ತುಮಕೂರು | ಬಡ ಜನರ ಬದುಕು ಕಿತ್ತುಕೊಂಡ ಕೇಂದ್ರ ಸರ್ಕಾರ : ಮಯೂರ ಜಯಕುಮಾರ್‌

Date:

ಗ್ರಾಮೀಣ ಬಡಜನರ ಬದುಕಿಗೆ ಆಸರೆಯಾಗಿದ್ದ ನರೇಗಾ ಕಾಯ್ದೆಯನ್ನು ರದ್ದು ಮಾಡಿ, ಅದರ ಬದಲು ವಿಬಿ ಜಿ-ರಾಮ್ ಜಿ ಹೆಸರಿನಲ್ಲಿ ಯೋಜನೆಯೊಂದನ್ನು ಹುಟ್ಟು ಹಾಕಿ, ಬಡ ಜನರ ಬದುಕನ್ನು ಕಿತ್ತುಕೊಂಡಿರುವ ಕೇಂದ್ರ ಸರಕಾರ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಎರಡನೇ ಬಾರಿ ಕೊಲೆ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಮಯೂರ ಜಯಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು

ತುಮಕೂರು ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಕೇಂದ್ರ ಸರಕಾರದ ಉದ್ಯೋಗವನ್ನು ಜನರ ಹಕ್ಕು ಎಂದು ಪ್ರತಿಪಾದಿಸುತಿದ್ದ ನರೇಗಾ ಯೋಜನೆಯನ್ನು ರದ್ದು ಮಾಡಿರುವುದರ ವಿರುದ್ದ ಮತ್ತು ಆಗ್ನೇಯ ಪದವಿಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಜನರ ಕೋರಿಕೆಯ ಮೇರೆಗೆ ಜನರ ಮನೆ ಬಾಗಿಲಲ್ಲಿಯೇ ಉದ್ಯೋಗ ಒದಗಿಸುವ ಹಕ್ಕು ಹೊಂದಿದ್ದ ಎಂ.ಎನ್.ಆರ್.ಇ.ಜಿ.ಎ ಕಾಯ್ದೆಯನ್ನು ಸಂಪೂರ್ಣ ನಿಷ್ಕ್ರೀಯಗೊಳಿಸಿ,ಕಾರ್ಪೋರೇಟ್ ಸಂಸ್ಕೃತಿಗೆ ಬೆಂಬಲವಾಗಿಸುವ ಗುತ್ತಿಗೆ ಆಧಾರಿತ ವಿಬಿ ಜಿ-ರಾಮ್ ಜಿ ಯೋಜನೆ ಜಾರಿಗೆ ತಂದು ಗೋಡ್ಸೆಕಾಯ್ದೆಯನ್ನು ಜಾರಿಗೆತಂದಿದೆ. ಇದರ ವಿರುದ್ದ ಕಾಂಗ್ರೆಸ್‌ ಜನರ ಬಳಿಗೆ ಹೋಗಲಿದೆ ಎಂದರು.

ಯುಪಿಎ ಸರಕಾರ 2005 ರಲ್ಲಿ ಜಾರಿಗೆ ತಂದಿದ್ದ ನರೇಗಾ ಕಾಯ್ದೆಯಲ್ಲಿ ಗಾಂಧಿಯ ಸ್ವರಾಜ್‌ ಕಲ್ಪನೆ ಅಡಗಿತ್ತು. ತಮ್ಮ ಗ್ರಾಮಕ್ಕೆ ಬೇಕಾದ ಎಲ್ಲಾ ಅಭಿವೃದ್ದಿ ಕೆಲಸಗಳನ್ನು ಗ್ರಾಮಸಭೆಗಳಲ್ಲಿ ಚರ್ಚಿಸಿ,ಅದ್ಯತೆಯ ಮೇಲೆ ಕಾಮಗಾರಿ ನೀಡುವ ಗುರುತರ ಜವಾಬ್ದಾರಿಯನ್ನು ಗ್ರಾಮಪಂಚಾಯಿತಿಗಳಿಗೆ ನೀಡಲಾಗಿತ್ತು.ಆದರೆ ಪ್ರಸ್ತುತ ವಿಬಿ ಜಿ-ರಾಮ ಜಿ ಯೋಜನೆಯನ್ನು ಸಂಪೂರ್ಣಕೇಂದ್ರಿಕೃತ ಯೋಜನೆಯಾಗಿದ್ದು, ಎಲ್ಲವನ್ನುಕೇಂದ್ರ ಸರಕಾರವೇ ನಿರ್ಧರಿಸಬೇಕಾಗಿದೆ.ಸ್ಥಳೀಯ ಸಂಸತ್‌ ಎನ್ನುವ ಗ್ರಾಮ ಸಭೆಗಳಿಗೆ ಯಾವ ಬೆಲೆಯೂ ಇಲ್ಲದಂತಾಗಿದೆ. ಇದೊಂದು ಜನವಿರೋಧಿ, ಬಡವರ ವಿರೋಧಿ ಕಾರ್ಯಕ್ರಮವಾಗಿದ್ದು, ಇದನ್ನು ವಾಪಸ್ ಪಡೆಯುವವರೆಗೂ ಕಾಂಗ್ರೆಸ್‌ನ ಹೋರಾಟ ಮುಂದುವರೆಯಲಿದೆ ಎಂದು ಮಯೂರಜಯಕುಮಾರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಂಸದಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ,ನರೇಗಾದಿಂದ ಮಹಾತ್ಮಗಾಂಧಿ ಹೆಸರು ತೆಗೆಯಲು 2014ರಲ್ಲಿಯೇ ಪ್ರಯತ್ನ ನಡೆದಿತ್ತು.ಆದರೆ ವಿರೋಧಪಕ್ಷಗಳಿಂದ ತೀವ್ರಅಕ್ಷೆಪ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಕ್ಷಿಗುಡ್ಡೆಯಾಗಿ ಅದನ್ನು ಉಳಿಸಿದ್ದರು.ಆದರೆ ಈಗ ಹೆಸರು ಬದಲಾಯಿಸುವ ಮೂಲಕ ಗಾಂಧಿ ವಿರೋಧಿಧೋರಣೆಯನ್ನು ಮುಂದುವರೆಸಿದ್ದಾರೆ.ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಷ್ಟಿಗೆ, ಬಡವರ ಬದುಕಿಗೆ ಅಸರೆಯಾಗಿದ್ದ ಎಂಎನ್‌ಆರ್‌ಇಜಿಎ ಪುನರ್ ಸ್ಥಾಪಿಸಬೇಕು ಎಂಬುದು ನಮ್ಮಆಗ್ರಹವಾಗಿ ದೆಎಂದರು.

ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದ ಹೆಸರು ಬದಲಾಯಿಸಿಲ್ಲ.ಯಾವುದೇ ಹೆಸರಿಡದ ಒಳಾಂಗಣ ಕ್ರೀಡಾಂಗಣದ ಹೆಸರನ್ನು ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣ ಎಂದು ಹೆಸರಿಸಲಾಗಿದೆ. ಹೇಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಹುಲ್‌ ದ್ರಾವಿಡ್ ವಾಲ್‌ ಇರುವಂತೆ, ವಾಕಾಂಡೆಯಲ್ಲಿ ಸುನಿಲ್ ಗವಾಸ್ಕರ್ ಸ್ಟಾಂಡ್‌ಇರುವಂತೆ,ಮಹಾತ್ಮಗಾಂಧಿಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣಕ್ಕೆ ಸ್ವತಃ ಕ್ರೀಡಾಪಟುವಾಗಿರುವ,ಇಂದಿಗೂ ತನ್ನ ಹೆಸರಿನಲ್ಲಿ ಅಳಿಸಲಾಗದ ಕೂಟ ದಾಖಲೆ ಹೊಂದಿರುವ ಡಾ.ಜಿ.ಪರಮೇಶ್ವರ್ ಹೆಸರಿಡಲಾಗಿದೆ. ಕ್ಷುಲ್ಲಕ ರಾಜಕಾರಣಕ್ಕೆ ಇದನ್ನು ವಿರೋಧಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ  ಎಂದರು.

ಮುಖಂಡರಾದ ಇಕ್ಬಾಲ್‌ ಅಹಮದ್ ಮಾತನಾಡಿ,ಕಾಂಗ್ರೆಸ್ ಪಕ್ಷದ ಪ್ರತಿಯೊಂದು ಕೆಲಸಗಳಿಗೂ ಬಿಜೆಪಿ ಅಡ್ಡಿ ಪಡಿಸುತ್ತಲೇ ಬಂದಿದೆ.ಕಾನೂನು ಪ್ರಕಾರವೇ ಕಾಂಗ್ರೆಸ್ ಭವನಕ್ಕೆ ಜಾಗ ಮಂಜೂರಾಗಿ,ಖಾತೆ ಮಾಡಿಸಿಕೊಳ್ಳಲು ಹೋದಾಗಲು ಅಡ್ಡಿಪಡಿಸಿದ್ದರು.ಜೊತೆಗೆ, ಕ್ರೀಡಾ ಸಂಸ್ಥೆಗಳು, ಕ್ರೀಡಾಪಟುಗಳ ಕೋರಿಕೆ ಮೇರೆಗೆಕ್ರೀಡಾಪುಟವಾಗಿರುವ ಡಾ.ಜಿ.ಪರಮೇಶ್ವರ್‌ಅವರ ಹೆಸರನ್ನು ಒಳಾಂಗಣ ಕ್ರೀಡಾಂಗಣಕ್ಕೆಇಟ್ಟಿರುವುದನ್ನು ಸಹಿಸದೆ ವಿರೋಧಿಸುತ್ತಿದೆ.ಕಾಂಗ್ರೆಸ್‌ಕಾರ್ಯಕರ್ತರು ಇದಕ್ಕೆ ಪ್ರತಿರೋಧತೋರಬೇಕಿದೆ.ವಿಬಿ ಜಿ ರಾಮ ಜಿ ಹೆಸರಿನಲ್ಲಿ ಬಡವರ ಬದುಕಿಗೆ ಕೊಳ್ಳಿ ಇಟ್ಟು,ಈಗ ಮಹಾತ್ಮಗಾಂಧಿ ಸ್ಟೇಡಿಯಂ ಹೆಸರಿನಲ್ಲಿ ಮೊಸಳೆ ಕಣ್ಣೀರು ಹಾಕುತ್ತಿದೆ.ತಮ್ಮ ತಪ್ಪುಗಳನ್ನು ಮರೆ ಮಾಚಲು ಈ ರೀತಿಯ ನಾಟಕ ಮಾಡುತ್ತಿದೆ ಎಂದರು

.

ಆಗ್ನೇಯ ಪದವಿಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಮಾತನಾಡಿ, ಕಳೆದ 11 ವರ್ಷಗಳಿಂದ ಪಕ್ಷದ ಶಿಸ್ತಿನ ಶಿಫಾಯಿಯಾಗಿ,ಯುವಕಾಂಗ್ರೆಸ್‌ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. 2019ರ ವಿಧಾನ ಸಭೆಗೆ, ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಟಿಕೇಟ್ ಕೇಳಿದ್ದೆ. ಅವಕಾಶ ದೊರೆತಿರಲಿಲ್ಲ.ಈಗ ಪಕ್ಷಚುನಾವಣೆ 10 ತಿಂಗಳ ಮುಂಚೆಯೇ ಟಿಕೇಟ್‌ ಘೋಷಿಸಿದೆ. ಇದರಿಂದ ಪ್ರವಾಸ ಮಾಡಲು ಅನುಕೂಲವಾಗಲಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ನನ್ನಜೊತೆ ಕೈಜೋಡಿಸಿ, ಹೊಸ ಇತಿಹಾಸ ನಿರ್ಮಾಣಕ್ಕೆ ಸಹಕರಿಸಿ, ಪದವಿಧರರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಚಂದ್ರಶೇಖರಗೌಡ ವಹಿಸಿದ್ದರು.

ಮಾಜಿ ಶಾಸಕರಾದ ಡಾ.ರಫೀಕ್‌ಅಹಮದ್, ಕೆ.ಎಸ್.ಕಿರಣಕುಮಾರ್ ಮಾತನಾಡಿದರು.

ವೇದಿಕೆಯಲ್ಲಿ ಡಾ.ಎಸ್.ಷಪಿ ಅಹಮದ್, ಸೂರ್ಯ ಮುಕುಂದರಾಜ್, ಬ್ಲಾಕ್‌ಕಾಂಗ್ರೆಸ್‌ಅಧ್ಯಕ್ಷರಾದ ಫೈಯಾಜ್,ಮಹೇಶ್, ಪಾಲಿಕೆ ಸದಸ್ಯರಾದ ನಯಾಜ್,ಒಬಿಸಿ ಘಟಕದ ಅನಿಲ್,ಕೆಂಚಮಾರಯ್ಯ, ರಾಮಕೃಷ್ಣ,ರೇವಣಸಿದ್ದಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...