ತುಮಕೂರು | ಶೇ‌.50 ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅನುಮೋದಿಸಬೇಕು: ಡಾ.ಜಿ.ಪರಮೇಶ್ವರ

Date:

 ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದೆ ರಾಜೀವಗಾಂಧಿ ಅವರು ಪ್ರಧಾನಮಂತ್ರಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ಸ್ಥಾನಮಾನಗಳನ್ನು ಕೊಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಅವಕಾಶಗಳನ್ಮು ನೀಡಲಾಯಿತು‌. ಅದರಿಂದ ಇದೀಗ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿ ಪ್ರಾಧಾನ್ಯತೆ ಸಿಕ್ಕೆದೆ ಎಂದರು.

ನಂತರ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಇದ್ದಾಗ ಸಂಸತ್ತಿನಲ್ಲೂ ಶೇ.50 ಅವಕಾಶ ಕಲ್ಪಿಸುವ ಮಹಿಳಾ ಮಸೂದೆಯನ್ನು ಮಂಡಿಸಲಾಯಿತು. ಆ ದಿನಗಳಲ್ಲಿ ರಾಜ್ಯಸಭೆಯಲ್ಲಿ ಅದು ಅನುಮೋದನೆ ಆಗಲಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಈ ಮಸೂದೆಯನ್ನು ಅನುಮೋದಿಸಿ ಮಹಿಳೆಗೆ ಶಕ್ತಿ ನೀಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003011001

ಇಡೀ ವಿಶ್ವದಲ್ಲಿ ಭಾರತದಲ್ಲಿಯೇ ಮಹಿಳೆಯರಿಗೆ ಹೆಚ್ಚು ಅವಕಾಶಗಳನ್ನು ಕಲ್ಪಿಸಿ ಸಬಲೀಕರಣಗೊಳಿಸಲಾಗಿದೆ. ಇಂದು ಮಹಿಳೆ ಎಲ್ಲ ಕ್ಷೇತ್ರದಲ್ಲೂ ಪುರುಷರನ್ನು ಹಿಂದಿಕ್ಕಿ ಸಾಧನೆ ಮಾಡುತ್ತಿದ್ದಾರೆ ಎಂದರು.

ನಮ್ಮ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿಯೇ ಘೋಷಿಸಿದಂತೆ ಮಹಿಳೆಯರ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಯಾರೂ ಅವಕಾಶಗಳನ್ನು ಕಾದು ಕೂರುವುದು ಸರಿಯಲ್ಲ. ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದರು.

1003011003

ವಿಶೇಷವಾಗಿ ಮಹಿಳೆಯವರು ಅತಿದೊಡ್ಡ ಜವಾಬ್ದಾರಿ ಹೊಂದಿರುತ್ತಾರೆ. ಮನೆಯ ಒಳಗೆ ಮತ್ತು ಹೊರಗೆ ದುಡಿಯಬೇಕಾಗುತ್ತದೆ. ಈ ನಡುವೆ ತಮ್ಮ ಆರೋಗ್ಯವನ್ನೂ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ 2ವರ್ಷಗಳು ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಈ ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ಮು ಮಾಡಿದ್ದು, ಜಿಲ್ಲೆಯಲ್ಲಿ 1160 ಕಂದಾಯ ಗ್ರಾಮಗಳನ್ನು ಗುರುತಿಸಿದ್ದು, ಸದ್ಯದಲ್ಲೇ 22ಸಾವಿರ ಹಕ್ಕುಪತ್ರಗಳನ್ನು ನೀಡಲಿದ್ದೇವೆ. ಇದನ್ನು ನಾವು ಸೃಷ್ಟಿಕೊಂಡಿದ್ದೇವೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ನೂರುನ್ನಿಸಾ ಮಾತನಾಡಿ, ಮಹಿಳೆ ಪುರುಷರಿಗೆ ಸ್ಪರ್ಧಿಯಾಗುವುದು ಬೇಡ, ಮಹಿಳೆಯೇ ತಮ್ಮ ಆತ್ಮ ಸಂತೋಷಕ್ಕಾಗಿ ಕೆಲವು ಜವಾಬ್ದಾರಿಗಳನ್ನು ನಿಭಾಯಿಸಬೇಕಿದೆ ಎಂದರು.

1003011022

ಇಂದಿನ ದಿನಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿದ್ದಾರೆ, ಆದರೆ ಆರ್ಥಿಕ ಸ್ವಾಲಂಭನೆಯನ್ನು ಅನುಭವಿಸುವ ಹಕ್ಕನ್ನು ಜಯಿಸಿಕೊಳ್ಳಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ ಸಿ., ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೆಶಕಿ ಸೌಮ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಿದ್ದರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.

ತುಮಕೂರು ಜಿಲ್ಲೆಯ ಎಲ್ಲ ಮಹಿಳಾ ಅಧಿಕಾರಗಳು ಹಾಗೂ ಮಹಿಳಾ ಸಾಧಕಿಯರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...

ತುಮಕೂರು | ಪಾವನಭೂಮಿ ಆಶಯ ಈಡೇರಿಸಲು ಶ್ರಮಿಸೋಣ : ನುಡಿನಮನ

ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ...