ಕನ್ನಡ ವಿಭಾಗದ ಮುಖ್ಯಸ್ಥೆ ಸ್ಮಿತಾ, ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯನಿಗೆ ‘ಯಶಸ್ವಿನಿ ಟ್ರಸ್ಟ್‌’ನಲ್ಲಿ ಸ್ಥಾನ; ಕಾಂಗ್ರೆಸ್‌ ಕಾರ್ಯಕರ್ತರ ವಿರೋಧ

ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯನನ್ನು ಸರ್ಕಾರದ 'ಯಶಸ್ವಿನಿ...

ತಿಪಟೂರು | ಹೆರಿಗೆಯಲ್ಲಿ ರಕ್ತಸ್ರಾವ, ಗುದನಾಳದಲ್ಲಿ ಆಗುವ ಸಣ್ಣ ಗಾಯದ ಬಗ್ಗೆ ಅರಿವು ಕಾರ್ಯಾಗಾರ

ಹೆರಿಗೆಯಲ್ಲಿ ರಕ್ತಸ್ರಾವ ಮತ್ತು ಗುದನಾಳದಲ್ಲಿ ಆಗುವ ಸಣ್ಣ ಗಾಯದ ಬಗ್ಗೆ ಅರಿವು...

ತಿಪಟೂರು | ಜನ ಸ್ವಾತಂತ್ರ್ಯೋತ್ಸವ : ಶ್ರಮಿಕ ಸೇನಾನಿಗಳಿಗೆ ಗೌರವ ಸಮರ್ಪಣೆ

ಜನಸ್ಪಂದನಾ ಟ್ರಸ್ಟ್ ತಿಪಟೂರು, ಹಾಗೂ ಸಂವಿಧಾನ ಸಂರಕ್ಷಣಾ ಪಡೆ, ಸಹಯೋಗದಲ್ಲಿ ಆಗಸ್ಟ್...

ತಿಪಟೂರು | ಕುಪ್ಪಾಳು ಪಂಚಾಯಿತಿಯಲ್ಲಿ  ಅವ್ಯವಹಾರ : ತನಿಖೆಗೆ ಗ್ರಾಪಂ ಅಧ್ಯಕ್ಷೆ ಗಾಯಿತ್ರಿ ಮೈಲಾರಸ್ವಾಮಿ  ಒತ್ತಾಯ

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ...